AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ಗಲಾಟೆ: ಹರಿಹರ ಬ್ರಹ್ಮ ಬಂದರೂ ಹಿಂದುತ್ವ ಹತ್ತಿಕ್ಕಲು ಆಗುವುದಿಲ್ಲ; ಶಾಸಕ ಚನ್ನಬಸಪ್ಪ

ಗಲಾಟೆ ಮಾಡಿ ಕಲ್ಲುತೂರಾಟ ಮಾಡಿರುವುದು ಮುಸ್ಲಿಂ ಕಿಡಿಗೇಡಿಗಳು, ಈ ಪ್ರಕರಣದಲ್ಲಿ ಕೆಲವು ವಿದ್ಯಾರ್ಥಿಗಳನ್ನೂ ಬಂಧಿಸಲಾಗಿದೆ. ಹರಿಹರ ಬ್ರಹ್ಮ ಬಂದರೂ ಹಿಂದುತ್ವ ಹತ್ತಿಕ್ಕಲು ಇಂತಹವರಿಂದ ಆಗುವುದಿಲ್ಲ ಎಂದು ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಹೇಳಿದರು.

ಶಿವಮೊಗ್ಗ ಗಲಾಟೆ: ಹರಿಹರ ಬ್ರಹ್ಮ ಬಂದರೂ ಹಿಂದುತ್ವ ಹತ್ತಿಕ್ಕಲು ಆಗುವುದಿಲ್ಲ; ಶಾಸಕ ಚನ್ನಬಸಪ್ಪ
ಎಂಎಲ್​ಎ ಚನ್ನಬಸಪ್ಪ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 05, 2023 | 9:18 PM

Share

ಚಿತ್ರದುರ್ಗ, ಅ.05: ಶಿವಮೊಗ್ಗ (Shivamogga)ದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತ 7 ಜನರನ್ನು ಚಿತ್ರದುರ್ಗ ಜೈಲಿಗೆ ಸ್ಥಳಾಂತರಿಸಿದ್ದಾರೆ. ಈ ಹಿನ್ನಲೆ ಇಂದು(ಅ.05)  ಚಿತ್ರದುರ್ಗ (Chitradurga) ಕಾರಾಗೃಹಕ್ಕೆ ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ (Channabasappa)ಭೇಟಿ ನೀಡಿದ್ದರು. ಆದರೆ, ಕಾರಾಗೃಹದಲ್ಲಿ ಆರೋಪಿಗಳ ಭೇಟಿಗೆ ಸಮಯ ಮೀರಿದ ಹಿನ್ನೆಲೆ ಅಧಿಕಾರಿಗಳು ಭೇಟಿಗೆ ಅವಕಾಶ ನೀಡದ ಕಾರಣ ವಾಪಾಸ್ಸಾದರು. ಈ ವೇಳೆ ಮಾತನಾಡಿದ ಅವರು ‘ಬಂಧಿತ ಆರೋಪಿಗಳನ್ನು ಚಿತ್ರದುರ್ಗ ಜೈಲಿಗೆ ಸ್ಥಳಾಂತರಿಸಿದ್ದು ಏಕೆ ಗೊತ್ತಿಲ್ಲ ಎಂದರು.

ಹರಿಹರ ಬ್ರಹ್ಮ ಬಂದರೂ ಹಿಂದುತ್ವ ಹತ್ತಿಕ್ಕಲು ಆಗುವುದಿಲ್ಲ

ಹೌದು, ಭೇಟಿಗೆ ಅವಕಾಶ ಸಿಗದ ಹಿನ್ನಲೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ‘ಗಲಾಟೆ ಮಾಡಿ ಕಲ್ಲುತೂರಾಟ ಮಾಡಿರುವುದು ಮುಸ್ಲಿಂ ಕಿಡಿಗೇಡಿಗಳು, ಈ ಪ್ರಕರಣದಲ್ಲಿ ಕೆಲವು ವಿದ್ಯಾರ್ಥಿಗಳನ್ನೂ ಬಂಧಿಸಲಾಗಿದೆ. ಹರಿಹರ ಬ್ರಹ್ಮ ಬಂದರೂ ಹಿಂದುತ್ವ ಹತ್ತಿಕ್ಕಲು ಇಂತಹವರಿಂದ ಆಗುವುದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಒಬ್ಬೊಬ್ಬರ ಪರಿಚಯವಾಗುತ್ತದೆ. ಈ ಹಿಂದೆ ಟಿಪ್ಪು ಸುಲ್ತಾನ್ ಆಯ್ತು, ಈಗ ಔರಂಗಜೇಬ್ ಬಂದಿದ್ದಾರೆ.

ಇದನ್ನೂ ಓದಿ:ಶಿವಮೊಗ್ಗದಲ್ಲಿ ಗಲಭೆಗೆ ಕಾರಣರಾದ ಗೂಂಡಾಗಳನ್ನು ಸರ್ಕಾರ ಸುಮ್ಮನೆ ಬಿಡಬಾರದು: ಕೆಎಸ್ ಈಶ್ವರಪ್ಪ

ಸಿದ್ದರಾಮಯ್ಯ ಆಡಳಿತದಲ್ಲೇ ಔರಂಗಜೇಬ್ ಬಂದಿದ್ದಾರೆ

ಸಿಎಂ, ಸಚಿವರ ಮಾತಿನಿಂದ ಇಂತಹ ಕೃತ್ಯಗಳಿಗೆ ಕುಮ್ಮಕ್ಕು ಸಿಕ್ಕಿದೆ. ‘ವೇಷ ಧರಿಸಿ ಬಿಜೆಪಿ ಕಾರ್ಯಕರ್ತರೇ ಕೃತ್ಯವೆಸಗಿದ್ದಾರೆಂಬ ಆರೋಪ ಕೇಳಿಬಂದಿದೆ ಎಂದು  ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದರು. ಅವರು ದೊಡ್ಡವರು, ಯಾಕೆ ಹೀಗೆ ಹೇಳಿದ್ರೋ ಗೊತ್ತಿಲ್ಲ. ಬಿಜೆಪಿಯವರು ಮುಖ ಮುಚ್ಚಿಕೊಂಡು ಹೋರಾಟ ಮಾಡುವ ಸ್ಥಿತಿಯಲ್ಲಿಲ್ಲ. ಏನೇ ಮಾಡಿದರೂ ನೇರವಾಗಿ ಮಾಡುತ್ತೇವೆ. ಸಚಿವರು ಇಂತಹ ಉದ್ಧಟತನದ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಅಧಿಕಾರಿಗಳ ಕೈ ಕಟ್ಟಿಹಾಕದೆ ಫ್ರೀ ಬಿಡಿ, ಕಾನೂನು ಕ್ರಮಕೈಗೊಳ್ಳುತ್ತಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ