AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ತಾಯಿಯಿಂದಲೇ ಮರಳಿ ಹಿಂದೂ ಧರ್ಮಕ್ಕೆ ಸೇರುವ ಅಭಿಯಾನ ಆರಂಭ; ಶಾಸಕ ಗೂಳಿಹಟ್ಟಿ ಶೇಖರ್

ಸದನದಲ್ಲಿ ಮತಾಂತರದ ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ನನ್ನ ವಿರುದ್ಧ ಮಿಷಿನರಿಗಳು, ಕೆಲ ಸಂಘಟನೆಗಳು ಕಿಡಿಕಾರಿವೆ. ಹುಟ್ಟಿನಿಂದ ಕ್ರೈಸ್ತರಾಗಿದ್ದವರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಆದರೆ ಮತಾಂತರದ ವಿರುದ್ಧ ನನ್ನ ಹೋರಾಟ ನಡೆಯಲಿದೆ ಎಂದು ತಿಳಿಸಿದರು.

ನನ್ನ ತಾಯಿಯಿಂದಲೇ ಮರಳಿ ಹಿಂದೂ ಧರ್ಮಕ್ಕೆ ಸೇರುವ ಅಭಿಯಾನ ಆರಂಭ; ಶಾಸಕ ಗೂಳಿಹಟ್ಟಿ ಶೇಖರ್
ಮರಳಿ ಹಿಂದೂ ಧರ್ಮ ಸ್ವೀಕಾರ
TV9 Web
| Edited By: |

Updated on: Oct 10, 2021 | 6:00 PM

Share

ಚಿತ್ರದುರ್ಗ: ಇತ್ತೀಚಿಗಷ್ಟೇ ವಿಧಾನಸಭಾ ಅಧಿವೇಶನದಲ್ಲಿ ತಮ್ಮ ತಾಯಿಯೇ ಮತಾಂತರವಾಗಿರುವುದನ್ನು ನೆನೆದು ಕಣ್ಣೊದ್ದೆ ಮಾಡಿಕೊಂಡಿದ್ದರು ಶಾಸಕ ಗೂಳಿಹಟ್ಟಿ ಶೇಖರ್. ಇದೀಗ ಅವರ ನೇತೃತ್ವದಲ್ಲಿ ಹಿಂದೂ ಧರ್ಮದಿಂದ ಅನ್ಯಧರ್ಮಕ್ಕೆ ಮತಾಂತರವಾದ ಕುಟುಂಬವೊಂದು ಹಿಂದೂ ಧರ್ಮ ಮರಳಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಹಾಲುರಾಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಕುಟುಂಬವೊಂದು ಹಿಂದೂ ಧರ್ಮ ಸ್ವೀಕರಿಸಿದೆ.

ಈಕುರಿತು ಟಿವಿ9 ಕನ್ನಡದ ಜತೆ ಮಾತನಾಡಿದ ಶಾಸಕ ಗೂಳಿಹಟ್ಟಿ ಶೇಖರ್, ನಮ್ಮ ತಾಯಿಯಿಂದಲೇ ‘ಘರ್ ವಾಪಸಿ’ ಆರಂಭಿಸಿದ್ದೇವೆ. ಸದ್ಯ ನಮ್ಮ ತಾಯಿ ಮತ್ತು ನನ್ನ ಸಹೋದರನ ಮನೆಯಲ್ಲಿದ್ದಾರೆ. ಪೂಜೆ ಪುನಸ್ಕಾರ ಮಾಡಿಕೊಂಡು ಸಹಜ ಸ್ಥಿತಿಗೆ ಮರಳಿದ್ದಾರೆ ಇಂದು ಹಾಲುರಾಮೇಶ್ವರದಲ್ಲಿ ಕೆಲವರು ಹಿಂದೂ ಧರ್ಮಕ್ಕೆ ಮರಳಿದ್ದಾರೆ. ಬಲ್ಲಾಳ ಸಮುದ್ರ ಗ್ರಾಮದ ಕೆಲವರು ಸ್ವಧರ್ಮಕ್ಕೆ ಮರಳಿದ್ದಾರೆ. ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುವ ಕೆಲಸ ನಡೆಯುತ್ತಿದೆ. ಆರೋಗ್ಯ ಮತ್ತಿತರೆ ಸಂಕಷ್ಟಕ್ಕೆ ಸಿಲುಕಿದವರಿಗೆ ಬಲೆಬೀಸಿ ಮತಾಂತರ ನಡೆಯುತ್ತಿದೆ. ಹಿಂದೂ ಧರ್ಮಕ್ಕೆ ಹೋದರೆ ಕೇಡಾಗುತ್ತದೆಂದು ಭೀತಿ ಸೃಷ್ಠಿಸಲಾಗುತ್ತಿದೆ. ಸದನದಲ್ಲಿ ಮತಾಂತರದ ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ನನ್ನ ವಿರುದ್ಧ ಮಿಷಿನರಿಗಳು, ಕೆಲ ಸಂಘಟನೆಗಳು ಕಿಡಿಕಾರಿವೆ. ಹುಟ್ಟಿನಿಂದ ಕ್ರೈಸ್ತರಾಗಿದ್ದವರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಆದರೆ ಮತಾಂತರದ ವಿರುದ್ಧ ನನ್ನ ಹೋರಾಟ ನಡೆಯಲಿದೆ ಎಂದು ತಿಳಿಸಿದರು.

ಇದನ್ನೂ ಓದಿ:

ಚಿತ್ರದುರ್ಗ: ಮತಾಂತರ ಆರೋಪ; ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿ ದೂರಿದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್

Anti Conversion Law: ಮತಾಂತರ ವಿರೋಧಿ ಕಾನೂನು ತರುವ ರೀತಿ ಇದಲ್ಲ; ಕಾರಣ ಇಲ್ಲಿದೆ ನೋಡಿ

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?