AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾವನ್ನೇ ಉಸಿರು ಕಟ್ಟಿಸಿ ಭಕ್ತಿಯಲ್ಲಿ ಮಿಂದೆದ್ದ ಭಕ್ತರು.. ಕೊರೊನಾ ನಡುವೆಯೂ ಅದ್ದೂರಿಯಾಗಿ ನಡೀತು ತಿಪ್ಪೇರುದ್ರಸ್ವಾಮಿ ಜಾತ್ರೆ

ಅಲ್ಲಿ ಜನಸಾಗರವೇ ಸೇರಿತ್ತು. ಮಧ್ಯ ಕರ್ನಾಟಕದ ಬೃಹತ್​ ಜಾತ್ರೆಗೆ ಆ ಕ್ಷೇತ್ರ ಸಾಕ್ಷಿಯಾಗಿತ್ತು. ಕೊರೊನಾ ಭೀತಿಯಿಂದ ಜಿಲ್ಲಾಡಳಿತ ಜಾತ್ರೆ‌ ರದ್ದುಗೊಳಿಸಿದ್ರು, ಅದ್ಧೂರಿಯಾಗೇ ಆ ಜಾತ್ರೆ ನಡೆಯಿತು. ಕೊರೊನಾ ಭಯವಿಲ್ಲದೇ ಜನ ಸಂಭ್ರಮದಲ್ಲಿ ಮುಳುಗಿದ್ರು.

ಕೊರೊನಾವನ್ನೇ ಉಸಿರು ಕಟ್ಟಿಸಿ ಭಕ್ತಿಯಲ್ಲಿ ಮಿಂದೆದ್ದ ಭಕ್ತರು.. ಕೊರೊನಾ ನಡುವೆಯೂ ಅದ್ದೂರಿಯಾಗಿ ನಡೀತು ತಿಪ್ಪೇರುದ್ರಸ್ವಾಮಿ ಜಾತ್ರೆ
ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆ
ಆಯೇಷಾ ಬಾನು
ಆಯೇಷಾ ಬಾನು|

Updated on:Mar 30, 2021 | 7:32 AM

Share

ಚಿತ್ರದುರ್ಗ: ಜನ ಜನ ಜನ.. ಕಣ್ಣು ಹಾಯಿಸಿದ ಕಡೆಯಲ್ಲಿ ಜನ ಸಾಗರ. ಕಾಲಿಡಲು ಜಾಗ ವಿಲ್ಲದಷ್ಟು ಭಕ್ತ ಸಮೂಹ. ಸಾವಿರಾರೂ ಭಕ್ತರ ನಡುವೆ ಬರುತ್ತಿರುವ ಅಲಂಕಾರಗೊಂಡ ತೇರು. ಹೂವಿನಿಂದ ಕಂಗೊಳಿಸುತ್ತಿರುವ ತಿಪ್ಪೇರುದ್ರಸ್ವಾಮಿ. ಈ ರೀತಿಯ ದೃಶ್ಯ ವೈಭವ ಕಂಡು ಬಂದಿದ್ದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ. ಆರಾಧ್ಯ ದೈವ ಶ್ರೀಗುರು ತಿಪ್ಪೇರುದ್ರಸ್ವಾಮಿ ಜಾತ್ರೆ ಪ್ರತಿವರ್ಷದಂತೆ ಈ ವರ್ಷವೂ ಅದ್ಧೂರಿಯಾಗಿ ನಡೆಯಿತು. ಜಿಲ್ಲಾಡಳಿತ ತಿಂಗಳ ಹಿಂದೆಯೇ ಜಾತ್ರೆ, ರಥೋತ್ಸವ ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಜಾತ್ರೆಗೆ ಹೊರ ಜಿಲ್ಲೆ, ಹೊರ ರಾಜ್ಯದ ಭಕ್ತರು ಬಾರದಂತೆ ಮನವಿ ಮಾಡಿತ್ತು. ಆದ್ರೆ ಈ ತಿಪ್ಪೇರುದ್ರ ಸ್ವಾಮಿ ಜಾತ್ರೆಗೆ ಭಕ್ತ ಸಮೂಹ ಸಾಗರದಂತೆ ಹರಿದು ಬಂದಿತ್ತು.

ಶ್ರೀ ಗುರು ತಿಪ್ಪೇರುದ್ರಸ್ವಾಮಿ

ಜಿಲ್ಲಾಡಳಿತ ಎಷ್ಟೇ ಆದೇಶ ನೀಡಿದರು ಜನರು ಮಾತ್ರ ಜಾತ್ರೆಗೆ ಬಂದು ಭಕ್ತಿಯಲ್ಲಿ ಮಿಂದೆದ್ದಿದ್ದಾರೆ. ಅನೇಕರು ತಿಪ್ಪೇರುದ್ರಸ್ವಾಮಿಗೆ ಪ್ರಿಯವಾದ ಕೊಬ್ಬರಿ‌ಸುಟ್ಟು ಹರಕೆ ತೀರಿಸಿದರು. ಹಾಗೇ ರಥೋತ್ಸವದಲ್ಲಿ ಭಾಗಿಯಾದ ಭಕ್ತರು ತೇರನ್ನ ಎಳೆದು ಪುನೀತರಾದ್ರು.

ಒಟ್ಟಾರೆಯಾಗಿ ಜಿಲ್ಲಾಡಳಿತ ಜಾತ್ರೆ ರದ್ದುಗೊಳಿಸಿದ್ದರೂ ಸಹ ಭಕ್ತರ ಉತ್ಸಾಹ ಮಾತ್ರ ಕರಗಿರಲಿಲ್ಲ. ಹೀಗಾಗಿ, ಜಾತ್ರೆ ಎಂದಿನಂತೆ ಜನಜಾತ್ರೆಯಾಗಿಯೇ ನಡೆದಿದ್ದು ವಿಶೇಷ. ಆದ್ರೆ ಕೊರೊನಾ ಹರಡದಂತೆ ತಿಪ್ಪೇರುದ್ರಸ್ವಾಮಿಯೇ ಕಾಪಾಡಬೇಕು.

Nayakanahatti Thipperudraswamy Jatre

ತಿಪ್ಪೇರುದ್ರಸ್ವಾಮಿ ಜಾತ್ರೆಯಲ್ಲಿ ಕಂಡು ಬಂದ ಭಕ್ತ ಸಾಗರ

Nayakanahatti Thipperudraswamy Jatre

ರಥೋತ್ಸವದಲ್ಲಿ ಭಾಗಿಯಾದ ಭಕ್ತರು ತೇರನ್ನ ಎಳೆದು ಪುನೀತರಾದ್ರು

Nayakanahatti Thipperudraswamy Jatre

ದೇವಸ್ಥಾನದ ಮುಂದೆ ಭಕ್ತರ ಪೂಜೆ

Nayakanahatti Thipperudraswamy Jatre

ತಿಪ್ಪೇರುದ್ರಸ್ವಾಮಿಗೆ ಪ್ರಿಯವಾದ ಕೊಬ್ಬರಿ‌ಸುಟ್ಟು ಹರಕೆ ತೀರಿಸಿದ ಭಕ್ತರು

ಇದನ್ನೂ ಓದಿ: ರಾಜ್ಯದಲ್ಲಿ ಕೊರೊನಾ 2ನೇ ಅಲೆ: ಸಾರ್ವಜನಿಕ ಸ್ಥಳಗಳಲ್ಲಿ ಜಾತ್ರೆ, ಧಾರ್ಮಿಕ ಉತ್ಸವಕ್ಕೆ ನಿರ್ಬಂಧ​

Published On - 7:32 am, Tue, 30 March 21

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ