AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರೋಧದ ನಡುವೆ ಪ್ರೀತಿಸಿ ಮದುವೆಯಾದ ಜೋಡಿಗೆ ಪೋಷಕರೇ ವಿಲನ್, ನವಜೋಡಿಗೆ ಜೀವ ಬೆದರಿಕೆ

ಜಾತಿ ಅನ್ನೋ ಗೋಡೆಯನ್ನೇ ಮುಂದಿಟ್ಟುಕೊಂಡು ಅಂಕಿತಾ ಪೋಷಕರು, ಜೋಡಿಗೆ ಅಡ್ಡಿಯಾಗಿದ್ದಾರೆ. ನಮ್ಮ ಹುಡುಗಿಯನ್ನು ವಾಪಾಸ್ ಕಳಿಸಿ.. ಬೇಕಿದ್ದರೆ ದುಡ್ಡು ಕೇಳಿ ಕೊಡುತ್ತೇವೆ. ಇಲ್ಲವಾದಲ್ಲಿ ನಿಮ್ಮನ್ನ ಬಾಳೋದಕ್ಕೆ ಬಿಡಲ್ಲ ಅಂತ, ದ್ಯಾಮಕುಮಾರ್ ಪೋಷಕರಿಗೆ ಬೆದರಿಕೆ ಒಡ್ಡಿದ್ದಾರಂತೆ..

ವಿರೋಧದ ನಡುವೆ ಪ್ರೀತಿಸಿ ಮದುವೆಯಾದ ಜೋಡಿಗೆ ಪೋಷಕರೇ ವಿಲನ್, ನವಜೋಡಿಗೆ ಜೀವ ಬೆದರಿಕೆ
ವಿರೋಧದ ನಡುವೆ ಪ್ರೀತಿಸಿ ಮದುವೆಯಾದ ಜೋಡಿಗೆ ಪೋಷಕರೇ ವಿಲನ್, ನವಜೋಡಿಗೆ ಜೀವ ಬೆದರಿಕೆ
TV9 Web
| Edited By: |

Updated on:Dec 01, 2021 | 8:29 AM

Share

ಚಿತ್ರದುರ್ಗ: ಒಂದೇ ಊರಿನ ಯುವಕ ಯುವತಿ ಕಾಲೇಜಿಗೆ ಹೋಗಬೇಕಾದ್ರೆ, ಪ್ರೀತಿಯ ಬಲೆಗೆ ಬಿದಿದ್ರು. ಆದ್ರೆ, ಜತೆಯಾಗಿ ಬಾಳೋಣ ಅಂದುಕೊಂಡಿದ್ದ ಜೋಡಿಗೆ, ಹತ್ತಾರು ವಿಘ್ನ ಎದುರಾಗಿದೆ. ಪೋಷಕರೇ ವಿಲನ್ ಆಗಿದ್ದಾರೆ. ಚಿತ್ರದುರ್ಗದ ಚಳ್ಳಕೆರೆಯ ಗೋಪನಹಳ್ಳಿಯ ಪ್ರೇಮಿಗಳಿಗೆ ಪೋಷಕರು ಅಡ್ಡಿಯಾಗಿದ್ದಾರೆ. ಮದ್ವೆಯಾಗಿದ್ರೂ ಇವರ ಪ್ರಾಣ ಹಿಂಡುತ್ತಿದ್ದಾರೆ.

ಅಂಕಿತಾ ಹಾಗೂ ದ್ಯಾಮಕುಮಾರ್ ಎಂಬ ಯುವ ಜೋಡಿ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸಿದ್ರು. ಚಿತ್ರದುರ್ಗದ ಕಾಲೇಜಿನಲ್ಲಿ ಅಂಕಿತಾ ಸೆಕೆಂಡ್ ಇಯರ್ ಬಿಎ ಓದ್ತಿದ್ದು, ದ್ಯಾಮಕುಮಾರ್ ಐಟಿಐ ಮಾಡಿದ್ದಾನೆ. ಆದ್ರೆ, ಇವರಿಬ್ಬರ ಪ್ರೀತಿ ವಿಷ್ಯ ಅಂಕಿತಾ ಕುಟುಂಬಕ್ಕೆ ಗೊತ್ತಾಗಿತ್ತು. ದ್ಯಾಮಕುಮಾರ್ ಅನ್ಯಜಾತಿಯವನು ಅಂತ ಪ್ರೀತಿಗೆ ಅಡ್ಡಿಪಡಿಸಿ, ಬೇರೊಬ್ಬರ ಜತೆ ಮದುವೆಗೆ ಪ್ಲಾನ್ ಮಾಡಿದ್ರು. ಹೀಗಾಗಿ, ವಾರದ ಹಿಂದೆ ಈ ಜೋಡಿ, ಚಿತ್ರದುರ್ಗದ ಕಣಿವೆ ಮಾರಮ್ಮ ದೇಗುಲಕ್ಕೆ ತೆರಳಿ ಮದುವೆ ಆಗಿದ್ರು. ಬಳಿಕ ಪೋಷಕರ ಕಣ್ತಪ್ಪಿಸಿ ಊರುರು ಅಲೆಯುತ್ತಿರುವ ಜೋಡಿಗೆ, ಜೀವ ಬೆದರಿಕೆ ಹಾಕ್ತಿದ್ದಾರಂತೆ.

ctr love threat

ಅಂಕಿತಾ ಹಾಗೂ ದ್ಯಾಮಕುಮಾರ್

ಜಾತಿ ಅನ್ನೋ ಗೋಡೆಯನ್ನೇ ಮುಂದಿಟ್ಟುಕೊಂಡು ಅಂಕಿತಾ ಪೋಷಕರು, ಜೋಡಿಗೆ ಅಡ್ಡಿಯಾಗಿದ್ದಾರೆ. ನಮ್ಮ ಹುಡುಗಿಯನ್ನು ವಾಪಾಸ್ ಕಳಿಸಿ.. ಬೇಕಿದ್ದರೆ ದುಡ್ಡು ಕೇಳಿ ಕೊಡುತ್ತೇವೆ. ಇಲ್ಲವಾದಲ್ಲಿ ನಿಮ್ಮನ್ನ ಬಾಳೋದಕ್ಕೆ ಬಿಡಲ್ಲ ಅಂತ, ದ್ಯಾಮಕುಮಾರ್ ಪೋಷಕರಿಗೆ ಬೆದರಿಕೆ ಒಡ್ಡಿದ್ದಾರಂತೆ.. ಹೀಗಾಗಿ, ನವ ಜೋಡಿ ಈಗ ಪೊಲೀಸರ ಮೊರೆ ಹೋಗಿದ್ದಾರೆ.

ಜೋಡಿಹಕ್ಕಿಗಳು ಸದ್ಯ ಎಸ್ಪಿ ಜಿ.ರಾಧಿಕಾ ಹಾಗೂ ಚಳ್ಳಕೆರೆ ಠಾಣೆಗೆ ದೂರು‌ ನೀಡಿದ್ದಾರೆ. ಆದ್ರೆ, ಅಂಕಿತಾ ಪೋಷಕರು ಪೊಲೀಸರು ಯಾವ ರೀತಿ ಬುದ್ಧಿ ಹೇಳ್ತಾರೆ. ಜೋಡಿಗೆ ಇರುವ ಭಯವನ್ನ ಹೇಗೆ ದೂರ ಮಾಡ್ತಾರೆ ನೋಡ್ಬೇಕು.

ವರದಿ: ಬಸವರಾಜ ಮುದನೂರ್, tv9 ಚಿತ್ರದುರ್ಗ

ಇದನ್ನೂ ಓದಿ:   ಪ್ರೇಮಿಗಳು ಇಬ್ಬರೂ ತಬ್ಬಿಕೊಂಡು ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿದರು! ಮುಂದೇನಾದರು?

Published On - 8:26 am, Wed, 1 December 21

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್