AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murugha mutt Swamiji Pocso case: ಸಂತ್ರಸ್ತ ಬಾಲಕಿಯರ ಹೇಳಿಕೆ ದಾಖಲಿಸಲು ಸಮಯ ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ ಪೊಲೀಸರು

CRPC ಸೆಕ್ಷನ್ 161ರಡಿ ಪೊಲೀಸ್ ಟೀಮ್ ಸಂತ್ರಸ್ತ ಬಾಲಕಿಯರ ಹೇಳಿಕೆ ದಾಖಲಿಸಿದ್ದರು. ಹೇಳಿಕೆ ದಾಖಲು ನಂತರ ವೈದ್ಯಕೀಯ ಪರೀಕ್ಷೆಯೂ ಮುಗಿದಿದೆ. ಈಗ ಜಡ್ಜ್ ಮುಂದೆ ಹಾಜರುಪಡಿಸಿ ಹೇಳಿಕೆ ದಾಖಲಿಸಲು ಸಜ್ಜಾಗಿದ್ದಾರೆ.

Murugha mutt Swamiji Pocso case: ಸಂತ್ರಸ್ತ ಬಾಲಕಿಯರ ಹೇಳಿಕೆ ದಾಖಲಿಸಲು ಸಮಯ ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ ಪೊಲೀಸರು
ಮುರುಘಾ ಮಠಕ್ಕೆ ಪೊಲೀಸ್ ಸರ್ಪಗಾವಲು
TV9 Web
| Updated By: ಆಯೇಷಾ ಬಾನು|

Updated on:Aug 29, 2022 | 4:22 PM

Share

ಚಿತ್ರದುರ್ಗ: ಮುರುಘಾ ಶರಣರ (Murugha mutt Swamiji) ವಿರುದ್ಧ ಪೋಕ್ಸೋ ಕೇಸ್​ ದಾಖಲು ವಿಚಾರಕ್ಕೆ ಸಂಬಂಧಿಸಿ ಸಂತ್ರಸ್ತ ಬಾಲಕಿಯರ ಹೇಳಿಕೆ ದಾಖಲಿಸಲು ಸಮಯ ಕೋರಿಕೆ ಚಿತ್ರದುರ್ಗ ನ್ಯಾಯಾಲಯಕ್ಕೆ ಪೊಲೀಸರು ಮನವಿ ಸಲ್ಲಿಸಿದ್ದಾರೆ.

CRPC ಸೆಕ್ಷನ್ 161ರಡಿ ಪೊಲೀಸ್ ಟೀಮ್ ಸಂತ್ರಸ್ತ ಬಾಲಕಿಯರ ಹೇಳಿಕೆ ದಾಖಲಿಸಿದ್ದರು. ಹೇಳಿಕೆ ದಾಖಲು ನಂತರ ವೈದ್ಯಕೀಯ ಪರೀಕ್ಷೆಯೂ ಮುಗಿದಿದೆ. ಈಗ ಜಡ್ಜ್ ಮುಂದೆ ಹಾಜರುಪಡಿಸಿ ಹೇಳಿಕೆ ದಾಖಲಿಸಲು ಸಜ್ಜಾಗಿದ್ದಾರೆ. ಆದ್ರೆ ಈ ವೇಳೆ ಪೊಲೀಸ್ ಅಧಿಕಾರಿಗಳು ಹೇಳಿಕೆ ದಾಖಲಿಸಲು ನ್ಯಾಯಾಧೀಶರ ಸಮಯ ಕೋರಿದ್ದಾರೆ.

CRPC ಸೆಕ್ಷನ್ 164ರ ಅಡಿ ಸಂತ್ರಸ್ತೆಯರ ಹೇಳಿಕೆ ಕೊಡಿಸಲು ಸಜ್ಜಾಗಿದ್ದಾರೆ. ದೌರ್ಜನ್ಯ ಆಗಿದೆ ಎಂದು ಜಡ್ಜ್‌ ಮುಂದೆ ಆರೋಪಿಸಿದರೆ ಬಂಧನವಾಗುವುದು ಪಕ್ಕಾ. ಪೋಕ್ಸೋ ಕೇಸ್‌ ಆಗಿರೋದ್ರಿಂದ ಶ್ರೀಗಳ ಬಂಧನ ಅನಿವಾರ್ಯವಾಗುತ್ತದೆ. ಸದ್ಯಕ್ಕೆ ಚಿತ್ರದುರ್ಗ ಮಠದಲ್ಲಿಲ್ಲೇ ಡಾ.ಶಿವಮೂರ್ತಿ ಶರಣರಿದ್ದು ಚಿತ್ರದುರ್ಗ ಬಾಲಮಂದಿರದಲ್ಲಿ ಸಂತ್ರಸ್ತ ಬಾಲಕಿಯರಿಗೆ ಆಶ್ರಯ ನೀಡಲಾಗಿದೆ.

ಪೊಲೀಸರು ಪ್ರಕರಣವನ್ನ ವಿಳಂಬ ಮಾಡುತ್ತಿದ್ದಾರೆ

ಇನ್ನು ಮತ್ತೊಂದೆಡೆ ಮೈಸೂರಿನ ಒಡನಾಡಿ ಸಂಸ್ಥೆಯ ಸರಸ್ವತಿ ಈ ಬಗ್ಗೆ ಮಾತನಾಡಿದ್ದು, ನಮ್ಮ ಒಡನಾಡಿ ಸಂಸ್ಥೆಯ ಮೂಲಕ ಪ್ರಕರಣ ಬೆಳಕಿಗೆ ಬಂದಿದೆ. ನಿನ್ನೆಯತನಕ ನಮ್ಮಗೆ ಸಂತ್ರಸ್ತರ ಜೊತೆ ಇರಲು ಅವಕಾಶ ನೀಡಿದ್ರು. ಇಂದು ಮಕ್ಕಳನ್ನ ಭೇಟಿಯಾಗಲು ಅವಕಾಶ ನೀಡುತ್ತಿಲ್ಲ. ಪ್ರಕರಣ ಬೆಳಕಿಗೆ ಬಂದು ನಾಲ್ಕು ದಿನವಾಗಿದೆ‌. ನಿನ್ನೆಯ ವಿಚಾರಣೆ ವೇಳೆಯೂ ಸಂತ್ರಸ್ತರು ಹೇಳಿಕೆ ನೀಡಿದ್ದಾರೆ. CWC ಯವರು ನಿನ್ನೆಯ ತನಕ ನಮಗೆ ಬೆಂಬಲ ನೀಡಿದ್ರು. ಇಂದು ನಮ್ಮನ್ನ ದೂರವಿಟ್ಟಿದ್ದಾರೆ. ಸಂತ್ರಸ್ತರಿಂದ ಆದಷ್ಟು ಬೇಗ 164 ಅಡಿಯಲ್ಲಿ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಬೇಕು. ಸಂತ್ರಸ್ತರಿಂದ ಸ್ಥಳ ಮಹಜರ್ ಆಗಬೇಕಿದೆ. ಆದ್ರೆ ಜಿಲ್ಲಾಢಳಿತ ಜಿಲ್ಲಾ ಪೊಲೀಸರು ಪ್ರಕರಣವನ್ನ ವಿಳಂಬ ಮಾಡುತ್ತಿದ್ದಾರೆ ಎಂದು ಸರಸ್ವತಿ ಅವರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಸಂತ್ರಸ್ತ ಬಾಲಕಿಯರನ್ನು ಸ್ಥಳ ಮಹಜರಿಗೆ ಕರೆದೊಯ್ದ ತಂಡ

ಚಿತ್ರದುರ್ಗ ನಗರದಲ್ಲಿ ಸಿಡಬ್ಲ್ಯೂಸಿ ತಂಡ, ಸಂತ್ರಸ್ತ ಬಾಲಕಿಯರನ್ನು ಸ್ಥಳ ಮಹಜರಿಗೆ ಕರೆದೊಯ್ದಿದೆ. ಬಾಲಮಂದಿರದಿಂದ ಮುರುಘಾಮಠಕ್ಕೆ ಸಂತ್ರಸ್ತರನ್ನು ಕರೆದುಕೊಂಡು ಹೋಗಲಾಗಿದೆ. ಜಿಲ್ಲಾಧಿಕಾರಿ. CWC. ಮೈಸೂರಿನ ಒಡನಾಡಿ ತಂಡ ಸಾಥ್ ಜೊತೆ ಹೋಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:52 pm, Mon, 29 August 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ