ಚಿತ್ರದುರ್ಗ ಮುರುಘಾ ಮಠದ ಮುರುಘಾಶ್ರೀಗೆ ಮತ್ತೊಂದು ಹೊಸ ಸಂಕಷ್ಟ, ಏನದು?

ಚಿತ್ರದುರ್ಗದ ಮುರುಘಾ ಮಠದ ಬಸವ ಪುತ್ಥಳಿ ನಿರ್ಮಾಣಕ್ಕೆ ಸರ್ಕಾರ 35 ಕೋಟಿ ರೂ ಅನುದಾನ ನೀಡಿದೆ. ಆದರೆ, ಹಣದ ದುರುಪಯೋಗ ಆರೋಪ ಕೇಳಿಬಂದಿದೆ. ಜಿಲ್ಲಾಡಳಿತದ ತನಿಖಾ ವರದಿಯ ಪ್ರಕಾರ, 26 ಕೋಟಿಗೂ ಹೆಚ್ಚು ರೂ. ಖರ್ಚಾಗಿದೆ, ಆದರೆ ಉಳಿದ ಹಣದ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಚಿತ್ರದುರ್ಗ ಮುರುಘಾ ಮಠದ ಮುರುಘಾಶ್ರೀಗೆ ಮತ್ತೊಂದು ಹೊಸ ಸಂಕಷ್ಟ, ಏನದು?
ಚಿತ್ರದುರ್ಗ ಮುರುಘಾ ಮಠದ ಮುರುಘಾಶ್ರೀಗೆ ಮತ್ತೊಂದು ಹೊಸ ಸಂಕಷ್ಟ, ಏನದು?
Edited By:

Updated on: Feb 26, 2025 | 6:07 PM

ಚಿತ್ರದುರ್ಗ, ಫೆಬ್ರವರಿ 26: ಜಿಲ್ಲೆಯ ಶ್ರೀ ಮುರುಘಾ ಮಠದ (Murugha Matha) ಆವರಣದಲ್ಲಿ 325 ಅಡಿ ಎತ್ತರದ ಶ್ರೀ ಜಗಜ್ಯೋತಿ ಬಸವೇಶ್ವರ ಕಂಚಿನ ಪುತ್ಥಳಿಗೆ ರಾಜ್ಯ ಸರ್ಕಾರ ನೀಡಿದ 35 ಕೋಟಿ ರೂ. ಅನುದಾನ ದುರುಪಯೋಗವಾಗಿದೆ ಎಂಬ ಆರೋಪ ಕೇಳಿಬಂದಿದೆ. ಹಾಗಾಗಿ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಸಂಕಷ್ಟ ಸಾಧ್ಯತೆ ಎನ್ನಲಾಗುತ್ತಿದೆ.

ಹಣ ದುರುಪಯೋಗ ಬಗ್ಗೆ ಮಾಜಿ ಸಚಿವ ಏಕಾಂತಯ್ಯ ದೂರು ಹಿನ್ನೆಲೆ ಎಡಿಸಿ ಕುಮಾರಸ್ವಾಮಿ, PWD ಅಧಿಕಾರಿಗಳನ್ನೊಳಗೊಂಡಿದ್ದ ತನಿಖಾ ಸಮಿತಿ ವರದಿ ಸಿದ್ಧಪಡಿಸಿದೆ. ಸರ್ಕಾರದ ಅನುದಾನ ಅನುಷ್ಠಾನ ಬಗ್ಗೆ ಸ್ಪಷ್ಟತೆ ಇಲ್ಲವೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಗೆ ಇಂದು ವರದಿ ಸಲ್ಲಿಸಲಾಗಿದೆ.

ಇದನ್ನೂ ಓದಿ: ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು

ಇದನ್ನೂ ಓದಿ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಚಿತ್ರದುರ್ಗ ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿ ಅಮಾನತಿನಲ್ಲಿಡುವಂತೆ ಒತ್ತಾಯ
ಮುರುಘಾ ಮಠಕ್ಕೆ ಹೊಸ ಪೀಠಾಧ್ಯಕ್ಷರು ಬೇಕು: ಸರ್ಕಾರಕ್ಕೆ ಮನವಿ ಸಲ್ಲಿಸಲು ಭಕ್ತರ ಸಭೆ ನಿರ್ಧಾರ
Chitradurga News: ಮುರುಘಾಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ; 5ನೇ ಆರೋಪಿ ಗಂಗಾಧರಯ್ಯ ಪೊಲೀಸರಿಗೆ ಶರಣು

ಮುರುಘಾಮಠದ ಹಿಂಭಾಗದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರ ಪುತ್ಥಳಿ ನಿರ್ಮಿಸಲು ಅಂದಾಜು ರೂ.2802 ಕೋಟಿ ರೂ. ವೆಚ್ಚದ ಅಂದಾಜು ವೆಚ್ಚ ತಯಾರಿಸಲಾಗಿದ್ದು, ರಾಜ್ಯ ಸರ್ಕಾರದಿಂದ ರೂ.35.00 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ.

ಈವರೆಗೆ 26 ಕೋಟಿ 35 ಲಕ್ಷ 33 ಸಾವಿರ 503 ರೂ. ಬಳಕೆ ಆಗಿದೆ. ಉಳಿದ ಹಣ ಖರ್ಚಿನ ಬಗ್ಗೆ ಮಠದವರಿಗೆ ಅಧಿಕೃತ ದಾಖಲೆ ಕೇಳಿದ್ದೇವೆ. ಆದರೆ ಈವರೆಗೆ ಮಠದವರು ಅಧಿಕೃತ ದಾಖಲೆ ನೀಡಿಲ್ಲ ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್ ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರದ ಉನ್ನತ ಮಟ್ಟದ ತನಿಖೆ ನಡೆಸಿ ತೀರ್ಮಾನ ಕೈಗೊಳ್ಳಬಹುದೆಂದು ಕೂಡ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಶಿವಮೂರ್ತಿ ಶರಣರ ಪೀಠ ತ್ಯಾಗಕ್ಕೆ ಹೆಚ್ಚಿದ ಒತ್ತಡ: ಚಿತ್ರದುರ್ಗದಲ್ಲಿ ಮಠದ ಭಕ್ತರ ಸಭೆ, ಚೆಕ್ ಸಹಿಗೆ ಅವಕಾಶ ನಿರಾಕರಿಸಿದ ಹೈಕೋರ್ಟ್

ಇನ್ನು ಶ್ರೀ ಜಗಜ್ಯೋತಿ ಬಸವೇಶ್ವರ ಕಂಚಿನ ಪುತ್ಥಳಿ ನಿರ್ಮಾಣ ಕಾರ್ಯ ಕಳೆದ 10 ವರ್ಷಗಳಿಂದ ಯೋಜನೆ ಮಂದಗತಿಯಲ್ಲಿ ಸಾಗುತ್ತಿದ್ದು, ಸರ್ಕಾರದಿಂದ ಈಗಾಗಲೇ ಬಿಡುಗಡೆಯಾಗಿ ಖರ್ಚಾಗಿರುವ ಹಣವು ಸಮರ್ಪಕವಾಗಿ ವಿನಿಯೋಗಿಸದೇ ಇರುವುದರಿಂದ ಬಸವ ಪುತ್ಥಳಿಯ ಕಾಮಗಾರಿ ಫಲಪ್ರದಾವಾಗದಿರುವುದು ಕಂಡುಬಂದಿರುತ್ತದೆ ಎಂದು ವರದಿಯಲ್ಲಿ ಆರೋಪಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us