AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರುಘಾಶ್ರೀ ಕೈಗೆ ಮರಳಿದ ಮುರುಘಾಮಠದ ಅಧಿಕಾರ

ಡಾ.ಶಿವಮೂರ್ತಿ ಮುರುಘಾ ಶರಣರ ಕೈಗೆ ಮುರುಘಾಮಠದ ಅಧಿಕಾರ ದೊರೆತಿದೆ. ಇಷ್ಟು ದಿನ ಚಿತ್ರದುರ್ಗ ಪಿಡಿಜೆ, ಮಠದ ಆಡಳಿತಾಧಿಕಾರಿ ಆಗಿದ್ದರು. ನವೆಂಬರ್ 16ರಂದು ಜಾಮೀನಿನ ಮೇಲೆ ಮುರುಘಾಶ್ರೀ ಬಿಡುಗಡೆಯಾದ ಹಿನ್ನಲೆ ಮಠದ ಆಧಿಕಾರ ಹಿಂದಿರುಗಿಸುವಂತೆ ಮುರುಘಾಶ್ರೀ ಕೋರ್ಟ್ ಮೊರೆ ಹೋಗಿದ್ದರು.

ಮುರುಘಾಶ್ರೀ ಕೈಗೆ ಮರಳಿದ ಮುರುಘಾಮಠದ ಅಧಿಕಾರ
ಮುರುಘಾ ಶ್ರೀ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Dec 08, 2023 | 5:27 PM

Share

ಚಿತ್ರದುರ್ಗ, ಡಿ.07: ಡಾ.ಶಿವಮೂರ್ತಿ ಮುರುಘಾ ಶರಣರ ಕೈಗೆ ಮುರುಘಾಮಠದ ಅಧಿಕಾರ ದೊರೆತಿದೆ. 2022ರ ಸೆ.1ರಂದು ಪೋಕ್ಸೋ ಕೇಸ್​ನಲ್ಲಿ ಮುರುಘಾ ಶ್ರೀ(Muruga shree) ಬಂಧನವಾಗಿತ್ತು. ಈ ಹಿನ್ನಲೆ ಮುರುಘಾ ಮಠಕ್ಕೆ ಆಡಳಿತಾಧಿಕಾರಿಯನ್ನ ರಾಜ್ಯ ಸರ್ಕಾರವೇ ನೇಮಿಸಿತ್ತು. ಬಳಿಕ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಹೈಕೋರ್ಟ್ ಮೊರೆ ಹಿನ್ನೆಲೆ ಹೈಕೋರ್ಟ್ ಆಡಳಿತಾಧಿಕಾರಿ ನೇಮಕಾತಿ ರದ್ದು ಪಡಿಸಿತ್ತು. ಮುರುಘಾಶ್ರೀ ಜೈಲಿನಲ್ಲಿದ್ದ ಕಾರಣ ಪಿಡಿಜೆಗೆ ತಾತ್ಕಾಲಿಕ ಅಧಿಕಾರ ನೀಡಿತ್ತು.

ಲಕೋಟೆ ಮೂಲಕ ಮುರುಘಾಶ್ರೀಗೆ ಅಧಿಕಾರ ಹಸ್ತಾಂತರ ಪತ್ರ ರವಾನೆ

ಅದರಂತೆ ಚಿತ್ರದುರ್ಗ ಪಿಡಿಜೆ, ಮಠದ ಆಡಳಿತಾಧಿಕಾರಿ ಆಗಿದ್ದರು. ನವೆಂಬರ್ 16ರಂದು ಜಾಮೀನಿನ ಮೇಲೆ ಮುರುಘಾಶ್ರೀ ಬಿಡುಗಡೆಯಾದ ಹಿನ್ನಲೆ ಮಠದ ಆಧಿಕಾರ ಹಿಂದಿರುಗಿಸುವಂತೆ ಮುರುಘಾಶ್ರೀ ಕೋರ್ಟ್ ಮೊರೆ ಹೋಗಿದ್ದರು. ಅದರಂತೆ ಚಿತ್ರದುರ್ಗ ಪಿಡಿಜೆಯಿಂದ ಮುರುಘಾಶ್ರೀಗೆ ಅಧಿಕಾರ ಹಸ್ತಾಂತರಿಸಿದ ಬೆನ್ನಲ್ಲೇ ಲಕೋಟೆ ಮೂಲಕ ಮುರುಘಾಶ್ರೀಗೆ ಅಧಿಕಾರ ಹಸ್ತಾಂತರ ಪತ್ರ ರವಾನಿಸಲಾಗಿದೆ.

ಇದನ್ನೂ ಓದಿ:ಚಿತ್ರದುರ್ಗ: ಮುರುಘಾ ಶ್ರೀ ವಿರುದ್ಧ ದಾಖಲಾದ ಒಂದನೇ ಪೋಕ್ಸೋ ಪ್ರಕರಣದ ಜಾಮೀನು ಅರ್ಜಿ ವಜಾ

ಹೊರಗಿದ್ದುಕೊಂಡೇ ಮಠದ ಆಡಳಿತ

ಚಿತ್ರದುರ್ಗ ಜಿಲ್ಲೆ ಪ್ರವೇಶಿಸದಂತೆ ಮುರುಘಾಶ್ರೀಗೆ ಹೈಕೋರ್ಟ್ ಷರತ್ತು ನೀಡಿದ ಹಿನ್ನಲೆ ಜಿಲ್ಲೆಯಿಂದ ಹೊರಗಿದ್ದುಕೊಂಡೇ ಮುರುಘಾ ಶ್ರೀಗಳು ಮಠದ ಆಡಳಿತವನ್ನು ನಡೆಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:40 pm, Thu, 7 December 23

ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌