ಬರಕ್ಕೆ ಈರುಳ್ಳಿ ಬೆಳೆ ಕುಂಠಿತ; ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ, ರೈತನ ಪಾಲಿಗೂ ಕಣ್ಣೀರುಳ್ಳಿ

ಅದು ರಾಜ್ಯದಲ್ಲೇ ಅತಿ ಹೆಚ್ಚು ಈರುಳ್ಳಿ ಬೆಳೆಯುವ ಪ್ರದೇಶಗಳಲ್ಲೊಂದು. ಆದ್ರೆ, ಈ ವರ್ಷ ಬರಗಾಲದಿಂದಾಗಿ ಈರುಳ್ಳಿ ಬೆಳೆ ಬಿತ್ತನೆ ಕುಂಠಿತ ಆಗಿದೆ. ಇದೇ ವೇಳೆ ಈರುಳ್ಳಿ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದ್ದು, ರೈತರು ಕೈಕೈ ಹಿಚುಕಿಕೊಳ್ಳುವ ಸ್ಥಿತಿ ನಿರ್ಮಾಣ ಆಗಿದೆ. 

ಬರಕ್ಕೆ ಈರುಳ್ಳಿ ಬೆಳೆ ಕುಂಠಿತ; ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ, ರೈತನ ಪಾಲಿಗೂ ಕಣ್ಣೀರುಳ್ಳಿ
ಬೆಲೆ ಏರಿಕೆ ಕಂಡ ಸಮಯದಲ್ಲಿ ಕುಂಠಿತವಾದ ಈರುಳ್ಳಿ ಬೆಲೆ
Edited By: ಕಿರಣ್ ಹನುಮಂತ್​ ಮಾದಾರ್

Updated on: Oct 27, 2023 | 9:05 PM

ಚಿತ್ರದುರ್ಗ, ಅ.27: ಭೀಕರ ಬರಗಾಲದ ಪರಿಣಾಮ ಈರುಳ್ಳಿ ಬೆಳೆ(Onion Crop)  ಹಾಳಾಗಿದ್ದರೆ, ಇನ್ನೊಂದೆಡೆ ಬೆಲೆ ಗಗನಕ್ಕೇರಿದೆ. ಇದರಿಂದ ರೈತ ಕಂಗಾಲಾಗಿದ್ದಾನೆ. ಹೌದು, ಕೋಟೆನಾಡು ಚಿತ್ರದುರ್ಗ(Chitradurga) ಜಿಲ್ಲೆಯಲ್ಲಿ ಸುಮಾರು 40ಸಾವಿರ ಹೆಕ್ಟೇರ್​ಗೂ ಹೆಚ್ಚು ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಮಾಡಲಾಗುತ್ತದೆ. ಬರಗಾಲದ ಪರಿಣಾಮ ಈ ವರ್ಷ 18.220 ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಆಗಿದೆ. ಆದ್ರೆ, ಬರದ ಪರಿಣಾಮ ಈರುಳ್ಳಿ ವಿಫಲವಾಗಿದೆ. ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಪಟ್ಟರೂ ಸಹ ಲೋಡ್ ಶೆಡ್ಡಿಂಗ್​ನಿಂದಾಗಿ ಈರುಳ್ಳಿ ಬೆಳೆ ಬಹುತೇಕ ವಿಫಲವಾಗಿದೆ.

ಗಗನಕ್ಕೇರಿದ ಈರುಳ್ಳಿ ಬೆಲೆ

ಇದೇ ಸಂದರ್ಭದಲ್ಲಿ ಕೆ.ಜಿಗೆ 20 ರಿಂದ 30 ರೂಪಾಯಿಯಿದ್ದ ಈರುಳ್ಳಿ ಬೆಲೆ ಈಗ 50 ರಿಂದ 60ರೂಪಾಯಿಗೆ ಏರಿಕೆ ಆಗಿದೆ. ಹೀಗಾಗಿ, ಒಂದು ಕಡೆ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿದೆ. ಮತ್ತೊಂದು ಕಡೆ ಬೆಳೆ ಹಾನಿಯಾದ ವೇಳೆಯೇ ಬೆಲೆ ಏರಿಕೆ ಆಗಿದ್ದು, ರೈತರು ಕೈಕೈ ಹಿಚುಕಿಕೊಳ್ಳುವಂತಾಗಿದೆ. ಇನ್ನು ಈರುಳ್ಳಿ ಬಂಪರ್ ಬೆಳೆ ತೆಗೆದು ಬದುಕು ಕಟ್ಟಿಕೊಳ್ಳುವ ಕನಸು ಕಂಡಿದ್ದ ರೈತರಿಗೆ ಶಾಕ್ ಆಗಿದೆ. ಈರುಳ್ಳಿ ಬೆಳೆಯನ್ನೇ ಪ್ರಧಾನವಾಗಿ ಬೆಳೆಯುವ ಚಿತ್ರದುರ್ಗ ಜಿಲ್ಲೆಯ ರೈತರು ಧರ್ಮ ಸಂಕಟಕ್ಕೆ ಸಿಲುಕುವಂತಾಗಿದೆ.

ಇದನ್ನೂ ಓದಿ:ಮಂಗಗಳ ದಾಳಿಗೆ ಈರುಳ್ಳಿ ಬೆಳೆ ನಾಶ: ಬರಗಾಲದಲ್ಲಿ ಬೆಳೆ ಉಳಿಸಿಕೊಳ್ಳಲು ರೈತರ ಪರದಾಟ

ಈಗಿನ ಈರುಳ್ಳಿ ಬೆಲೆಯ ಆಧಾರದ ಮೇಲೆ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರಕ್ಕಾಗಿ ಆಗ್ರಹ

ಹೀಗಾಗಿ, ಈಗಿನ ಈರುಳ್ಳಿ ಬೆಲೆಯ ಆಧಾರದ ಮೇಲೆ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಬೇಕೆಂಬುದು ರೈತ ಮುಖಂಡರ ಆಗ್ರಹಿಸಿದ್ದು,
vo-3: ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಈರುಳ್ಳಿ ಬೆಳೆಗಾರರು ಕಂಗಾಲಾಗಿದ್ದಾರೆ. ಬೆಳೆ ಹಾನಿಯಾದ ಸಂದರ್ಭದಲ್ಲಿ
ಈರುಳ್ಳಿಗೆ ಭಾರೀ ಬೇಡಿಕೆ ಬಂದಿರುವುದು ರೈತರನ್ನು ಮತ್ತಷ್ಟು ಕುಗ್ಗುವಂತಾಗಿಸಿದೆ. ಹೀಗಾಗಿ, ಸರ್ಕಾರ ಈರುಳ್ಳಿ ಬೆಳೆಗಾರರತ್ತ ಗಮನಹರಿಸಿ
ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕೆಂಬುದು ರೈತರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us