AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಜಾಮೀನು ಅರ್ಜಿ ವಿಚಾರಣೆ: ಜೈಲ್ ಅಥವಾ ಬೇಲ್ ಭವಿಷ್ಯ ನಿರ್ಧಾರ

ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಹೃದಯ ಖಾಯಿಲೆ, ಅನಾರೋಗ್ಯ ಹಿನ್ನೆಲೆ ಚಿಕಿತ್ಸೆಗೆ ಮುರುಘಾಶ್ರೀ ಪರ ವಕೀಲ ಉಮೇಶ್ ಮನವಿ ಹಿನ್ನೆಲೆ ಕೋರ್ಟ್ ಸೂಚನೆ ನೀಡಿದೆ.

ಇಂದು ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಜಾಮೀನು ಅರ್ಜಿ ವಿಚಾರಣೆ: ಜೈಲ್ ಅಥವಾ ಬೇಲ್ ಭವಿಷ್ಯ ನಿರ್ಧಾರ
ಶಿವಮೂರ್ತಿ ಸ್ವಾಮೀಜಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Sep 08, 2022 | 7:55 AM

Share

ಚಿತ್ರದುರ್ಗ: ಮುರುಘಾಶ್ರೀ ವಿರುದ್ಧ ಫೋಕ್ಸೋ ಪ್ರಕರಣ ಸಂಬಂಧ ಜಿಲ್ಲಾ 2ನೇ ಅಪರ ಮತ್ರು ಸತ್ರ ನ್ಯಾಯಾಲಯದಲ್ಲಿ ಇಂದು ಮುರುಘಾಶ್ರೀ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಸಂತ್ರಸ್ತರ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಕೆಗೆ ಸೂಚನೆ ನೀಡಿದ್ದು, ಇಂದು ಮುರುಘಾಶ್ರೀಗೆ ಜೈಲ್ ಅಥವಾ ಬೇಲ್ ಭವಿಷ್ಯ ನಿರ್ಧಾರವಾಗಲಿದೆ. ಸದ್ಯ ಸೆ‌.14ರವೆರೆಗೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾಶ್ರೀ, ರಾತ್ರಿ ಸೊಳ್ಳೆ ಕಾಟದಿಂದ ಕಂಗಾಲಾಗಿದ್ದಾರೆ ಎನ್ನಲಾಗುತ್ತಿದೆ. ರಾತ್ರಿ ವೇಳೆ ಮೂರ್ನಾಲ್ಕು ಸಲ  ಮುರುಘಾಶ್ರೀ ಎದ್ದೆದ್ದು ಕುಳಿತಿದ್ದಾರೆ. ಬೆಳಗ್ಗೆ 6ಗಂಟೆಗೆ ಎದ್ದು ಕುಳಿತಿದ್ದು, ವಾಕಿಂಗ್ ತೆರಳಲು ಮುಂದಾದ ಮುರುಘಾಶ್ರೀಗೆ ಸಿಬ್ಬಂದಿ ನಿರಾಕರಿಸಿದ್ದಾರೆ. ಬೆಳಗ್ಗೆ ಉಪಹಾರಕ್ಕೆ ಉಪ್ಪಿಟ್ಟು, ಚಿತ್ರನ್ನ ಸೇವಿಸಿದ್ದು, ಮಧ್ಯಾಹ್ನ ಮತ್ತು ರಾತ್ರಿ ಮುದ್ದೆ, ಚಪಾತಿ, ಅನ್ನ, ಸಾರು ಜೈಲೂಟವನ್ನೇ ಮುರುಘಾಶ್ರೀ ಸೇವಿಸುತ್ತಿದ್ದಾರೆ. ಬೆಳಗ್ಗೆ 11ಗಂಟೆಗೆ ಜೈಲಿನ ಲೈಬ್ರರಿಯಲ್ಲಿ ಓದಿದ್ದು, ಮಧ್ಯಾಹ್ನ  4 ಗಂಟೆಯಿಂದ ಜೈಲಿನಲ್ಲೇ ಕುಳಿತು ಮುರುಘಾಶ್ರೀ ಡೈರಿ ಬರೆದಿದ್ದಾರೆ.

ದಾವಣಗೆರೆ ಅಥವಾ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಸಾಧ್ಯತೆ:

ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಹೃದಯ ಖಾಯಿಲೆ, ಅನಾರೋಗ್ಯ ಹಿನ್ನೆಲೆ ಚಿಕಿತ್ಸೆಗೆ ಮುರುಘಾಶ್ರೀ ಪರ ವಕೀಲ ಉಮೇಶ್ ಮನವಿ ಹಿನ್ನೆಲೆ ಕೋರ್ಟ್ ಸೂಚನೆ ನೀಡಿದೆ. ಸೆ.2ರಂದು ಎದೆನೋವು ಎಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಮುರುಘಾಶ್ರೀ, ಜಿಲ್ಲಾಸ್ಪತ್ರೆಯಲ್ಲಿ ಇಸಿಜಿ, ಸ್ಕ್ಯಾನ್, ರಕ್ತದ ಮಾದರಿಯನ್ನು ವೈದ್ಯರು ಪರೀಕ್ಷಿಸಿದರು. ವೈದ್ಯರ ವರದಿ ನಿನ್ನೆ ಕೋರ್ಟಿಗೆ ಸಲ್ಲಿಕೆ ಹಿನ್ನೆಲೆ ತಪಾಸಣೆಗೆ ಸೂಚನೆ ನೀಡಿದ್ದು, ಇಂದು ದಾವಣಗೆರೆಯ ಚಿಗಟೇರಿ, ಅಥವಾ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಮುರುಘಾಶ್ರೀ ಶಿಫ್ಟ್ ಸಾಧ್ಯತೆ ಎನ್ನಲಾಗುತ್ತಿದೆ.

2ನೇ ಆರೋಪಿ ಮಹಿಳಾ ವಾರ್ಡನ್​ಳನ್ನು ಸೆ.8ರವರೆಗೆ ಪೊಲೀಸ್ ಕಸ್ಟಡಿಗೆ

ಇನ್ನೂ ಪ್ರಕರಣದ 2ನೇ ಆರೋಪಿ ಮಹಿಳಾ ವಾರ್ಡನ್​ಳನ್ನು ಸೆ.8ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ಆದೇಶ ಹೊರಡಿಸಿದೆ. ಶಿವಮೊಗ್ಗ ಜೈಲಿನಲ್ಲಿದ್ದ ಮಹಿಳಾ ವಾರ್ಡನ್​ಳನ್ನು ಚಿತ್ರದುರ್ಗ ಪೊಲೀಸರು ​ಏಳು ದಿನಗಳ ಕಾಲ ಕಸ್ಟಡಿಗೆ ಕೇಳಿದ್ದರು. ಪೊಲೀಸರು ಮಹಿಳಾ ವಾರ್ಡನ್​ಳನ್ನು ಮಹಿಳಾ ಸಾಂತ್ವನ ಕೇಂದ್ರದಲ್ಲಿ ವಿಚಾರಣೆ ನಡೆಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?