AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಡಿ ವಾರಂಟ್ ಇದ್ದರೂ ಜೈಲಿನಿಂದ ಮುರುಘಾಶ್ರೀ ಬಿಡುಗಡೆ; ಕಾರಾಗೃಹ ಇಲಾಖೆಯಿಂದ ತನಿಖೆಗೆ ಸೂಚಿಸಿದ ನ್ಯಾಯಾಲಯ

ಚಿತ್ರದುರ್ಗದ ಮುರುಘಾಶ್ರೀ ವಿರುದ್ಧದ 1ನೇ ಫೋಕ್ಸೋ ಕೇಸ್​ನಲ್ಲಿ ಜಾಮೀನು ಹಿನ್ನಲೆ ಹೈಕೋರ್ಟ್ ಆದೇಶದನ್ವಯ ಬಿಡುಗಡೆಗೆ ಸೂಚನೆ ನೀಡಿತ್ತು. ಆದರೆ, 2ನೇ ಫೋಕ್ಸೋ ಪ್ರಕರಣದಲ್ಲಿ ಬಾಡಿ ವಾರೆಂಟ್ ಹಿನ್ನೆಲೆ ಬಂಧನ ವಾರೆಂಟ್​ಗೆ ಸರ್ಕಾರಿ ವಕೀಲ ಜಗದೀಶ್ ಮನವಿ ಮಾಡಿದ್ದರು. ಈ ಬಗ್ಗೆ ಕೋರ್ಟ್​ನಲ್ಲಿ ಸರ್ಕಾರಿ ವಕೀಲ ಜಗದೀಶ್ ಪ್ರಶ್ನಿಸಿರುವ ಬೆನ್ನಲ್ಲೇ ಕಾರಾಗೃಹ ಇಲಾಖೆಗೆ ತನಿಖೆ ನಡೆಸಿ ವರದಿ‌ ನೀಡಲು 2ನೇ ಅಪರ ಜಿಲ್ಲಾ‌& ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಬಿ ಕೆ ಕೋಮಲಾರಿಂದ ಆದೇಶಿಸಿದೆ.

ಬಾಡಿ ವಾರಂಟ್ ಇದ್ದರೂ ಜೈಲಿನಿಂದ ಮುರುಘಾಶ್ರೀ ಬಿಡುಗಡೆ; ಕಾರಾಗೃಹ ಇಲಾಖೆಯಿಂದ ತನಿಖೆಗೆ ಸೂಚಿಸಿದ ನ್ಯಾಯಾಲಯ
ಮುರುಘಾ ಶ್ರೀ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Nov 18, 2023 | 10:11 PM

Share

ಚಿತ್ರದುರ್ಗ, ನ.18: ಬಾಡಿ ವಾರಂಟ್ ಇದ್ದರೂ ಜೈಲಿನಿಂದ ಮುರುಘಾಶ್ರೀ (Murugha Math Swamiji) ಬಿಡುಗಡೆ ಹಿನ್ನೆಲೆ ಚಿತ್ರದುರ್ಗ (Chitradurga) ಕಾರಾಗೃಹ ಇಲಾಖೆಯ ಎಡಿಜಿಪಿ ಅವರಿಗೆ ತನಿಖೆ ನಡೆಸಲು ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Court) ಆದೇಶಿಸಿದೆ. ಇನ್ನು ಈ ಘಟನೆಗೆ ಸಂಬಂಧಪಟ್ಟಂತೆ ಜಿಲ್ಲಾ ಕಾರಾಗೃಹದ ಜೈಲರ್ ಆಗಿರುವ ಶ್ರೀಮಂತ್ ಗೌಡ ಪಾಟೀಲ್ ವಿರುದ್ಧ ತನಿಖೆಗೆ ಆದೇಶಿಸಿದೆ.

ಘಟನೆ ವಿವರ

ಚಿತ್ರದುರ್ಗದ ಮುರುಘಾಶ್ರೀ ವಿರುದ್ಧದ 1ನೇ ಫೋಕ್ಸೋ ಕೇಸ್​ನಲ್ಲಿ ಜಾಮೀನು ಹಿನ್ನಲೆ ಹೈಕೋರ್ಟ್ ಆದೇಶದನ್ವಯ ಬಿಡುಗಡೆಗೆ ಸೂಚನೆ ನೀಡಿತ್ತು. ಆದರೆ, 2ನೇ ಫೋಕ್ಸೋ ಪ್ರಕರಣದಲ್ಲಿ ಬಾಡಿ ವಾರೆಂಟ್ ಹಿನ್ನೆಲೆ ಬಂಧನ ವಾರೆಂಟ್​ಗೆ ಸರ್ಕಾರಿ ವಕೀಲ ಜಗದೀಶ್ ಮನವಿ ಮಾಡಿದ್ದರು. ಇದಾದ ಬಳಿಕ ವಿಸಿ ಮೂಲಕ ಕೋರ್ಟ್​ಗೆ ಹಾಜರು ಪಡಿಸಲು‌ ನ್ಯಾಯಾಲಯ ಸೂಚಿಸಿತ್ತು. 1ನೇ ಕೇಸಲ್ಲಿ ಬಿಡುಗಡೆ ಆದೇಶ, 2ನೇ ಕೇಸಲ್ಲಿ ಬಾಡಿ ವಾರೆಂಟ್ ಬಗ್ಗೆಯೂ ಸೂಚನೆ ನೀಡಿತ್ತು. ನವೆಂಬರ್ 16ರ ಬೆಳಗ್ಗೆ 11ಕ್ಕೆ ಜಿಲ್ಲಾ ಕಾರಾಗೃಹ ಸಿಬ್ಬಂದಿ ಅವರು  ವಿಸಿ ಮೂಲಕ ಮುರುಘಾಶ್ರೀಯನ್ನು  ಹಾಜರು ಪಡಿಸಿದ್ದರು.

ಇದನ್ನೂ ಓದಿ:ಜೈಲಿನಿಂದ ಹೊರಬಂದ ಮುರುಘಾಶ್ರೀ ಭಾವುಕ: ಪ್ರಕರಣದ ಬಗ್ಗೆ ಶರಣರು ಹೇಳಿದ್ದಿಷ್ಟು

2ನೇ ಕೇಸಲ್ಲಿ ಬಾಡಿ ವಾರೆಂಟ್ ಇದ್ದರೂ ಬಿಡಬಹುದೆಂದು ಬಿಡುಗಡೆ

ನಂತರ ಮಧ್ಯಾಹ್ನಕ್ಕೆ ವಿಚಾರಣೆ ನಡೆಸುವುದಾಗಿ ಕೋರ್ಟ್ ಸೂಚಿಸಿತ್ತು. ಆದರೆ, ನವೆಂಬರ್ 16ರ 11:45ಕ್ಕೆ ಮುರುಘಾಶ್ರೀಯನ್ನು ಬಿಡುಗಡೆ ಮಾಡಲಾಗಿದೆ. 1ನೇ ಫೋಕ್ಸೋ ಕೇಸ್​ನಲ್ಲಿ ಜಾಮೀನು, ಬಿಡುಗಡೆ ಆದೇಶ ಹಿನ್ನೆಲೆ ರಿಲೀಸ್​ ಮಾಡಲಾಗಿದೆ. ಹೌದು, 2ನೇ ಕೇಸಲ್ಲಿ ಬಾಡಿ ವಾರೆಂಟ್ ಇದ್ದರೂ ಬಿಡಬಹುದೆಂದು ಬಿಡುಗಡೆ ಮಾಡಲಾಗಿತ್ತು. ಈ ಬಗ್ಗೆ ಕೋರ್ಟ್​ನಲ್ಲಿ ಸರ್ಕಾರಿ ವಕೀಲ ಜಗದೀಶ್ ಪ್ರಶ್ನಿಸಿರುವ ಬೆನ್ನಲ್ಲೇ ಕಾರಾಗೃಹ ಇಲಾಖೆಗೆ ತನಿಖೆ ನಡೆಸಿ ವರದಿ‌ ನೀಡಲು 2ನೇ ಅಪರ ಜಿಲ್ಲಾ‌& ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಬಿ ಕೆ ಕೋಮಲಾರಿಂದ ಆದೇಶಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಆರೋಪಿಗಳು ಜಿಲೆಟಿನ್ ಇಟ್ಟಿದ್ಯಾಕೆ?
ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಆರೋಪಿಗಳು ಜಿಲೆಟಿನ್ ಇಟ್ಟಿದ್ಯಾಕೆ?
ಬೆಂಗಳೂರಿನಲ್ಲೊಂದು ವಿಚಿತ್ರ ಮನೆ ನೋಡಿದ್ರೆ ನೀವು ಶಾಕ್ ಆಗ್ತಿರಿ!
ಬೆಂಗಳೂರಿನಲ್ಲೊಂದು ವಿಚಿತ್ರ ಮನೆ ನೋಡಿದ್ರೆ ನೀವು ಶಾಕ್ ಆಗ್ತಿರಿ!
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ