AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲುಷಿತ ನೀರು ಸೇವಿಸಿ ದುರಂತ: 5 ಲಕ್ಷ ರೂ ಪರಿಹಾರ ನೀಡುವಂತೆ ಡಿಸಿಗೆ ಸೂಚಿಸಿದ ಸಚಿವ ಆರ್​ಬಿ ತಿಮ್ಮಾಪುರ

Chitradurga News: ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ದುರಂತ ಸಂಭವಿಸಿದೆ. ಮೃತರ ಕುಟುಂಬಗಳಿಗೆ ಯಾವುದೇ ಪರಿಹಾರ ನೀಡಿರಲಿಲ್ಲ. ಇದನ್ನು ತಿಳಿದ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಇಂದೇ 5 ಲಕ್ಷ ರೂ. ಪರಿಹಾರದ ಚೆಕ್‌ ನೀಡುವಂತೆ ಡಿಸಿ ದಿವ್ಯಾಪ್ರಭುಗೆ ಸೂಚನೆ ನೀಡಿದ್ದಾರೆ.

ಕಲುಷಿತ ನೀರು ಸೇವಿಸಿ ದುರಂತ: 5 ಲಕ್ಷ ರೂ ಪರಿಹಾರ ನೀಡುವಂತೆ ಡಿಸಿಗೆ ಸೂಚಿಸಿದ ಸಚಿವ ಆರ್​ಬಿ ತಿಮ್ಮಾಪುರ
ಸಚಿವ ಆರ್‌.ಬಿ.ತಿಮ್ಮಾಪುರ
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಗಂಗಾಧರ​ ಬ. ಸಾಬೋಜಿ

Updated on: Aug 04, 2023 | 8:48 PM

ಚಿತ್ರದುರ್ಗ, ಆಗಸ್ಟ್​ 04: ಕೋಟೆನಾಡು ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ದುರಂತವೇ ನಡೆದು ಹೋಗಿದೆ. ಇಂದು ಕವಾಡಿಗರಹಟ್ಟಿಯ ಆಕ್ರೋಶ ಸ್ಪೋಟಿಸಿದೆ. ಮತ್ತೊಂದು ಕಡೆ ಲ್ಯಾಬ್ ರಿಪೋರ್ಟ್ ಬಹಿರಂಗ ಆಗಿದೆ. ಇವೆಲ್ಲದರ ಮಧ್ಯೆ ಇಂದೇ 5 ಲಕ್ಷ ರೂ. ಪರಿಹಾರದ ಚೆಕ್‌ ನೀಡುವಂತೆ ಡಿಸಿಗೆ ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ (RB Timmapur) ಸೂಚನೆ ನೀಡಿದ್ದಾರೆ. ಮೃತರ ಕುಟುಂಬಕ್ಕೆ ತಲಾ 50 ಸಾವಿರ ರೂ. ವೈಯಕ್ತಿಕ ಸಹಾಯ ಮಾಡಿದ್ದಾರೆ.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ, ಅನುಮಾನವಿದ್ದರೆ ಮತ್ತೆ ತನಿಖೆ ಮಾಡುತ್ತೇವೆ. ಬೇಕಾದರೆ ಮತ್ತೊಮ್ಮೆ ತನಿಖೆ ಮಾಡಿಸೋಣ. ಲ್ಯಾಬ್ ವರದಿ ವೀಕ್ಷಿಸಿದ ಬಳಿಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ನಾಲ್ವರು ಸಾವು ಪ್ರಕರಣ; ನಗರಸಭೆ ಎಇಇ, ಜೆಇ, ವಾಲ್ವ್​ಮ್ಯಾನ್​ ಅಮಾನತು

ತಡವಾಗಿ ಬಂದ ಡಿಸಿ ದಿವ್ಯಾಪ್ರಭುಗೆ ಸಚಿವರ ತರಾಟೆ

ಚಿತ್ರದುರ್ಗ ನಗರದ ಕವಾಡಿಗರಹಟ್ಟಿ ಬಡಾವಣೆಗೆ ಭೇಟಿ ನೀಡಿದ ಸಚಿವ ಆರ್‌.ಬಿ.ತಿಮ್ಮಾಪುರ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಭೇಟಿ ವೇಳೆ ತಡವಾಗಿ ಬಂದ ಡಿಸಿ ದಿವ್ಯಾಪ್ರಭುಗೆ ಸರ್ಕಾರದಿಂದ ಪರಿಹಾರ ಚೆಕ್‌ ವಿತರಿಸಿಲ್ಲ ಏಕೆ ಎಂದು ತರಾಟೆ ತೆಗೆದುಕೊಂಡರು.

ಸಿಎಂಗೆ ಡಿಸಿ ವಿರುದ್ಧ ದೂರು ಹೇಳಿದ ಸಚಿವ ತಿಮ್ಮಾಪುರ

ಸ್ಥಳದಲ್ಲೇ ಸಿಎಂಗೆ ಫೋನ್‌ ಮಾಡಿದ ಅವರು, ಡಿಸಿ ದಿವ್ಯಾಪ್ರಭು ವಿರುದ್ಧ ದೂರು ಹೇಳಿದರು. ಸರ್ಕಾರಕ್ಕೆ ವರದಿ ಕಳಿಸಿದ್ದೇನೆಂದು ಹೇಳುತ್ತಾ ಕುಳಿತಿದ್ದಾರೆಂದು ದೂರಿದ್ದಾರೆ. ವರದಿ ಬರುವವರೆಗೂ ಕಾದು ಕೂರುವುದು ಬೇಡ, ಪರಿಹಾರ ಕೊಡಿ. ಜನರಿಗೆ ಉತ್ತರ ಕೊಡುವವರು ನಾವು, ನೀವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.  ಇಂದೇ ಪರಿಹಾರದ ಚೆಕ್ ನೀಡುವಂತೆ ಸೂಚಿಸಿದ್ದು, ಸರಿ ಸರ್ ಎಲ್ಲವೂ ಸಿದ್ಧವಾಗಿದೆ ಪರಿಹಾರದ ಚೆಕ್ ಕೊಡುತ್ತೇನೆ ಎಂದು ಡಿಸಿ ಹೇಳಿದರು.

ಇದನ್ನೂ ಓದಿ: ಚಿತ್ರದುರ್ಗ- ವಿಷಕಾರಿ ನೀರು ಸೇವನೆಯಿಂದ ಸಾವು, ತಹಸೀಲ್ದಾರ್ ಜತೆ ಪ್ರತಿಭಟನಾಕಾರರ ವಾಗ್ವಾದ

ಪ್ರಕರಣ ಸಂಬಂಧ ಮೃತರ ಕುಟುಂಬಕ್ಕೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಸಾಂತ್ವನ ಹೇಳಿದ್ದು, ವೈಯಕ್ತಿಕವಾಗಿ ಮೃತರ ಕುಟುಂಬಕ್ಕೆ ತಲಾ 50 ಸಾವಿರ ರೂ ಪರಿಹಾರ ನೀಡಿದ್ದಾರೆ. FSL​​ ವರದಿ, ಮರಣೋತ್ತರ ಪರೀಕ್ಷೆ ವರದಿ ನೋಡಿ ಕ್ರಮ ಕೈಗೊಳ್ಳಲಾಗುವುದು. ವಿಷ ಬೆರೆಸಿದ್ದರೆ ವಾಂತಿ ಮಾತ್ರ ಆಗುತ್ತದೆ, ಸಾವು ಸಂಭವಿಸುತ್ತದೆ.

ಕಲುಷಿತ ನೀರಾಗಿದ್ದರೆ ವಾಂತಿ ಭೇದಿ ಆಗುತ್ತದೆ, ಸಾವು ಸಂಭವಿಸಲ್ಲ. ಈ ಘಟನೆ ಬಗ್ಗೆ ಉನ್ನತಮಟ್ಟದ ತನಿಖೆ ಆಗಲಿ. ಯಾರೇ ತಪ್ಪಿತಸ್ಥರಾಗಿದ್ದರೂ ನಿರ್ದಾಕ್ಷಿಣ್ಯ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು