ದುರ್ಗದ ಜಿಲ್ಲಾಸ್ಪತ್ರೆಯಲ್ಲಿ ರಕ್ತ ಸಂಗ್ರಹವೂ ಇಲ್ಲ, ರಕ್ತ ಪೂರೈಕೆಯೂ ಇಲ್ಲ: ಬಡ ರೋಗಿಗಳಿಂದ ಹಿಡಿಶಾಪ

chitradurga district hospital blood bank: ಚಿತ್ರದುರ್ಗ ನಗರದ ಸರ್ಕಾರಿ ಜಿಲ್ಲಾಸ್ಪತ್ರೆ ಹೆಸರಿಗೆ ಮಾತ್ರ ಸರ್ಕಾರಿ ಜಿಲ್ಲಾ ಆಸ್ಪತ್ರೆ ಎಂಬಂತಾಗಿದೆ. ಅಲ್ಲಿ ರಕ್ತ ನಿಧಿ ಕೇಂದ್ರ ಇದೆಯಾದ್ರೂ ರಕ್ತ ಲಭ್ಯವಿಲ್ಲ. ಅಧಿಕಾರಿಗಳ ಬೇಜವಬ್ದಾರಿನತದಿಂದ ರಕ್ತನಿಧಿ ಕೇಂದ್ರವೇ ಸ್ಥಗಿತವಾಗಿದೆ. ಸರ್ಕಾರಿ ಆಸ್ಪತ್ರೆಗೆ ಬರುವ ಬಡ ರೋಗಿಗಳು ಹಿಡಿಶಾಪ ಹಾಕುವುದು ಸಾಮಾನ್ಯವಾಗಿದೆ.

ದುರ್ಗದ ಜಿಲ್ಲಾಸ್ಪತ್ರೆಯಲ್ಲಿ ರಕ್ತ ಸಂಗ್ರಹವೂ ಇಲ್ಲ, ರಕ್ತ ಪೂರೈಕೆಯೂ ಇಲ್ಲ: ಬಡ ರೋಗಿಗಳಿಂದ ಹಿಡಿಶಾಪ
ದುರ್ಗದ ಜಿಲ್ಲಾಸ್ಪತ್ರೆಯಲ್ಲಿ ರಕ್ತ ಸಂಗ್ರಹವೂ ಇಲ್ಲ, ರಕ್ತ ಪೂರೈಕೆಯೂ ಇಲ್ಲ
Edited By: ಸಾಧು ಶ್ರೀನಾಥ್​

Updated on: May 15, 2024 | 10:20 AM

ಅದು ಹೆಸರಿಗೆ ಮಾತ್ರ ಸರ್ಕಾರಿ ಜಿಲ್ಲಾ ಆಸ್ಪತ್ರೆ ಎಂಬಂತಾಗಿದೆ. ಅಲ್ಲಿ ರಕ್ತ ನಿಧಿ ಕೇಂದ್ರ (blood bank) ಇದೆಯಾದ್ರೂ ರಕ್ತ ಮಾತ್ರ ಲಭ್ಯವಿಲ್ಲ. ಅಧಿಕಾರಿಗಳ ಬೇಜವಬ್ದಾರಿನತದಿಂದ ರಕ್ತನಿಧಿ ಕೇಂದ್ರವೇ ಸ್ಥಗಿತವಾಗಿದೆ. ಈ ಕುರಿತು ವರದಿ ಇಲ್ಲಿದೆ ನೋಡಿ. ಸೂಕ್ತ ನಿರ್ವಹಣೆ, ಯಂತ್ರೋಪಕರಣಗಳ ಕೊರತೆ ಹಿನ್ನೆಲೆಯಿಂದಾಗಿ ಕಳೆದ 10 ದಿನಗಳಿಂದ ರಕ್ತ ನಿಧಿ ಕೇಂದ್ರ ಸ್ಥಗಿತಗೊಂಡಿದೆ. ಸರ್ಕಾರಿ ಆಸ್ಪತ್ರೆಗೆ ಬರುವ ಬಡ ರೋಗಿಗಳು ಹಿಡಿಶಾಪ ಹಾಕುವುದು ಸಾಮಾನ್ಯವಾಗಿದೆ. ಈ ದೃಶ್ಯಗಳು ಕಂಡು ಬರುವುದು ಚಿತ್ರದುರ್ಗ ನಗರದ ಸರ್ಕಾರಿ ಜಿಲ್ಲಾಸ್ಪತ್ರೆ (chitradurga district hospital) ಆವರಣದಲ್ಲಿನ ರಕ್ತನಿಧಿ ಕೇಂದ್ರದಲ್ಲಿ. ಹೌದು, ಇದು ಸುಮಾರು 500 ಯುನಿಟ್ ಸಾಮರ್ಥ್ಯವಿರುವ ರಕ್ತ ಸಂಗ್ರಹ ಕೇಂದ್ರವಾಗಿದೆ.

ಪ್ರತಿ ತಿಂಗಳು ಸುಮಾರು 400 ಯುನಿಟ್ ರಕ್ತ ನೀಡಲಾಗುತ್ತದೆ. ಆದ್ರೆ, ಸೂಕ್ತ ನಿರ್ವಹಣೆ ಮತ್ತು ಯಂತ್ರೋಪಕರಣಗಳ ಕೊರತೆ ಪರಿಣಾಮ 10 ದಿನಗಳಿಂದ ರಕ್ತ ನಿಧಿ ಕೇಂದ್ರ ಸ್ಥಗಿತಗೊಂಡಿದೆ. ಹೀಗಾಗಿ, ರಕ್ತ ಸಂಗ್ರಹವೂ ಇಲ್ಲ, ರಕ್ತ ಪೂರೈಕೆಯೂ (No blood collection, no blood supply) ಇಲ್ಲವಾಗಿದೆ. ರಕ್ತದ ಅಗತ್ಯ ಬಿದ್ದಾಗ ಖಾಸಗಿ ಆಸ್ಪತ್ರೆಯ ರಕ್ತನಿಧಿಗಳ ಮೊರೆ ಹೋಗುವ ಅನಿವಾರ್ಯತೆ ಸೃಷ್ಠಿ ಆಗಿದೆ. ಜಿಲ್ಲಾಸ್ಪತ್ರೆಯ ಅಧಿಕಾರಿಗಳು ಮಾತ್ರ ಸ್ಪಷ್ಟ ಮಾಹಿತಿ ನೀಡದೆ ಬೇಜವಾಬ್ದಾರಿತನ ತೋರುತ್ತಿದ್ದಾರೆಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Also Read: ಸಂತಾನಕ್ಕಾಗಿ ವಿದೇಶದಿಂದ ಬರುವ ವಿಶೇಷ ಅತಿಥಿಗಳು! ಬರುವಾಗ ಸಿಂಗಲ್ ಸಿಂಗಲ್ ಹೋಗುವಾಗ ಡಬಲ್ ಡಬಲ್!!

ಇನ್ನು ರಕ್ತ ನಿಧಿ ಕೇಂದ್ರದಲ್ಲಿ ಅಗತ್ಯ ಸೌಲಭ್ಯ, ನಿರ್ವಹಣೆ, ಯಂತ್ರೋಪಕರಣ ಕೊರತೆಯ ನ್ಯೂನತೆಗಳು ಕಂಡು ಬಂದಿವೆ. ಹೀಗಾಗಿ, ಔಷಧ ನಿಯಂತ್ರಣ ಇಲಾಖೆ ರಕ್ತನಿಧಿ ಕೇಂದ್ರದ ಕಾರ್ಯ ಚಟುವಟಿಕೆ ಸ್ಥಗಿತಗೊಳಿಸಲು ಸೂಚನೆ ನೀಡಿದ್ದಾರೆ. ಈ ಬಗ್ಗೆ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಎಸ್ ಪಿ ರವೀಂದ್ರ ಅವ್ರನ್ನು ಕೇಳಿದ್ರೆ ಅಗತ್ಯ ಯಂತ್ರೋಪಕರಣಗಳ ಕೊರತೆ ಕಂಡು ಬಂದ ಹಿನ್ನೆಲೆಯಲ್ಲಿ ಔಷಧ ನಿಯಂತ್ರಣ ಇಲಾಖೆ ರಕ್ತನಿಧಿ ಕೇಂದ್ರದ ಕಾರ್ಯ ಚಟುವಟಿಕೆ ಸ್ಥಗಿತಕ್ಕೆ ಸೂಚಿಸಿತ್ತು. ಸದ್ಯ ನ್ಯೂನತೆ ಸರಿಪಡಿಸಲಾಗಿದ್ದು ಮೇ 21ಕ್ಕೆ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದು ಯಥಾಸ್ಥಿತಿಗೆ ಮರಳುವ ಭರವಸೆಯಿದೆ ಎಂದಿದ್ದಾರೆ.

Also Read: PF Bonus Scheme- 20 ವರ್ಷಕ್ಕಿಂತ ಹೆಚ್ಚು ಕಾಲ ಭವಿಷ್ಯ ನಿಧಿ ಕಟ್ಟಿದ್ದರೆ ನೀವು ಬೋನಸ್ ಹಣ​ ಪಡೆಯಬಹುದು ಗೊತ್ತಾ? ಇಲ್ಲಿದೆ ಲೆಕ್ಕಾಚಾರ

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ನಗರದಲ್ಲಿರುವ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರ ಸದ್ಯ ಸ್ಥಗಿತಗೊಂಡಿದೆ. ಇದು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಹಿಡಿದ ಕನ್ನಡಿಯಾಗಿದೆ. ಹೀಗಾಗಿ, ಇನ್ನಾದ್ರೂ ಆರೋಗ್ಯ ಇಲಾಖೆ ಈ ಬಗ್ಗೆ ಗಮನಹರಿಸಿ ಜಿಲ್ಲಾಸ್ಪತ್ರೆಗೆ ಸೂಕ್ತ ಸರ್ಜರಿ ಮಾಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಸವರಾಜ ಮುದನೂರ್, ಚಿತ್ರದುರ್ಗ

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us