AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ವೆಯಾದ ಏಳೇ ತಿಂಗಳಿಗೆ ನವವಧು ಇದ್ದಕ್ಕಿದ್ದಂತೆ ಸಾವು: ಸಾವಿನ ಸುತ್ತ ಅನುಮಾನದ ಹುತ್ತ

ಏಳು ತಿಂಗಳ ಹಿಂದೆ ಪ್ರೇಮ ವಿವಾಹವಾಗಿದ್ದ ನವ ವಿವಾಹಿತೆ ಏಕಾಏಕಿ ಅಸಹಜವಾಗಿ ಸಾವನ್ನಪ್ಪಿರುವಂತಹ ಘಟನೆ ಚಿತ್ರದುರ್ಗ ತಾಲೂಕಿನ ಹಾಯ್ಕಲ್ ಗ್ರಾಮದಲ್ಲಿ ನಡೆದಿದೆ. ಸದ್ಯ ಮೃತಳ ಸಂಬಂಧಿಕರು ಆಕೆಯ ಗಂಡ ಮತ್ತು ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ ಕೇಳಿಬಂದಿದ್ದು, ಆಕ್ರೋಶದ ಕಟ್ಟೆ ಒಡೆದಿದೆ.

ಮದ್ವೆಯಾದ ಏಳೇ ತಿಂಗಳಿಗೆ ನವವಧು ಇದ್ದಕ್ಕಿದ್ದಂತೆ ಸಾವು: ಸಾವಿನ ಸುತ್ತ ಅನುಮಾನದ ಹುತ್ತ
ತನುಜಾ, ವೆಂಕಟೇಶ್Image Credit source: tv9 kannada
ಬಸವರಾಜ ಮುದನೂರ್
| Edited By: |

Updated on: Apr 24, 2026 | 7:47 PM

Share

ಚಿತ್ರದುರ್ಗ, ಏಪ್ರಿಲ್​ 24: ಅತ್ತಿಗೆಯ ತಂಗಿ ಹಾಗೂ ಭಾವನ ತಮ್ಮನ ನಡುವೆ ಪ್ರೇಮಾಂಕುರವಾಗಿತ್ತು. ಪೋಷಕರ ವಿರೋಧದ ನಡುವೆ ಏಳು ತಿಂಗಳ ಹಿಂದಷ್ಟೇ ಮದುವೆ ಕೂಡ ಆಗಿದ್ದರು. ಆದರೆ ಪ್ರೀತಿಸಿ ಮದುವೆ ಆಗಿದ್ದ ನವವಿವಾಹಿತೆ ಅಸಹಜವಾಗಿ ಸಾವಿಗೀಡಾಗಿದ್ದಾಳೆ (death). ಹೀಗಾಗಿ ಇತ್ತ ಪತಿ ಮತ್ತು ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ ಕೇಳಿ ಬಂದಿದೆ. ಕೋಟೆನಾಡು ಚಿತ್ರದುರ್ಗ (Chitradurga) ತಾಲೂಕಿನ ಹಾಯ್ಕಲ್ ಗ್ರಾಮದಲ್ಲಿ ಘಟನೆ ನಡೆದಿದೆ.

ಚಿತ್ರದುರ್ಗದ ಕಾಮನಬಾವಿ ಬಡಾವಣೆಯ ಮೀನಾಕ್ಷಿ ಮತ್ತು ಹೊನ್ನೂರಪ್ಪ ದಂಪತಿಯ ಮೊದಲ ಪುತ್ರಿ ಅನು ಹಾಯ್ಕಲ್ ಗ್ರಾಮದ ಮೈಲಾರಿಗೆ ಮದುವೆ ಮಾಡಿಕೊಟ್ಟಿದ್ದರು. ಮೈಲಾರಿ ಸಹೋದರ ವೆಂಕಟೇಶ್, ಅತ್ತಿಗೆಯ ಸಹೋದರಿ ತನುಜಾಳ ಮೇಲೆ ಕಣ್ಣುಹಾಕಿದ್ದ. ಕಾಡಿ-ಬೇಡಿ ಪ್ರೀತಿಸಿ ಸೈ ಎನ್ನಿಸಿಕೊಂಡಿದ್ದ. ತನುಜಾ ಸಹ ಭಾವನ ತಮ್ಮ ವೆಂಕಟೇಶನನ್ನು ಪ್ರೀತಿಸಿದ್ದು, ಪೋಷಕರ ವಿರೋಧದ ನಡುವೆ ಏಳು ತಿಂಗಳ ಹಿಂದೆ ಲವ್​ ಮ್ಯಾರೇಜ್​ ಆಗಿದ್ದರು.

ನಡೆದಿದ್ದೇನು?

ಏಪ್ರಿಲ್ 21 ರಂದು ತನುಜಾ ಬೈಕಿನಿಂದ ಬಿದ್ದು ಗಾಯಗೊಂಡಿದ್ದಾಳೆ ಎಂದು ವೆಂಕಟೇಶ್ ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದ. ಚಿತ್ರದುರ್ಗ, ದಾವಣಗೆರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಕೊನೆಗೂ ಚಿಕಿತ್ಸೆ ಫಲಿಸದೆ ತನುಜಾ ಮೃತಪಟ್ಟಿದ್ದಾಳೆ. ಆದರೆ ಮರಣೋತ್ತರ ಪರೀಕ್ಷೆಯ ವರದಿ ನೋಡಿದರೆ ಪೆಟ್ಟು ಬಿದ್ದು ಸಾವು ಎಂಬುದು ತಿಳಿಯುತ್ತಿದೆ. ಹೀಗಾಗಿ ಪತಿ ವೆಂಕಟೇಶ್ ಮತ್ತು ಆತನ ಕುಟುಂಬಸ್ಥರೇ ಹೊಡೆದು ಕೊಂದಿದ್ದಾರೆ. ಬೈಕಿನಿಂದ ಬಿದ್ದಿದ್ದಾಳೆಂದು ಕಥೆ ಕಟ್ಟುತ್ತಿದ್ದಾರೆ ಎಂದು ಮೃತಳ ಸಂಬಂಧಿಕರು ಗಂಭೀರ ಆರೋಪ ಮಾಡಿದ್ದಾರೆ.

ಅಕ್ಕಪಕ್ಕದ ಮನೆಯವರ ಮಧ್ಯೆ ಗಲಾಟೆ: ಹಲ್ಲೆ

ತುರವನೂರು ಪೊಲೀಸ್ ಠಾಣೆಗೆ ಈ ಬಗ್ಗೆ ಪೋಷಕರು ದೂರು ಸಲ್ಲಿಸಿದ್ದಾರೆ. ತುರುವನೂರು ಠಾಣೆಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಈ ವೇಳೆ ಅಕ್ಕಪಕ್ಕದ ಮನೆಯವರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿತ್ತು. ಆಗ ಕೆಲ ಮಹಿಳೆಯರು ತನುಜಾಳ ಮೇಲೆ ಹಲ್ಲೆ ನಡೆಸಿದ್ದರು. ಬಳಿಕ ವೆಂಕಟೇಶ್ ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದನೆಂಬ ಮಾತು ಕೇಳಿಬಂದಿದೆ. ಹಾಗಾದರೆ ತನುಜಾ ಮೇಲೆ ಹಲ್ಲೆ ಮಾಡಿದವರು ಯಾರು, ಯಾವ ಕಾರಣಕ್ಕೆ ಹಲ್ಲೆ ನಡೆದಿದೆ ಎಂಬುದು ಸ್ಪಷ್ಟವಾಗಬೇಕಿದೆ. ಈ ಬಗ್ಗೆ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು, ಅಲ್ಲಿಯವರೆಗೆ ಶವ ಸಂಸ್ಕಾರ ಮಾಡಲು ಬಿಡುವುದಿಲ್ಲ ಎಂದು ಮೃತಳ ಅತ್ತೆ ಗಂಗಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆಸಿ ಕುಟುಂಬದವರ ಮೇಲೆ ಹಲ್ಲೆ

ಚಿತ್ರದುರ್ಗ ತಾಲೂಕಿನ ಹಾಯ್ಕಲ್ ಗ್ರಾಮದಲ್ಲಿ ತನುಜಾ ಅಸಹಜ ಸಾವಿನ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ಪತಿ ವೆಂಕಟೇಶ್ ಮತ್ತು ಕುಟುಂಬಸ್ಥರ ವಿರುದ್ಧ ತುರುವನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರ ತನಿಖೆಯಿಂದ ಅಸಲಿಯತ್ತು ಬಯಲಾಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್