AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರೋಧದ ನಡುವೆ ಪ್ರೀತಿಸಿ ಮದುವೆಯಾದ ಜೋಡಿಗೆ ಪೋಷಕರೇ ವಿಲನ್, ನವಜೋಡಿಗೆ ಜೀವ ಬೆದರಿಕೆ

ಜಾತಿ ಅನ್ನೋ ಗೋಡೆಯನ್ನೇ ಮುಂದಿಟ್ಟುಕೊಂಡು ಅಂಕಿತಾ ಪೋಷಕರು, ಜೋಡಿಗೆ ಅಡ್ಡಿಯಾಗಿದ್ದಾರೆ. ನಮ್ಮ ಹುಡುಗಿಯನ್ನು ವಾಪಾಸ್ ಕಳಿಸಿ.. ಬೇಕಿದ್ದರೆ ದುಡ್ಡು ಕೇಳಿ ಕೊಡುತ್ತೇವೆ. ಇಲ್ಲವಾದಲ್ಲಿ ನಿಮ್ಮನ್ನ ಬಾಳೋದಕ್ಕೆ ಬಿಡಲ್ಲ ಅಂತ, ದ್ಯಾಮಕುಮಾರ್ ಪೋಷಕರಿಗೆ ಬೆದರಿಕೆ ಒಡ್ಡಿದ್ದಾರಂತೆ..

ವಿರೋಧದ ನಡುವೆ ಪ್ರೀತಿಸಿ ಮದುವೆಯಾದ ಜೋಡಿಗೆ ಪೋಷಕರೇ ವಿಲನ್, ನವಜೋಡಿಗೆ ಜೀವ ಬೆದರಿಕೆ
ವಿರೋಧದ ನಡುವೆ ಪ್ರೀತಿಸಿ ಮದುವೆಯಾದ ಜೋಡಿಗೆ ಪೋಷಕರೇ ವಿಲನ್, ನವಜೋಡಿಗೆ ಜೀವ ಬೆದರಿಕೆ
TV9 Web
| Edited By: |

Updated on:Dec 01, 2021 | 8:29 AM

Share

ಚಿತ್ರದುರ್ಗ: ಒಂದೇ ಊರಿನ ಯುವಕ ಯುವತಿ ಕಾಲೇಜಿಗೆ ಹೋಗಬೇಕಾದ್ರೆ, ಪ್ರೀತಿಯ ಬಲೆಗೆ ಬಿದಿದ್ರು. ಆದ್ರೆ, ಜತೆಯಾಗಿ ಬಾಳೋಣ ಅಂದುಕೊಂಡಿದ್ದ ಜೋಡಿಗೆ, ಹತ್ತಾರು ವಿಘ್ನ ಎದುರಾಗಿದೆ. ಪೋಷಕರೇ ವಿಲನ್ ಆಗಿದ್ದಾರೆ. ಚಿತ್ರದುರ್ಗದ ಚಳ್ಳಕೆರೆಯ ಗೋಪನಹಳ್ಳಿಯ ಪ್ರೇಮಿಗಳಿಗೆ ಪೋಷಕರು ಅಡ್ಡಿಯಾಗಿದ್ದಾರೆ. ಮದ್ವೆಯಾಗಿದ್ರೂ ಇವರ ಪ್ರಾಣ ಹಿಂಡುತ್ತಿದ್ದಾರೆ.

ಅಂಕಿತಾ ಹಾಗೂ ದ್ಯಾಮಕುಮಾರ್ ಎಂಬ ಯುವ ಜೋಡಿ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸಿದ್ರು. ಚಿತ್ರದುರ್ಗದ ಕಾಲೇಜಿನಲ್ಲಿ ಅಂಕಿತಾ ಸೆಕೆಂಡ್ ಇಯರ್ ಬಿಎ ಓದ್ತಿದ್ದು, ದ್ಯಾಮಕುಮಾರ್ ಐಟಿಐ ಮಾಡಿದ್ದಾನೆ. ಆದ್ರೆ, ಇವರಿಬ್ಬರ ಪ್ರೀತಿ ವಿಷ್ಯ ಅಂಕಿತಾ ಕುಟುಂಬಕ್ಕೆ ಗೊತ್ತಾಗಿತ್ತು. ದ್ಯಾಮಕುಮಾರ್ ಅನ್ಯಜಾತಿಯವನು ಅಂತ ಪ್ರೀತಿಗೆ ಅಡ್ಡಿಪಡಿಸಿ, ಬೇರೊಬ್ಬರ ಜತೆ ಮದುವೆಗೆ ಪ್ಲಾನ್ ಮಾಡಿದ್ರು. ಹೀಗಾಗಿ, ವಾರದ ಹಿಂದೆ ಈ ಜೋಡಿ, ಚಿತ್ರದುರ್ಗದ ಕಣಿವೆ ಮಾರಮ್ಮ ದೇಗುಲಕ್ಕೆ ತೆರಳಿ ಮದುವೆ ಆಗಿದ್ರು. ಬಳಿಕ ಪೋಷಕರ ಕಣ್ತಪ್ಪಿಸಿ ಊರುರು ಅಲೆಯುತ್ತಿರುವ ಜೋಡಿಗೆ, ಜೀವ ಬೆದರಿಕೆ ಹಾಕ್ತಿದ್ದಾರಂತೆ.

ctr love threat

ಅಂಕಿತಾ ಹಾಗೂ ದ್ಯಾಮಕುಮಾರ್

ಜಾತಿ ಅನ್ನೋ ಗೋಡೆಯನ್ನೇ ಮುಂದಿಟ್ಟುಕೊಂಡು ಅಂಕಿತಾ ಪೋಷಕರು, ಜೋಡಿಗೆ ಅಡ್ಡಿಯಾಗಿದ್ದಾರೆ. ನಮ್ಮ ಹುಡುಗಿಯನ್ನು ವಾಪಾಸ್ ಕಳಿಸಿ.. ಬೇಕಿದ್ದರೆ ದುಡ್ಡು ಕೇಳಿ ಕೊಡುತ್ತೇವೆ. ಇಲ್ಲವಾದಲ್ಲಿ ನಿಮ್ಮನ್ನ ಬಾಳೋದಕ್ಕೆ ಬಿಡಲ್ಲ ಅಂತ, ದ್ಯಾಮಕುಮಾರ್ ಪೋಷಕರಿಗೆ ಬೆದರಿಕೆ ಒಡ್ಡಿದ್ದಾರಂತೆ.. ಹೀಗಾಗಿ, ನವ ಜೋಡಿ ಈಗ ಪೊಲೀಸರ ಮೊರೆ ಹೋಗಿದ್ದಾರೆ.

ಜೋಡಿಹಕ್ಕಿಗಳು ಸದ್ಯ ಎಸ್ಪಿ ಜಿ.ರಾಧಿಕಾ ಹಾಗೂ ಚಳ್ಳಕೆರೆ ಠಾಣೆಗೆ ದೂರು‌ ನೀಡಿದ್ದಾರೆ. ಆದ್ರೆ, ಅಂಕಿತಾ ಪೋಷಕರು ಪೊಲೀಸರು ಯಾವ ರೀತಿ ಬುದ್ಧಿ ಹೇಳ್ತಾರೆ. ಜೋಡಿಗೆ ಇರುವ ಭಯವನ್ನ ಹೇಗೆ ದೂರ ಮಾಡ್ತಾರೆ ನೋಡ್ಬೇಕು.

ವರದಿ: ಬಸವರಾಜ ಮುದನೂರ್, tv9 ಚಿತ್ರದುರ್ಗ

ಇದನ್ನೂ ಓದಿ:   ಪ್ರೇಮಿಗಳು ಇಬ್ಬರೂ ತಬ್ಬಿಕೊಂಡು ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿದರು! ಮುಂದೇನಾದರು?

Published On - 8:26 am, Wed, 1 December 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ