AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳತನವಾಗಿದ್ದ ಮುರುಘಾಶ್ರೀ ಪುತ್ಥಳಿ ಪತ್ತೆ: ನಾಲ್ವರು ಶಂಕಿತ ಆರೋಪಿಗಳ ಪಾಲಿಗ್ರಫಿ ಪರೀಕ್ಷೆಗೆ ಪೊಲೀಸರ ಸಿದ್ದತೆ

ಇದೇ ಜುಲೈ 11ರಂದು ಚಿತ್ರದುರ್ಗದ ಮುರುಘಾಮಠ(Murugha Matha)ದಲ್ಲಿದ್ದ ಮುರುಘಾಶ್ರೀ ಬೆಳ್ಳಿ ಪುತ್ಥಳಿ ಕಳ್ಳತನವಾಗಿತ್ತು. ಬಳಿಕ ಕಾಣೆಯಾಗಿದ್ದ ಬೆಳ್ಳಿ ಪುತ್ಥಳಿ ಜುಲೈ 15 ರಂದು ಮಠದ ಆವರಣದಲ್ಲಿ ಪುನಃ ಪತ್ತೆಯಾಗಿತ್ತು. ಈ ಕುರಿತು ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದ ಪೊಲೀಸರು, ಇದೀಗ ನಾಲ್ವರ ಮೇಲೆ ಅನುಮಾನಗೊಂಡು ಪಾಲಿಗ್ರಫಿ ಪರೀಕ್ಷೆ ನಡೆಸಲು ಸಿದ್ದತೆ ಮಾಡಿಕೊಂಡಿದ್ದಾರೆ.

ಕಳ್ಳತನವಾಗಿದ್ದ ಮುರುಘಾಶ್ರೀ ಪುತ್ಥಳಿ ಪತ್ತೆ: ನಾಲ್ವರು ಶಂಕಿತ ಆರೋಪಿಗಳ ಪಾಲಿಗ್ರಫಿ ಪರೀಕ್ಷೆಗೆ ಪೊಲೀಸರ ಸಿದ್ದತೆ
ಕಳ್ಳತನವಾಗಿದ್ದ ಮುರುಘಾಶ್ರೀ ಪುತ್ಥಳಿ ಪತ್ತೆ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Jul 16, 2024 | 7:53 PM

Share

ಚಿತ್ರದುರ್ಗ, ಜು.16: ಕೋಟೆನಾಡು ಚಿತ್ರದುರ್ಗದ ಮುರುಘಾಮಠ(Murugha Matha)ದಲ್ಲಿ ಬೆಳ್ಳಿ ಪುತ್ಥಳಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಜು. 11ರಂದು ಈ ಕುರಿತು ಕೇಸ್ ದಾಖಲು ಮಾಡಲಾಗಿತ್ತು. ಬಳಿಕ ಜುಲೈ 15 ರಂದು ಮಠದ ಆವರಣದಲ್ಲಿ ಬೆಳ್ಳಿ ಪುತ್ಥಳಿ ಪತ್ತೆಯಾಗಿತ್ತು. ಹೀಗಿರುವಾಗ ಬೆಳ್ಳಿ ಕದ್ದವರು ಯಾರು, ವಾಪಸ್ ತಂದವರು ಯಾರು? ಎಂಬ ಪ್ರಶ್ನೆ ಮೂಡಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತಲೆಕೆಡಿಸಿಕೊಂಡಿದ್ದಾರೆ. ಈ ನಡುವೆ ನಾಲ್ವರು ಶಂಕಿತ ಆರೋಪಿಗಳ ಮೇಲೆ ಪೊಲೀಸರ ಕಣ್ಣು ಬಿದ್ದಿದೆ.

ನಾಲ್ವರ ಪಾಲಿಗ್ರಫಿ ಪರೀಕ್ಷೆಗೆ ಪೊಲೀಸರ ಸಿದ್ಧತೆ

ಇನ್ನು ಕಳ್ಳರಿಗೋಸ್ಕರ ತೀವ್ರ ತಲೆಕೆಡಿಸಿಕೊಂಡಿದ್ದ ಪೊಲೀಸರು, ಇದೀಗ ಮಠದ ನೌಕರರಾದ ಗೋಪಿ, ಬಸನಗೌಡ, ರೆಡ್ಡಿ ಹಾಗೂ ಮಹಾಲಿಂಗ ಎಂಬ ನಾಲ್ವರು ಮೇಲೆ ಶಂಕೆ ವ್ಯಕ್ತಪಡಿಸಿದ ಪೊಲೀಸರು, ಕೋರ್ಟ್ ಅನುಮತಿ ಪಡೆದು ನಾಲ್ವರನ್ನು ಪಾಲಿಗ್ರಫಿ ಪರೀಕ್ಷೆಗೆ ಒಳಪಡಿಸಲು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:ಚಿತ್ರದುರ್ಗ: ಮುರುಘಾಮಠದಲ್ಲಿದ್ದ ಮುರುಘಾ ಶ್ರೀ ಬೆಳ್ಳಿ ಪುತ್ಥಳಿ ಕಳ್ಳತನ

ಈ ನಾಲ್ವರ ಚಲನವಲನ ಬಗ್ಗೆ ಪೊಲೀಸರಿಗೆ ಶಂಕೆ

ಹೌದು, ಮಠದ ಈ ನಾಲ್ವರ ಮೇಲೆ ಪೊಲೀಸರಿಗೆ ಅನುಮಾನ ಮೂಡಿದೆ. ಜೂನ್ 26ರಂದು ಬಸನಗೌಡ ಸಿಸಿಟಿವಿ ಆಫ್ ಮಾಡಿದ್ದ. ನಂತರ ಜುಲೈ 10 ರಂದು ಮಹಾಲಿಂಗ ಎಂಬಾತ ಸಿಸಿಟಿವಿ ಆನ್ ಮಾಡಲು ಯತ್ನಿಸಿದ್ದ. ಹೀಗಾಗಿ ಬಸನಗೌಡ, ಮಹಾಲಿಂಗ, ಗೋಪಿ, ರೆಡ್ಡಿ ಚಲನವಲನ ಬಗ್ಗೆ ಪೊಲೀಸರಿಗೆ ಶಂಕೆ ವ್ಯಕ್ತವಾಗಿದ್ದು, ಪಾಲಿಗ್ರಫಿ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ.

ಪಾಲಿಗ್ರಫಿ ಪರೀಕ್ಷೆ ಎಂದರೇನು?

ಈ ಪಾಲಿಗ್ರಫಿ ಪರೀಕ್ಷೆಯನ್ನು ವ್ಯಕ್ತಿಯೋರ್ವ ಸುಳ್ಳನ್ನು ಹೇಳಿದಾಗ ಪತ್ತೆಹಚ್ಚುವ ಸಾಧನವಾಗಿದೆ. ಈ ಉಪಕರಣವನ್ನು ಅನೇಕ ದೇಶಗಳಲ್ಲಿ ವಿವಿಧ ಉದ್ದೇಶಗಳಿಗಾಗಿ ಬಳಸಲಾಗುತ್ತದೆ. ಭಾರತದಲ್ಲಂತೂ ಇದನ್ನು ಪೊಲೀಸ್ ಅಧಿಕಾರಿಗಳು, ಸಿಬಿಐ, ಎಫ್ ಎಸ್ ಎಲ್ ಆರೋಪಿಗಳ ವಿಚಾರಣೆಗೆ ಬಳಸುತ್ತಾರೆ. ಮತ್ತು ಅನೇಕ ಪ್ರಕರಣಗಳನ್ನು ಪರಿಹರಿಸುವಲ್ಲಿ ಇದು ಉತ್ತಮ ಸಾಧನವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!