AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರುಘಾಮಠದ SJM ವಿಶ್ವವಿದ್ಯಾಲಯಕ್ಕೆ ಸರ್ಕಾರದ ಪ್ರತಿನಿಧಿ ನಾಮ ನಿರ್ದೇಶನ: ಬಿಜೆಪಿ MLC ಕೆ.ಎಸ್.ನವೀನ್ ನೇಮಕ

ಚಿತ್ರದುರ್ಗದ ಮುರುಘಾಮಠದ ಅಧೀನದಲ್ಲಿರುವ ಎಸ್​​ಜೆಎಂ ವಿಶ್ವವಿದ್ಯಾಲಯಕ್ಕೆ ಸರ್ಕಾರದ ಪ್ರತಿನಿಧಿಯಾಗಿ ಬಿಜೆಪಿ ಎಂಎಲ್​ಸಿ ಕೆ.ಎಸ್.ನವೀನ್​ ನಾಮ ನಿರ್ದೇಶನಗೊಂಡಿದ್ದಾರೆ.

ಮುರುಘಾಮಠದ SJM ವಿಶ್ವವಿದ್ಯಾಲಯಕ್ಕೆ ಸರ್ಕಾರದ ಪ್ರತಿನಿಧಿ ನಾಮ ನಿರ್ದೇಶನ: ಬಿಜೆಪಿ MLC ಕೆ.ಎಸ್.ನವೀನ್ ನೇಮಕ
SJM College
TV9 Web
| Edited By: ವಿವೇಕ ಬಿರಾದಾರ|

Updated on:Dec 05, 2022 | 6:54 PM

Share

ಚಿತ್ರದುರ್ಗ: ಚಿತ್ರದುರ್ಗದ ಮುರುಘಾಮಠದ (murugha mutt) ಅಧೀನದಲ್ಲಿರುವ ಶ್ರೀ ಜಗದ್ಗುರು ಮುರುಘರಾಜೇಂದ್ರ ವಿಶ್ವವಿದ್ಯಾಲಯಕ್ಕೆ (SJM) ಸರ್ಕಾರದ ಬೋರ್ಡ್ ಆಫ್ ಗವರ್ನರ್ಸ್ ಆಗಿ ಬಿಜೆಪಿಯ ವಿಧಾನಪರಿಷತ್ ಕೆ.ಎಸ್.ನವೀನ್​ ನಾಮ ನಿರ್ದೇಶನಗೊಂಡಿದ್ದಾರೆ. ಸರ್ಕಾರದ ಅಧೀನ ಕಾರ್ಯದರ್ಶಿ ನಂದಕುಮಾರ್ ಆದೇಶ ಹೊರಡಿಸಿದ್ದಾರೆ.

ಮುರುಘಾಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ; ನ್ಯಾಯ ಕೊಡಿಸಿ ಇಲ್ಲಾ ದಯಾಮರಣ ನೀಡಿ ಎಂದು ರಾಷ್ಟ್ರಪತಿಗೆ ಮತ್ತೊಂದು ಪತ್ರ ಬರೆದ ಬಾಲಕಿಯರ ತಾಯಿ

ಮೈಸೂರು: ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ‌ ಮುರ್ಮು ಅವರಿಗೆ ಬಾಲಕಿಯರ ತಾಯಿ ಪತ್ರ ಬರೆದಿದ್ದಾರೆ. ‘ನ್ಯಾಯ ಕೊಡಿಸಿ ಇಲ್ಲಾ ದಯಾಮರಣ ನೀಡಿ, ತಳಮಟ್ಟದ ಸಮುದಾಯಗಳ ಮಹಿಳಾ ಪ್ರತಿನಿಧಿ ನೀವಾಗಿದ್ದೀರಿ, ನಮ್ಮಂತವರ ತಾಯಿ ಸ್ಥಾನದಲ್ಲಿರುವ ನೀವು ನಮಗೆ ನ್ಯಾಯ ಕೊಡಿಸಿ ಎಂದು ಬರೆದಿದ್ದಾರೆ.

ಸ್ವಾಮಿಜಿಯಿಂದ ಯಾವ ಕೆಟ್ಟ ಕೃತ್ಯ ನಡೆದಿಲ್ಲ. ಎಲ್ಲ ನಿಮ್ಮ ಹಾಗೂ ನಿಮ್ಮ ಮಕ್ಕಳ ಷಡ್ಯಂತ್ರ ಕೆಲವು ಅಧಿಕಾರಿಗಳು ಈ ರೀತಿ ನಿರ್ಧಾರಕ್ಕೆ ಬಂದಿದ್ದಾರೆ. ಪ್ರಕರಣ ದಾಖಲಾದ ನಂತರ ನಾನು ನನ್ನ ಮಕ್ಕಳು ಆಶ್ರಯ ಕಳೆದುಕೊಂಡಿದ್ದೇವೆ. ಊಟ ಆಶ್ರಯ ಇಲ್ಲದಂತಾಗಿದೆ. ಆಶ್ರಯ ಕೊಡುವವರನ್ನು ಅನುಮಾನದಿಂದ ನೋಡಲಾಗುತ್ತಿದೆ. ‘ಭೇಟಿ ಪಡಾವೋ ಭೇಟಿ ಬಚಾವೋ’ ನಗೆಪಾಟಲಿಗೀಡಾಗುತ್ತಿದೆ. ನಮಗೆ ನ್ಯಾಯ ಕೊಡಿಸಿ ಎಂದು ಬಾಲಕಿಯರ ತಾಯಿ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಜಿಲ್ಲೆಯ ಪ್ರಸಿದ್ಧ ಮಠವಾಗಿದ್ದ ಮುರುಘಾ ಮಠದಲ್ಲಿ ನಡೆಯಬಾರದ ಅನಾಚಾರ ನಡೆದಿದೆ. ಮುರುಘಾಶ್ರೀ ವಿರುದ್ಧ ಎರಡು ಫೋಕ್ಸೋ ಪ್ರಕರಣಗಳು ದಾಖಲಾಗಿದ್ದು ಕಾವಿಧಾರಿಯ ಕಾಮರಾಕ್ಷಸತನವನ್ನ ಕಂಡು ಇಡೀ ರಾಜ್ಯ ಬೆಚ್ಚಿಬಿದ್ದಿದೆ. ಇಡೀ ಕಾವಿ ಕುಲವನ್ನೇ ಅನುಮಾನದಿಂದ ನೋಡುವಂತೆ ಮಾಡಿದೆ. ಎಲ್ಲ ಕಳೆದುಕೊಂಡು ತಮ್ಮ ಆಶ್ರಯಕ್ಕೆ ಬಂದಿದ್ದ ಮಕ್ಕಳನ್ನು ತಂದೆಯಂತೆ ಪೊರೆಯಬೇಕಿದ್ದ ವ್ಯಕ್ತಿಯೇ ಕಾಮಪಿಪಾಸೆ ತಣಿಸಿಕೊಳ್ಳಲು ಬಳಸಿಕೊಂಡು ಕ್ರೌರ್ಯ ಮೆರೆದಿದ್ದಾರೆ. ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಕ್ಸೋ ಪ್ರಕರಣ ಎದುರಿಸುತ್ತಿರುವ ಮುರುಘಾ ಶರಣರು ಇಂದು ಸೆರೆಮನೆ ವಾಸದಲ್ಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:51 pm, Mon, 5 December 22

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!