AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ಮಗನಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆಗೆ ಯತ್ನ! ಮಗು ಸಾವು, ಬದುಕುಳಿದ ತಾಯಿ

ಪತಿ ವಕೀಲ ಲೋಕೇಶ್ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ವಿಷ ಸೇವನೆ ಬಳಿಕ ವನಿತಾ ತವರೂರಾದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋಡಿಹಳ್ಳಿ ಗ್ರಾಮಕ್ಕೆ ಹೊರಟಿದ್ದರು.

ಚಿತ್ರದುರ್ಗದಲ್ಲಿ ಮಗನಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆಗೆ ಯತ್ನ! ಮಗು ಸಾವು, ಬದುಕುಳಿದ ತಾಯಿ
ಮೃತ ಮಗು, ತಾಯಿ ವನಿತಾ
TV9 Web
| Edited By: sandhya thejappa|

Updated on: Dec 01, 2021 | 11:03 AM

Share

ಚಿತ್ರದುರ್ಗ: ಮಗನಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ನಗರದ ಬಸವೇಶ್ವರ ನಗರದಲ್ಲಿ ನಡೆದಿದೆ. ವಿಷ ಸೇವಿಸಿದ ನಾಲ್ಕು ವರ್ಷದ ಮಗು ಚಿತ್ರದುರ್ಗದಲ್ಲಿರುವ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ತಾಯಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪತಿ ಕಿರುಕುಳದಿಂದ ಬೇಸತ್ತು ವನಿತಾ ಎಂಬ ಮಹಿಳೆ ತನ್ನ ನಾಲ್ಕು ವರ್ಷದ ಕಂದಮ್ಮಗೆ ವಿಷವುಣಿಸಿ ತಾನೂ ವಿಷ ಸೇವಿಸಿದ್ದಾರೆ. ಆದರೆ ಮಗು ಮೃತಪಟ್ಟಿದ್ದು, ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪತಿ ವಕೀಲ ಲೋಕೇಶ್ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ವಿಷ ಸೇವನೆ ಬಳಿಕ ವನಿತಾ ತವರೂರಾದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋಡಿಹಳ್ಳಿ ಗ್ರಾಮಕ್ಕೆ ಹೊರಟಿದ್ದರು. ಚಿತ್ರದುರ್ಗಕ್ಕೆ ಬಂದು ಆಸ್ಪತ್ರೆಗೆ ತೆರಳಿದಾಗ ಮಗು ಚಾರ್ವಿತ್(04) ಸಾವನ್ನಪ್ಪಿದೆ. ಸದ್ಯ ಬಸವೇಶ್ವರ ಆಸ್ಪತ್ರೆಯಲ್ಲಿ ತಾಯಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಟೈರ್ ಸ್ಫೋಟಗೊಂಡು ಪ್ರಯಾಣಿಕ ಸಾವು ಟೈರ್ ಸ್ಫೋಟಗೊಂಡು ಆಟೋ ಪಲ್ಟಿಯಾಗಿದ್ದು, ಪ್ರಯಾಣಿಕ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಮ್ಮನಹಳ್ಳಿ ಸಂಭವಿಸಿದೆ. ಬೇಡರೆಡ್ಡಿಹಳ್ಳಿಯ ನಾಗರಾಜ್(35) ಮೃತ ದುರ್ದೈವಿ. ಆಟೋದಲ್ಲಿ ಶೇಂಗಾ ಚೀಲ ಸಾಗಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಇದನ್ನೂ ಓದಿ

Political Analysis: ಉತ್ತರ ಪ್ರದೇಶದಲ್ಲೀಗ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯದ್ದೇ ಮಾತು, ಇದರ ರಾಜಕೀಯ ಲಾಭ ಪಡೆದುಕೊಳ್ಳಲು ಬಿಜೆಪಿಗೆ ಸಾಧ್ಯವಾಗುವುದೇ?

ಕಲ್ಪತರು ನಾಡಲ್ಲಿ ಅಚ್ಚರಿ ಘಟನೆ; 3 ತಿಂಗಳ ಹಿಂದೆ ಮೃತಪಟ್ಟಿದ್ದ ವ್ಯಕ್ತಿ ದಿಢೀರ್ ಪ್ರತ್ಯಕ್ಷ, ತಿಥಿ ಕಾರ್ಯ ಮುಗಿಸಿ ಸುಮ್ಮನಿಂದ ಕುಟುಂಬಸ್ಥರಲ್ಲಿ ಸಂತೋಷ, ಆತಂಕ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!