AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರುಘಾ ಶ್ರೀ ವಿರುದ್ಧ ಪಿತೂರಿ ಪ್ರಕರಣ: ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್‌ಗೆ ಜಾಮೀನು

ಬಾಲಕಿಯರಿಗೆ ದೂರು ನೀಡಲು ಪ್ರಚೋದಿಸಿ ಮುರುಘಾಶ್ರೀ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿಗೆ ಜಾಮೀನು ಸಿಕ್ಕಿದೆ.

ಮುರುಘಾ ಶ್ರೀ ವಿರುದ್ಧ ಪಿತೂರಿ ಪ್ರಕರಣ:  ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್‌ಗೆ ಜಾಮೀನು
ಮುರುಘಾ ಶ್ರೀ ಮತ್ತು ಎಸ್.ಕೆ.ಬಸವರಾಜನ್‌
TV9 Web
| Edited By: |

Updated on: Dec 22, 2022 | 6:37 PM

Share

ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ (Chitradurga Muruga Mutt) ಶಿವಮೂರ್ತಿ ಶರಣರ ವಿರುದ್ಧ ಷಡ್ಯಂತ್ರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್‌ಗೆ ಕೊನೆ ಜಾಮೀನು (Bail)ಸಿಕ್ಕಿದೆ. ಇಂದು(ಡಿಸೆಂಬರ್ 22) ಕರ್ನಾಟಕ ಹೈಕೋರ್ಟ್ (Karnataka High Court) ಏಕಸದಸ್ಯ ಪೀಠದಿಂದ ಜಾಮೀನು ದೊರೆತಿದೆ.

ಬಾಲಕಿಯರಿಗೆ ದೂರು ನೀಡಲು ಪ್ರಚೋದಿಸಿ ಮುರುಘಾಶ್ರೀ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎಂದು ಸವಪ್ರಭು ಸ್ವಾಮೀಜಿ, ಎಸ್.ಕೆ.ಬಸವರಾಜನ್‌ ವಿರುದ್ಧ ದೂರು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವರಾಜನ್​ಗೆ ಚಿತ್ರದುರ್ಗದ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ಹೈಕೋರ್ಟ್​ಗೆ ಜಾಮೀನಿ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಮುರುಘಾಶ್ರೀ ವಿರುದ್ಧ ಪಿತೂರಿ ಪ್ರಕರಣ: ಸೌಭಾಗ್ಯ ಬಸವರಾಜನ್ ಅರೆಸ್ಟ್

ಇಂದು ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ಏಕಸದಸ್ಯ ಪೀಠದ ನ್ಯಾ.ಎಸ್.ರಾಚಯ್ಯ ಅವರು ಬಸವರಾಜನ್​ಗೆ ಜಾಮೀನು ನೀಡಿ ಆದೇಶ ಹೊರಡಿಸಿದರು.

ಗಂಡ-ಹೆಂಡ್ತಿ ಬಂಧನ

ಮುರುಘಾ ಮಠದಲ್ಲಿ 47 ಫೋಟೋ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಫೋಟೋ ಕಳ್ಳತನಕ್ಕೆ ಪ್ರಚೋದನೆ ಹಾಗೂ ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪದ ಮೇಲೆ  ಬಸವರಾಜನ್‌ ಹಾಗೂ ಸೌಭಾಗ್ಯ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ನ.9 ರಂದು ದೂರು ದಾಖಲಾಗಿದ್ದು, ಮರುದಿನ ಅಂದರೆ ನ.10 ರಂದು ಬಸವರಾಜನ್‌ ಅವರನ್ನು ಬಂಧಿಸಲಾಗಿತ್ತು. ಆದರೆ, ಸೌಭಾಗ್ಯ ತಲೆ ಮರೆಸಿಕೊಂಡಿದ್ದರು. ಬಳಿಕ ಡಿಸೆಂಬರ್ 16ರಂದು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಸೌಭಾಗ್ಯ ಅವರನ್ನು ದಾವಣಗೆರೆಯಲ್ಲಿ ಬಂಧಿಸಿದ್ದರು.

ಮಾಜಿ ಶಾಸಕರಾಗಿರುವ ಬಸವರಾಜನ್ ಅವರು ಮುರುಘಾ ಮಠದ ಮಾಜಿ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 2008ರಲ್ಲಿ ಇವರು ಒಮ್ಮೆ ಜೆಡಿಎಸ್‌ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ತದನಂತರ 2018ರಲ್ಲಿ ಇವರು ಚುನಾವಣೆಗೆ ಸ್ಪರ್ಧಿಸಿರಲಿಲ್ಲ. ಈಗ 2023ರ ರಾಜ್ಯ ವಿಧಾನಸಭೆ ಚುನಾವಣೆಗೆ ಇವರು ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಇವರ ಪತ್ನಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ