AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ಕಾರಣಕ್ಕೆ ಚನ್ನಕೇಶವ ದೇವಸ್ಥಾನದ ಗರ್ಭಗುಡಿಗೆ ಬಿಡಲಿಲ್ಲ: ಈಶ್ವರಾನಂದಪುರಿ ಸ್ವಾಮೀಜಿ ಬೇಸರ

ಜಾತಿ ಗಣತಿ ವಿಚಾರವಾಗಿ ಮೇಲ್ವರ್ಗ ಹಾಗೂ ಕೆಳವರ್ಗ ಸ್ವಾಮೀಜಿಗಳ ನಡುವೆ ಮುಸುಕಿನ ಗುದ್ದಾಟಗಳು ನಡೆದಿವೆ. ಇದರ ಮಧ್ಯೆ ಜಾತಿ ಕಾರಣಕ್ಕೆ ಚನ್ನಕೇಶವ ದೇವಸ್ಥಾನದ ಗರ್ಭಗುಡಿಗೆ ಬಿಡಲಿಲ್ಲ ಎಂದು ಕನಕ ಪೀಠದ ಈಶ್ವರಾನಂದಪುರಿ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ.

ಜಾತಿ ಕಾರಣಕ್ಕೆ ಚನ್ನಕೇಶವ ದೇವಸ್ಥಾನದ ಗರ್ಭಗುಡಿಗೆ ಬಿಡಲಿಲ್ಲ: ಈಶ್ವರಾನಂದಪುರಿ ಸ್ವಾಮೀಜಿ ಬೇಸರ
ಈಶ್ವರಾನಂದಪುರಿ ಸ್ವಾಮೀಜಿ
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ರಮೇಶ್ ಬಿ. ಜವಳಗೇರಾ|

Updated on:Feb 02, 2024 | 10:55 PM

Share

ಚಿತ್ರದುರ್ಗ, (ಫೆಬ್ರವರಿ 02): ಜಾತಿ ಕಾರಣಕ್ಕೆ ಚನ್ನಕೇಶವ ದೇವಸ್ಥಾನದ ಗರ್ಭಗುಡಿಗೆ ಬಿಡಲಿಲ್ಲ ಎಂದು ಕನಕ ಪೀಠದ ಈಶ್ವರಾನಂದಪುರಿ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯಲ್ಲಿ ನಡೆದ ಪರಿವರ್ತನೆ ಹಾದಿಯಲ್ಲಿ ಮಠಗಳು ಗೋಷ್ಠಿಯಲ್ಲಿ ಮಾತನಾಡಿದ ಈಶ್ವರಾನಂದಪುರಿ ಸ್ವಾಮೀಜಿ, ಬಾಗೂರು ಗ್ರಾಮದ ಚನ್ನಕೇಶವ ದೇವಸ್ಥಾನದ ಗರ್ಭಗುಡಿಗೆ ಬಿಡಲಿಲ್ಲ. ನಾವು ದೇವಸ್ಥಾನಕ್ಕೆ ಹೋಗಿದ್ದೆವೆಂಬ ಕಾರಣಕ್ಕೆ ಸ್ವಚ್ಛಗೊಳಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಕುರುಬ ಸಮುದಾಯದ ಸ್ವಾಮೀಜಿ ಒಳಗೆ ಬಂದರೆಂಬ ಕಾರಣಕ್ಕೆ ಸ್ವಚ್ಛಗೊಳಿಸಿದ್ದಾರೆ. ನಾವು ಹೋಗಿದ್ದಕ್ಕಾಗಿ ದೇಗುಲ ಸ್ವಚ್ಛವಾಯಿತೆಂದು ಟಾಂಗ್ ಕೊಟ್ಟ ಸ್ವಾಮೀಜಿ, ಇನ್ಮುಂದೆ ಎಂದಿಗೂ ಚನ್ನಕೇಶವ ದೇವಸ್ಥಾನಕ್ಕೆ ನಾವು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ವೈಕುಂಠ ಏಕಾದಶಿಗೆ ದೇಗುಲಕ್ಕೆ ಹೋಗಿದ್ದಾಗ ನರಕ ತೋರಿಸಿಬಿಟ್ಟರು. ಪೂಜಾರಿ ಹೆಣ್ಣುಮಕ್ಕಳಿಗೆಲ್ಲಾ ಗರ್ಭಗುಡಿ ಪ್ರವೇಶಿಸಲು ಬಿಟ್ಟಿದ್ದರು. ಮಠಾಧೀಶರಾದ ನಮಗೇ ಚನ್ನಕೇಶವ ದೇಗುಲದ ಗರ್ಭಗುಡಿಗೆ ಬಿಡಲಿಲ್ಲ. ಮುಜರಾಯಿ ಇಲಾಖೆ ದೇಗುಲ ಎಂದು ಗೊತ್ತಿದ್ದರೆ ಪ್ರತಿಭಟಿಸುತ್ತಿದ್ದೆವು. ಉಡುಪಿಯಲ್ಲಿ ಕನಕದಾಸರು ಪ್ರತಿಭಟಿಸಿದಂತೆ ಪ್ರತಿಭಟನೆ ಮಾಡ್ತಿದ್ದೆವು. ಆದ್ರೆ, ಆಗ ಮುಜರಾಯಿ ಇಲಾಖೆ ದೇಗುಲ ಎಂಬುದು ನಮಗೆ ತಿಳಿದಿರಲಿಲ್ಲ ಎಂದು ಹೇಳಿದರು.

ಇನ್ನು ಗೋಷ್ಠಿಯಲ್ಲಿ ಸಾಣೇಹಳ್ಳಿ ತರಳಬಾಳು ಮಠದ ಡಾ.ಪಂಡಿತಾರಾಧ್ಯಶ್ರೀ, ಶಿವಶರಣ ಮಾದಾರ ಚನ್ನಯ್ಯ ಮಠದ ಬಸವಮೂರ್ತಿ ಮಾದಾರ ಚನ್ನಯ್ಯಶ್ರೀ, ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಕುಂಚಿಟಿಗ ಮಠದ ಶಾಂತವೀರ ಸ್ವಾಮೀಜಿ ಉಪಸ್ಥಿತರಿದ್ದರು.

Published On - 10:50 pm, Fri, 2 February 24

Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?