AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರೋಧದ ನಡುವೆ ಪ್ರೀತಿಸಿ ಮದುವೆಯಾದ ಜೋಡಿಗೆ ಪೋಷಕರೇ ವಿಲನ್, ನವಜೋಡಿಗೆ ಜೀವ ಬೆದರಿಕೆ

ಜಾತಿ ಅನ್ನೋ ಗೋಡೆಯನ್ನೇ ಮುಂದಿಟ್ಟುಕೊಂಡು ಅಂಕಿತಾ ಪೋಷಕರು, ಜೋಡಿಗೆ ಅಡ್ಡಿಯಾಗಿದ್ದಾರೆ. ನಮ್ಮ ಹುಡುಗಿಯನ್ನು ವಾಪಾಸ್ ಕಳಿಸಿ.. ಬೇಕಿದ್ದರೆ ದುಡ್ಡು ಕೇಳಿ ಕೊಡುತ್ತೇವೆ. ಇಲ್ಲವಾದಲ್ಲಿ ನಿಮ್ಮನ್ನ ಬಾಳೋದಕ್ಕೆ ಬಿಡಲ್ಲ ಅಂತ, ದ್ಯಾಮಕುಮಾರ್ ಪೋಷಕರಿಗೆ ಬೆದರಿಕೆ ಒಡ್ಡಿದ್ದಾರಂತೆ..

ವಿರೋಧದ ನಡುವೆ ಪ್ರೀತಿಸಿ ಮದುವೆಯಾದ ಜೋಡಿಗೆ ಪೋಷಕರೇ ವಿಲನ್, ನವಜೋಡಿಗೆ ಜೀವ ಬೆದರಿಕೆ
ವಿರೋಧದ ನಡುವೆ ಪ್ರೀತಿಸಿ ಮದುವೆಯಾದ ಜೋಡಿಗೆ ಪೋಷಕರೇ ವಿಲನ್, ನವಜೋಡಿಗೆ ಜೀವ ಬೆದರಿಕೆ
TV9 Web
| Edited By: |

Updated on:Dec 01, 2021 | 8:29 AM

Share

ಚಿತ್ರದುರ್ಗ: ಒಂದೇ ಊರಿನ ಯುವಕ ಯುವತಿ ಕಾಲೇಜಿಗೆ ಹೋಗಬೇಕಾದ್ರೆ, ಪ್ರೀತಿಯ ಬಲೆಗೆ ಬಿದಿದ್ರು. ಆದ್ರೆ, ಜತೆಯಾಗಿ ಬಾಳೋಣ ಅಂದುಕೊಂಡಿದ್ದ ಜೋಡಿಗೆ, ಹತ್ತಾರು ವಿಘ್ನ ಎದುರಾಗಿದೆ. ಪೋಷಕರೇ ವಿಲನ್ ಆಗಿದ್ದಾರೆ. ಚಿತ್ರದುರ್ಗದ ಚಳ್ಳಕೆರೆಯ ಗೋಪನಹಳ್ಳಿಯ ಪ್ರೇಮಿಗಳಿಗೆ ಪೋಷಕರು ಅಡ್ಡಿಯಾಗಿದ್ದಾರೆ. ಮದ್ವೆಯಾಗಿದ್ರೂ ಇವರ ಪ್ರಾಣ ಹಿಂಡುತ್ತಿದ್ದಾರೆ.

ಅಂಕಿತಾ ಹಾಗೂ ದ್ಯಾಮಕುಮಾರ್ ಎಂಬ ಯುವ ಜೋಡಿ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸಿದ್ರು. ಚಿತ್ರದುರ್ಗದ ಕಾಲೇಜಿನಲ್ಲಿ ಅಂಕಿತಾ ಸೆಕೆಂಡ್ ಇಯರ್ ಬಿಎ ಓದ್ತಿದ್ದು, ದ್ಯಾಮಕುಮಾರ್ ಐಟಿಐ ಮಾಡಿದ್ದಾನೆ. ಆದ್ರೆ, ಇವರಿಬ್ಬರ ಪ್ರೀತಿ ವಿಷ್ಯ ಅಂಕಿತಾ ಕುಟುಂಬಕ್ಕೆ ಗೊತ್ತಾಗಿತ್ತು. ದ್ಯಾಮಕುಮಾರ್ ಅನ್ಯಜಾತಿಯವನು ಅಂತ ಪ್ರೀತಿಗೆ ಅಡ್ಡಿಪಡಿಸಿ, ಬೇರೊಬ್ಬರ ಜತೆ ಮದುವೆಗೆ ಪ್ಲಾನ್ ಮಾಡಿದ್ರು. ಹೀಗಾಗಿ, ವಾರದ ಹಿಂದೆ ಈ ಜೋಡಿ, ಚಿತ್ರದುರ್ಗದ ಕಣಿವೆ ಮಾರಮ್ಮ ದೇಗುಲಕ್ಕೆ ತೆರಳಿ ಮದುವೆ ಆಗಿದ್ರು. ಬಳಿಕ ಪೋಷಕರ ಕಣ್ತಪ್ಪಿಸಿ ಊರುರು ಅಲೆಯುತ್ತಿರುವ ಜೋಡಿಗೆ, ಜೀವ ಬೆದರಿಕೆ ಹಾಕ್ತಿದ್ದಾರಂತೆ.

ctr love threat

ಅಂಕಿತಾ ಹಾಗೂ ದ್ಯಾಮಕುಮಾರ್

ಜಾತಿ ಅನ್ನೋ ಗೋಡೆಯನ್ನೇ ಮುಂದಿಟ್ಟುಕೊಂಡು ಅಂಕಿತಾ ಪೋಷಕರು, ಜೋಡಿಗೆ ಅಡ್ಡಿಯಾಗಿದ್ದಾರೆ. ನಮ್ಮ ಹುಡುಗಿಯನ್ನು ವಾಪಾಸ್ ಕಳಿಸಿ.. ಬೇಕಿದ್ದರೆ ದುಡ್ಡು ಕೇಳಿ ಕೊಡುತ್ತೇವೆ. ಇಲ್ಲವಾದಲ್ಲಿ ನಿಮ್ಮನ್ನ ಬಾಳೋದಕ್ಕೆ ಬಿಡಲ್ಲ ಅಂತ, ದ್ಯಾಮಕುಮಾರ್ ಪೋಷಕರಿಗೆ ಬೆದರಿಕೆ ಒಡ್ಡಿದ್ದಾರಂತೆ.. ಹೀಗಾಗಿ, ನವ ಜೋಡಿ ಈಗ ಪೊಲೀಸರ ಮೊರೆ ಹೋಗಿದ್ದಾರೆ.

ಜೋಡಿಹಕ್ಕಿಗಳು ಸದ್ಯ ಎಸ್ಪಿ ಜಿ.ರಾಧಿಕಾ ಹಾಗೂ ಚಳ್ಳಕೆರೆ ಠಾಣೆಗೆ ದೂರು‌ ನೀಡಿದ್ದಾರೆ. ಆದ್ರೆ, ಅಂಕಿತಾ ಪೋಷಕರು ಪೊಲೀಸರು ಯಾವ ರೀತಿ ಬುದ್ಧಿ ಹೇಳ್ತಾರೆ. ಜೋಡಿಗೆ ಇರುವ ಭಯವನ್ನ ಹೇಗೆ ದೂರ ಮಾಡ್ತಾರೆ ನೋಡ್ಬೇಕು.

ವರದಿ: ಬಸವರಾಜ ಮುದನೂರ್, tv9 ಚಿತ್ರದುರ್ಗ

ಇದನ್ನೂ ಓದಿ:   ಪ್ರೇಮಿಗಳು ಇಬ್ಬರೂ ತಬ್ಬಿಕೊಂಡು ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿದರು! ಮುಂದೇನಾದರು?

Published On - 8:26 am, Wed, 1 December 21

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!