AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳತನವಾಗಿದ್ದ ಮುರುಘಾಶ್ರೀ ಪುತ್ಥಳಿ ಪತ್ತೆ: ನಾಲ್ವರು ಶಂಕಿತ ಆರೋಪಿಗಳ ಪಾಲಿಗ್ರಫಿ ಪರೀಕ್ಷೆಗೆ ಪೊಲೀಸರ ಸಿದ್ದತೆ

ಇದೇ ಜುಲೈ 11ರಂದು ಚಿತ್ರದುರ್ಗದ ಮುರುಘಾಮಠ(Murugha Matha)ದಲ್ಲಿದ್ದ ಮುರುಘಾಶ್ರೀ ಬೆಳ್ಳಿ ಪುತ್ಥಳಿ ಕಳ್ಳತನವಾಗಿತ್ತು. ಬಳಿಕ ಕಾಣೆಯಾಗಿದ್ದ ಬೆಳ್ಳಿ ಪುತ್ಥಳಿ ಜುಲೈ 15 ರಂದು ಮಠದ ಆವರಣದಲ್ಲಿ ಪುನಃ ಪತ್ತೆಯಾಗಿತ್ತು. ಈ ಕುರಿತು ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದ ಪೊಲೀಸರು, ಇದೀಗ ನಾಲ್ವರ ಮೇಲೆ ಅನುಮಾನಗೊಂಡು ಪಾಲಿಗ್ರಫಿ ಪರೀಕ್ಷೆ ನಡೆಸಲು ಸಿದ್ದತೆ ಮಾಡಿಕೊಂಡಿದ್ದಾರೆ.

ಕಳ್ಳತನವಾಗಿದ್ದ ಮುರುಘಾಶ್ರೀ ಪುತ್ಥಳಿ ಪತ್ತೆ: ನಾಲ್ವರು ಶಂಕಿತ ಆರೋಪಿಗಳ ಪಾಲಿಗ್ರಫಿ ಪರೀಕ್ಷೆಗೆ ಪೊಲೀಸರ ಸಿದ್ದತೆ
ಕಳ್ಳತನವಾಗಿದ್ದ ಮುರುಘಾಶ್ರೀ ಪುತ್ಥಳಿ ಪತ್ತೆ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Jul 16, 2024 | 7:53 PM

Share

ಚಿತ್ರದುರ್ಗ, ಜು.16: ಕೋಟೆನಾಡು ಚಿತ್ರದುರ್ಗದ ಮುರುಘಾಮಠ(Murugha Matha)ದಲ್ಲಿ ಬೆಳ್ಳಿ ಪುತ್ಥಳಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಜು. 11ರಂದು ಈ ಕುರಿತು ಕೇಸ್ ದಾಖಲು ಮಾಡಲಾಗಿತ್ತು. ಬಳಿಕ ಜುಲೈ 15 ರಂದು ಮಠದ ಆವರಣದಲ್ಲಿ ಬೆಳ್ಳಿ ಪುತ್ಥಳಿ ಪತ್ತೆಯಾಗಿತ್ತು. ಹೀಗಿರುವಾಗ ಬೆಳ್ಳಿ ಕದ್ದವರು ಯಾರು, ವಾಪಸ್ ತಂದವರು ಯಾರು? ಎಂಬ ಪ್ರಶ್ನೆ ಮೂಡಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತಲೆಕೆಡಿಸಿಕೊಂಡಿದ್ದಾರೆ. ಈ ನಡುವೆ ನಾಲ್ವರು ಶಂಕಿತ ಆರೋಪಿಗಳ ಮೇಲೆ ಪೊಲೀಸರ ಕಣ್ಣು ಬಿದ್ದಿದೆ.

ನಾಲ್ವರ ಪಾಲಿಗ್ರಫಿ ಪರೀಕ್ಷೆಗೆ ಪೊಲೀಸರ ಸಿದ್ಧತೆ

ಇನ್ನು ಕಳ್ಳರಿಗೋಸ್ಕರ ತೀವ್ರ ತಲೆಕೆಡಿಸಿಕೊಂಡಿದ್ದ ಪೊಲೀಸರು, ಇದೀಗ ಮಠದ ನೌಕರರಾದ ಗೋಪಿ, ಬಸನಗೌಡ, ರೆಡ್ಡಿ ಹಾಗೂ ಮಹಾಲಿಂಗ ಎಂಬ ನಾಲ್ವರು ಮೇಲೆ ಶಂಕೆ ವ್ಯಕ್ತಪಡಿಸಿದ ಪೊಲೀಸರು, ಕೋರ್ಟ್ ಅನುಮತಿ ಪಡೆದು ನಾಲ್ವರನ್ನು ಪಾಲಿಗ್ರಫಿ ಪರೀಕ್ಷೆಗೆ ಒಳಪಡಿಸಲು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:ಚಿತ್ರದುರ್ಗ: ಮುರುಘಾಮಠದಲ್ಲಿದ್ದ ಮುರುಘಾ ಶ್ರೀ ಬೆಳ್ಳಿ ಪುತ್ಥಳಿ ಕಳ್ಳತನ

ಈ ನಾಲ್ವರ ಚಲನವಲನ ಬಗ್ಗೆ ಪೊಲೀಸರಿಗೆ ಶಂಕೆ

ಹೌದು, ಮಠದ ಈ ನಾಲ್ವರ ಮೇಲೆ ಪೊಲೀಸರಿಗೆ ಅನುಮಾನ ಮೂಡಿದೆ. ಜೂನ್ 26ರಂದು ಬಸನಗೌಡ ಸಿಸಿಟಿವಿ ಆಫ್ ಮಾಡಿದ್ದ. ನಂತರ ಜುಲೈ 10 ರಂದು ಮಹಾಲಿಂಗ ಎಂಬಾತ ಸಿಸಿಟಿವಿ ಆನ್ ಮಾಡಲು ಯತ್ನಿಸಿದ್ದ. ಹೀಗಾಗಿ ಬಸನಗೌಡ, ಮಹಾಲಿಂಗ, ಗೋಪಿ, ರೆಡ್ಡಿ ಚಲನವಲನ ಬಗ್ಗೆ ಪೊಲೀಸರಿಗೆ ಶಂಕೆ ವ್ಯಕ್ತವಾಗಿದ್ದು, ಪಾಲಿಗ್ರಫಿ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ.

ಪಾಲಿಗ್ರಫಿ ಪರೀಕ್ಷೆ ಎಂದರೇನು?

ಈ ಪಾಲಿಗ್ರಫಿ ಪರೀಕ್ಷೆಯನ್ನು ವ್ಯಕ್ತಿಯೋರ್ವ ಸುಳ್ಳನ್ನು ಹೇಳಿದಾಗ ಪತ್ತೆಹಚ್ಚುವ ಸಾಧನವಾಗಿದೆ. ಈ ಉಪಕರಣವನ್ನು ಅನೇಕ ದೇಶಗಳಲ್ಲಿ ವಿವಿಧ ಉದ್ದೇಶಗಳಿಗಾಗಿ ಬಳಸಲಾಗುತ್ತದೆ. ಭಾರತದಲ್ಲಂತೂ ಇದನ್ನು ಪೊಲೀಸ್ ಅಧಿಕಾರಿಗಳು, ಸಿಬಿಐ, ಎಫ್ ಎಸ್ ಎಲ್ ಆರೋಪಿಗಳ ವಿಚಾರಣೆಗೆ ಬಳಸುತ್ತಾರೆ. ಮತ್ತು ಅನೇಕ ಪ್ರಕರಣಗಳನ್ನು ಪರಿಹರಿಸುವಲ್ಲಿ ಇದು ಉತ್ತಮ ಸಾಧನವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ