AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಕ್ಕೆ ಈರುಳ್ಳಿ ಬೆಳೆ ಕುಂಠಿತ; ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ, ರೈತನ ಪಾಲಿಗೂ ಕಣ್ಣೀರುಳ್ಳಿ

ಅದು ರಾಜ್ಯದಲ್ಲೇ ಅತಿ ಹೆಚ್ಚು ಈರುಳ್ಳಿ ಬೆಳೆಯುವ ಪ್ರದೇಶಗಳಲ್ಲೊಂದು. ಆದ್ರೆ, ಈ ವರ್ಷ ಬರಗಾಲದಿಂದಾಗಿ ಈರುಳ್ಳಿ ಬೆಳೆ ಬಿತ್ತನೆ ಕುಂಠಿತ ಆಗಿದೆ. ಇದೇ ವೇಳೆ ಈರುಳ್ಳಿ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದ್ದು, ರೈತರು ಕೈಕೈ ಹಿಚುಕಿಕೊಳ್ಳುವ ಸ್ಥಿತಿ ನಿರ್ಮಾಣ ಆಗಿದೆ. 

ಬರಕ್ಕೆ ಈರುಳ್ಳಿ ಬೆಳೆ ಕುಂಠಿತ; ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ, ರೈತನ ಪಾಲಿಗೂ ಕಣ್ಣೀರುಳ್ಳಿ
ಬೆಲೆ ಏರಿಕೆ ಕಂಡ ಸಮಯದಲ್ಲಿ ಕುಂಠಿತವಾದ ಈರುಳ್ಳಿ ಬೆಲೆ
ಬಸವರಾಜ ಮುದನೂರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 27, 2023 | 9:05 PM

Share

ಚಿತ್ರದುರ್ಗ, ಅ.27: ಭೀಕರ ಬರಗಾಲದ ಪರಿಣಾಮ ಈರುಳ್ಳಿ ಬೆಳೆ(Onion Crop)  ಹಾಳಾಗಿದ್ದರೆ, ಇನ್ನೊಂದೆಡೆ ಬೆಲೆ ಗಗನಕ್ಕೇರಿದೆ. ಇದರಿಂದ ರೈತ ಕಂಗಾಲಾಗಿದ್ದಾನೆ. ಹೌದು, ಕೋಟೆನಾಡು ಚಿತ್ರದುರ್ಗ(Chitradurga) ಜಿಲ್ಲೆಯಲ್ಲಿ ಸುಮಾರು 40ಸಾವಿರ ಹೆಕ್ಟೇರ್​ಗೂ ಹೆಚ್ಚು ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಮಾಡಲಾಗುತ್ತದೆ. ಬರಗಾಲದ ಪರಿಣಾಮ ಈ ವರ್ಷ 18.220 ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಆಗಿದೆ. ಆದ್ರೆ, ಬರದ ಪರಿಣಾಮ ಈರುಳ್ಳಿ ವಿಫಲವಾಗಿದೆ. ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಪಟ್ಟರೂ ಸಹ ಲೋಡ್ ಶೆಡ್ಡಿಂಗ್​ನಿಂದಾಗಿ ಈರುಳ್ಳಿ ಬೆಳೆ ಬಹುತೇಕ ವಿಫಲವಾಗಿದೆ.

ಗಗನಕ್ಕೇರಿದ ಈರುಳ್ಳಿ ಬೆಲೆ

ಇದೇ ಸಂದರ್ಭದಲ್ಲಿ ಕೆ.ಜಿಗೆ 20 ರಿಂದ 30 ರೂಪಾಯಿಯಿದ್ದ ಈರುಳ್ಳಿ ಬೆಲೆ ಈಗ 50 ರಿಂದ 60ರೂಪಾಯಿಗೆ ಏರಿಕೆ ಆಗಿದೆ. ಹೀಗಾಗಿ, ಒಂದು ಕಡೆ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿದೆ. ಮತ್ತೊಂದು ಕಡೆ ಬೆಳೆ ಹಾನಿಯಾದ ವೇಳೆಯೇ ಬೆಲೆ ಏರಿಕೆ ಆಗಿದ್ದು, ರೈತರು ಕೈಕೈ ಹಿಚುಕಿಕೊಳ್ಳುವಂತಾಗಿದೆ. ಇನ್ನು ಈರುಳ್ಳಿ ಬಂಪರ್ ಬೆಳೆ ತೆಗೆದು ಬದುಕು ಕಟ್ಟಿಕೊಳ್ಳುವ ಕನಸು ಕಂಡಿದ್ದ ರೈತರಿಗೆ ಶಾಕ್ ಆಗಿದೆ. ಈರುಳ್ಳಿ ಬೆಳೆಯನ್ನೇ ಪ್ರಧಾನವಾಗಿ ಬೆಳೆಯುವ ಚಿತ್ರದುರ್ಗ ಜಿಲ್ಲೆಯ ರೈತರು ಧರ್ಮ ಸಂಕಟಕ್ಕೆ ಸಿಲುಕುವಂತಾಗಿದೆ.

ಇದನ್ನೂ ಓದಿ:ಮಂಗಗಳ ದಾಳಿಗೆ ಈರುಳ್ಳಿ ಬೆಳೆ ನಾಶ: ಬರಗಾಲದಲ್ಲಿ ಬೆಳೆ ಉಳಿಸಿಕೊಳ್ಳಲು ರೈತರ ಪರದಾಟ

ಈಗಿನ ಈರುಳ್ಳಿ ಬೆಲೆಯ ಆಧಾರದ ಮೇಲೆ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರಕ್ಕಾಗಿ ಆಗ್ರಹ

ಹೀಗಾಗಿ, ಈಗಿನ ಈರುಳ್ಳಿ ಬೆಲೆಯ ಆಧಾರದ ಮೇಲೆ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಬೇಕೆಂಬುದು ರೈತ ಮುಖಂಡರ ಆಗ್ರಹಿಸಿದ್ದು, vo-3: ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಈರುಳ್ಳಿ ಬೆಳೆಗಾರರು ಕಂಗಾಲಾಗಿದ್ದಾರೆ. ಬೆಳೆ ಹಾನಿಯಾದ ಸಂದರ್ಭದಲ್ಲಿ ಈರುಳ್ಳಿಗೆ ಭಾರೀ ಬೇಡಿಕೆ ಬಂದಿರುವುದು ರೈತರನ್ನು ಮತ್ತಷ್ಟು ಕುಗ್ಗುವಂತಾಗಿಸಿದೆ. ಹೀಗಾಗಿ, ಸರ್ಕಾರ ಈರುಳ್ಳಿ ಬೆಳೆಗಾರರತ್ತ ಗಮನಹರಿಸಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕೆಂಬುದು ರೈತರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ