AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ಗಲಾಟೆ: ಹರಿಹರ ಬ್ರಹ್ಮ ಬಂದರೂ ಹಿಂದುತ್ವ ಹತ್ತಿಕ್ಕಲು ಆಗುವುದಿಲ್ಲ; ಶಾಸಕ ಚನ್ನಬಸಪ್ಪ

ಗಲಾಟೆ ಮಾಡಿ ಕಲ್ಲುತೂರಾಟ ಮಾಡಿರುವುದು ಮುಸ್ಲಿಂ ಕಿಡಿಗೇಡಿಗಳು, ಈ ಪ್ರಕರಣದಲ್ಲಿ ಕೆಲವು ವಿದ್ಯಾರ್ಥಿಗಳನ್ನೂ ಬಂಧಿಸಲಾಗಿದೆ. ಹರಿಹರ ಬ್ರಹ್ಮ ಬಂದರೂ ಹಿಂದುತ್ವ ಹತ್ತಿಕ್ಕಲು ಇಂತಹವರಿಂದ ಆಗುವುದಿಲ್ಲ ಎಂದು ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಹೇಳಿದರು.

ಶಿವಮೊಗ್ಗ ಗಲಾಟೆ: ಹರಿಹರ ಬ್ರಹ್ಮ ಬಂದರೂ ಹಿಂದುತ್ವ ಹತ್ತಿಕ್ಕಲು ಆಗುವುದಿಲ್ಲ; ಶಾಸಕ ಚನ್ನಬಸಪ್ಪ
ಎಂಎಲ್​ಎ ಚನ್ನಬಸಪ್ಪ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 05, 2023 | 9:18 PM

Share

ಚಿತ್ರದುರ್ಗ, ಅ.05: ಶಿವಮೊಗ್ಗ (Shivamogga)ದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತ 7 ಜನರನ್ನು ಚಿತ್ರದುರ್ಗ ಜೈಲಿಗೆ ಸ್ಥಳಾಂತರಿಸಿದ್ದಾರೆ. ಈ ಹಿನ್ನಲೆ ಇಂದು(ಅ.05)  ಚಿತ್ರದುರ್ಗ (Chitradurga) ಕಾರಾಗೃಹಕ್ಕೆ ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ (Channabasappa)ಭೇಟಿ ನೀಡಿದ್ದರು. ಆದರೆ, ಕಾರಾಗೃಹದಲ್ಲಿ ಆರೋಪಿಗಳ ಭೇಟಿಗೆ ಸಮಯ ಮೀರಿದ ಹಿನ್ನೆಲೆ ಅಧಿಕಾರಿಗಳು ಭೇಟಿಗೆ ಅವಕಾಶ ನೀಡದ ಕಾರಣ ವಾಪಾಸ್ಸಾದರು. ಈ ವೇಳೆ ಮಾತನಾಡಿದ ಅವರು ‘ಬಂಧಿತ ಆರೋಪಿಗಳನ್ನು ಚಿತ್ರದುರ್ಗ ಜೈಲಿಗೆ ಸ್ಥಳಾಂತರಿಸಿದ್ದು ಏಕೆ ಗೊತ್ತಿಲ್ಲ ಎಂದರು.

ಹರಿಹರ ಬ್ರಹ್ಮ ಬಂದರೂ ಹಿಂದುತ್ವ ಹತ್ತಿಕ್ಕಲು ಆಗುವುದಿಲ್ಲ

ಹೌದು, ಭೇಟಿಗೆ ಅವಕಾಶ ಸಿಗದ ಹಿನ್ನಲೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ‘ಗಲಾಟೆ ಮಾಡಿ ಕಲ್ಲುತೂರಾಟ ಮಾಡಿರುವುದು ಮುಸ್ಲಿಂ ಕಿಡಿಗೇಡಿಗಳು, ಈ ಪ್ರಕರಣದಲ್ಲಿ ಕೆಲವು ವಿದ್ಯಾರ್ಥಿಗಳನ್ನೂ ಬಂಧಿಸಲಾಗಿದೆ. ಹರಿಹರ ಬ್ರಹ್ಮ ಬಂದರೂ ಹಿಂದುತ್ವ ಹತ್ತಿಕ್ಕಲು ಇಂತಹವರಿಂದ ಆಗುವುದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಒಬ್ಬೊಬ್ಬರ ಪರಿಚಯವಾಗುತ್ತದೆ. ಈ ಹಿಂದೆ ಟಿಪ್ಪು ಸುಲ್ತಾನ್ ಆಯ್ತು, ಈಗ ಔರಂಗಜೇಬ್ ಬಂದಿದ್ದಾರೆ.

ಇದನ್ನೂ ಓದಿ:ಶಿವಮೊಗ್ಗದಲ್ಲಿ ಗಲಭೆಗೆ ಕಾರಣರಾದ ಗೂಂಡಾಗಳನ್ನು ಸರ್ಕಾರ ಸುಮ್ಮನೆ ಬಿಡಬಾರದು: ಕೆಎಸ್ ಈಶ್ವರಪ್ಪ

ಸಿದ್ದರಾಮಯ್ಯ ಆಡಳಿತದಲ್ಲೇ ಔರಂಗಜೇಬ್ ಬಂದಿದ್ದಾರೆ

ಸಿಎಂ, ಸಚಿವರ ಮಾತಿನಿಂದ ಇಂತಹ ಕೃತ್ಯಗಳಿಗೆ ಕುಮ್ಮಕ್ಕು ಸಿಕ್ಕಿದೆ. ‘ವೇಷ ಧರಿಸಿ ಬಿಜೆಪಿ ಕಾರ್ಯಕರ್ತರೇ ಕೃತ್ಯವೆಸಗಿದ್ದಾರೆಂಬ ಆರೋಪ ಕೇಳಿಬಂದಿದೆ ಎಂದು  ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದರು. ಅವರು ದೊಡ್ಡವರು, ಯಾಕೆ ಹೀಗೆ ಹೇಳಿದ್ರೋ ಗೊತ್ತಿಲ್ಲ. ಬಿಜೆಪಿಯವರು ಮುಖ ಮುಚ್ಚಿಕೊಂಡು ಹೋರಾಟ ಮಾಡುವ ಸ್ಥಿತಿಯಲ್ಲಿಲ್ಲ. ಏನೇ ಮಾಡಿದರೂ ನೇರವಾಗಿ ಮಾಡುತ್ತೇವೆ. ಸಚಿವರು ಇಂತಹ ಉದ್ಧಟತನದ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಅಧಿಕಾರಿಗಳ ಕೈ ಕಟ್ಟಿಹಾಕದೆ ಫ್ರೀ ಬಿಡಿ, ಕಾನೂನು ಕ್ರಮಕೈಗೊಳ್ಳುತ್ತಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು