Nayakanahatti Thipperudra Swamy Teppotsavam: ತಿಪ್ಪೇರುದ್ರಸ್ವಾಮಿ ತೆಪ್ಪೋತ್ಸವದಲ್ಲಿ ಜನ ಸಾಮಾನ್ಯರಂತೆ ಕೆರೆಯಲ್ಲಿ ಇಳಿದು ಸಂಭ್ರಮಿಸಿದ ಶಾಸಕ ಶ್ರೀರಾಮುಲು

Edited By: ಕಿರಣ್ ಹನುಮಂತ್​ ಮಾದಾರ್

Updated on: Dec 03, 2022 | 10:05 AM

ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಐತಿಹಾಸಿಕ ಹಿರೇಕೆರೆಯಲ್ಲಿ ಈ ಅದ್ಧೂರಿಯಾಗಿ ಗುರು ತಿಪ್ಪೇರುದ್ರಸ್ವಾಮಿ ತೆಪ್ಪೋತ್ಸವ ನಡೆದಿದೆ.

1 / 6
ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಹಿರೇಕೆರೆಯಲ್ಲಿ ಈ ವರ್ಷ ಭರ್ತಿ ಮಳೆ ಸುರಿದಿದ್ದು, ಇದೇ ಸಂದರ್ಭದಲ್ಲಿ ಐತಿಹಾಸಿಕ ಹಿರೇಕೆರೆಯಲ್ಲಿ ತಿಪ್ಪೇರುದ್ರಸ್ವಾಮಿ ತೆಪ್ಪೋತ್ಸವ ನಡೆದಿದೆ. ಸಾವಿರಾರು ಜನರು ತೆಪ್ಪೋತ್ಸವದಲ್ಲಿ ಭಾಗಿಯಾಗಿದ್ದಾರೆ.

ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಹಿರೇಕೆರೆಯಲ್ಲಿ ಈ ವರ್ಷ ಭರ್ತಿ ಮಳೆ ಸುರಿದಿದ್ದು, ಇದೇ ಸಂದರ್ಭದಲ್ಲಿ ಐತಿಹಾಸಿಕ ಹಿರೇಕೆರೆಯಲ್ಲಿ ತಿಪ್ಪೇರುದ್ರಸ್ವಾಮಿ ತೆಪ್ಪೋತ್ಸವ ನಡೆದಿದೆ. ಸಾವಿರಾರು ಜನರು ತೆಪ್ಪೋತ್ಸವದಲ್ಲಿ ಭಾಗಿಯಾಗಿದ್ದಾರೆ.

2 / 6

ದಶಕದ ಬಳಿಕ ಈವರ್ಷ ಹಿರೇಕೆರೆ ತುಂಬಿ ಕೋಡಿ ಬಿದ್ದಿದೆ. ಹೀಗಾಗಿ, ಗ್ರಾಮದ ಜನರು, ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇಗುಲದ ಭಕ್ತರು ವಿಶೇಷ ತೆಪ್ಪೋತ್ಸವ ಆಯೋಜಿಸಿದ್ದರು.

3 / 6

ಹಿರೇಕೆರೆಯಲ್ಲಿ ಅದ್ಧೂರಿಯಾಗಿ ಗುರು ತಿಪ್ಪೇರುದ್ರಸ್ವಾಮಿ ತೆಪ್ಪೋತ್ಸವ ನಡೆದಿದ್ದು, ತೆಪ್ಪೋತ್ಸವಕ್ಕೆ ಮೊಳಕಾಲ್ಮೂರು ಕ್ಷೇತ್ರದ ಶಾಸಕರು ಆಗಿರುವ ಸಾರಿಗೆ ಸಚಿವ ಬಿ.ಶ್ರೀರಾಮುಲು ಖುದ್ದಾಗಿ ತೆಪ್ಪೋತ್ಸವದಲ್ಲಿ ಭಕ್ತನಾಗಿ ಭಾಗಿಯಾಗಿ ತೆಪ್ಪೋತ್ಸವಕ್ಕೆ ದಾರಿ ಮಾಡಿಕೊಡುವ ಕೆಲಸ ಮಾಡಿದರು.

4 / 6

ಈ ಭಾಗಕ್ಕೆ ಭಗೀರಥನಂತೆ ಬಂದ ಸಂತ ಗುರು ತಿಪ್ಪೇರುದ್ರಸ್ವಾಮಿ ‘ಮಾಡಿದಷ್ಟು ನೀಡು ಭೀಕ್ಷೆ' ಎಂಬ ನುಡಿಯೊಂದಿಗೆ ಜನರನ್ನು ಒಳಗೂಡಿಸಿಕೊಂಡು ಏಳು ಕೆರೆಗಳನ್ನು ನಿರ್ಮಿಸಿದ್ದರು. ಗರ್ಭಿಣಿಯರಿಗೆ ಒಂದೂವರೆ ಪಟ್ಟು ಕೂಲಿ ಕೊಟ್ಟಿದ್ದರು ಎಂಬ ಪ್ರತೀತಿಯಿದೆ.

5 / 6

ಆ ಮೂಲಕ ಈ ಭಾಗದ ಜನರ ಪಾಲಿಗೆ ಭಗೀರಥನಾಗಿ ಕಷ್ಟ ಕಾರ್ಪಣ್ಯಗಳಿಗೆ ಪರಿಹಾರ ನೀಡಿ ದೈವತ್ವಕ್ಕೇರಿದರು ಎಂಬ ನಂಬಿಕೆಯಿದೆ. ಅಂತೆಯೇ ನಾಯಕನಹಟ್ಟಿಯಲ್ಲಿ ಇಂದಿಗೂ ಗುರು ತಿಪ್ಪೇರುದ್ರಸ್ವಾಮಿ ಭವ್ಯ ದೇಗುಲವಿದ್ದು ಲಕ್ಷಾಂತರ ಜನ ಭಕ್ತರು ಜಾತ್ರೆಗೆ ಸೇರುತ್ತಾರೆ.

6 / 6

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದ ನಾಯಕನಹಟ್ಟಿಯ ಹಿರೇಕರೆಯ ತೆಪ್ಪೋತ್ಸವ ಅದ್ಧೂರಿಯಾಗಿ ನಡೆದಿದೆ. ಸಚಿವರಿಂದ ಹಿಡಿದು ಜನ ಸಾಮಾನ್ಯರವರೆಗೆ ಸಾಗರೋಪಾದಿಯಲ್ಲಿ ಜನರು ಭಾಗಿಯಾಗಿದ್ದಾರೆ. ತೆಪ್ಪೋತ್ಸವದ ಸಂಭ್ರಮದೊಂದಿಗೆ ಗುರು ತಿಪ್ಪೇರುದ್ರಸ್ವಾಮಿಗೆ ನಮಿಸಿ ಕೃತಾರ್ಥ ಭಾವ ಅನುಭವಿಸಿದ್ದಾರೆ.

Loading...
Unable to load recommendations.
Follow Us