AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chitradurga: ಪೆಟ್ರೋಲ್ ಬೆಲೆ ಏರಿದ್ದೇ ಏರಿದ್ದು, ಪೆಟ್ರೋಲ್ ಕಳ್ಳರ ಸಂಖ್ಯೆಯೂ ಹೆಚ್ಚಾಗುತ್ತಿದೆ! ರಾತ್ರಿ ಹಾಕಿಸಿದ ಪೆಟ್ರೋಲ್ ಬೆಳಗಾಗುವುದರೊಳಗೆ ಕಳ್ಳರ ಪಾಲು

petrol theft: ಚಿತ್ರದುರ್ಗದಲ್ಲಿ ಬೈಕ್ ಮತ್ತು ಪೆಟ್ರೋಲ್ ಕಳ್ಳರ ಹಾವಳಿ ಹೆಚ್ಚಾಗಿದೆ. ಪೊಲೀಸರ ನಿರ್ಲಕ್ಷ್ಯದಿಂದಾಗಿ ಕಳ್ಳರ ಹಾವಳಿ ಹೆಚ್ಚಾಗಿದೆ. ಪೊಲೀಸ್ ಇಲಾಖೆ ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂಬುದು ಸ್ಥಳೀಯರ ಆಗ್ರಹವಾಗಿದೆ.

Chitradurga: ಪೆಟ್ರೋಲ್ ಬೆಲೆ ಏರಿದ್ದೇ ಏರಿದ್ದು, ಪೆಟ್ರೋಲ್ ಕಳ್ಳರ ಸಂಖ್ಯೆಯೂ ಹೆಚ್ಚಾಗುತ್ತಿದೆ! ರಾತ್ರಿ ಹಾಕಿಸಿದ ಪೆಟ್ರೋಲ್ ಬೆಳಗಾಗುವುದರೊಳಗೆ ಕಳ್ಳರ ಪಾಲು
ಪೆಟ್ರೋಲ್ ಬೆಲೆ ಏರಿದ್ದೇ ಏರಿದ್ದು, ಪೆಟ್ರೋಲ್ ಕಳ್ಳರ ಸಂಖ್ಯೆಯೂ ಹಚ್ಚಾಗುತ್ತಿದೆ!
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jan 30, 2023 | 4:28 PM

ಪೆಟ್ರೋಲ್ ದರ ಹೆಚ್ಚಾದ ಬಳಿಕ ಪೆಟ್ರೋಲ್ ಗೂ ಕಳ್ಳರು ಕನ್ನ ಹಾಕುತ್ತಿದ್ದಾರೆ. ಕೋಟೆನಾಡು ಚಿತ್ರದುರ್ಗದಲ್ಲಂತೂ ಪೆಟ್ರೋಲ್ ಕಳ್ಳರ ಹಾವಳಿ ಹೆಚ್ಚಿದೆ. ಹೀಗಾಗಿ, ರಾತ್ರಿ ಹಾಕಿಸಿದ ಪೆಟ್ರೋಲ್ ಬೆಳಗಾಗೋದರಲ್ಲಿ ಕಳ್ಳರ ಪಾಲಾಗುತ್ತಿದ್ದು (petrol theft) ದುರ್ಗದ ಜನ ಸಂಕಷ್ಟಕ್ಕೀಡಾಗುತ್ತಿದ್ದಾರೆ. ಆದರೂ, ಯಾರೊಬ್ಬರೂ ತಲೆ ಕೆಡಿಸಿಕೊಂಡಿಲ್ಲ (negligence). ಈ ಕುರಿತು ವರದಿ ಇಲ್ಲಿದೆ. ಪೆಟ್ರೋಲ್ ಕಳ್ಳರ ಹಾವಳಿಯಿಂದ ದುರ್ಗದ ಜನ ಕಂಗಾಲಾಗಿದ್ದಾರೆ. ಏಕಾಏಕಿ ಪೆಟ್ರೋಲ್ ಇಲ್ಲದಾಗಿ ಬೈಕ್ ತಳ್ಳುವ ದುಃಸ್ಥಿತಿ ಏರ್ಪಟ್ಟಿದೆ. ಪೆಟ್ರೋಲ್ ಕಳ್ಳರು ಮತ್ತು ಪೊಲೀಸರ ವಿರುದ್ಧ (chitradurga police) ಸಾರ್ವಜನಿಕರು ಹಿಡಿಶಾಪ ಹಾಕುವುದಷ್ಟೇ ಕಾಯಕವಾಗಿದೆ. ಈ ಸನ್ನಿವೇಶಗಳೆಲ್ಲಾ ಕಂಡು ಬಂದಿರುವುದು ಚಿತ್ರದುರ್ಗ ನಗರದ ದವಳಗಿರಿ ಬಡಾವಣೆ ಮತ್ತು ಬಿವಿಕೆಎಸ್ ಲೇಔಟ್ ನಲ್ಲಿ.

ಹೌದು, ಅನೇಕ ದಿನಗಳಿಂದ ಚಿತ್ರದುರ್ಗ ನಗರದಲ್ಲಿ ಪೆಟ್ರೋಲ್ ಕಳ್ಳರ ಹಾವಳಿ ಹೆಚ್ಚಿದೆ. ಮನೆಯ ಕಾಂಪೌಡ್ ಒಳಗೆ ನಿಲ್ಲಿಸಿದ ಬೈಕ್ ಗಳಲ್ಲಿರುವ ಪೆಟ್ರೋಲ್ ಅನ್ನು ಕಳ್ಳರು ರಾತೋರಾತ್ರಿ ಕದಿಯುತ್ತಿದ್ದಾರೆ. ಹೀಗಾಗಿ, ಜನರು ಬೈಕಲ್ಲಿ ಪೆಟ್ರೋಲ್ ಇದೆ ಎಂದೇ ಭಾವಿಸಿ ಯಾವುದೋ ಊರಿಗೆ ಹೊರಟರೆ ಮಾರ್ಗ ಮಧ್ಯದಲ್ಲೇ ಪೆಟ್ರೋಲ್ ಖಾಲಿಯಾಗಿ ಜನರು ಹೈರಾಣಾಗುವಂತಹ ಸ್ಥಿತಿ ನಿರ್ಮಾಣ ಆಗಿದೆ.

ಈ ಭಾಗದಲ್ಲಿನ ಬಾರ್ ಗಳಲ್ಲಿ ಕುಡಿಯುವ ಕೆಲವರು ಅಮಲಿನಲ್ಲೇ ರಾತ್ರಿ ವೇಳೆ ಓಡಾಡುತ್ತ ಪೆಟ್ರೋಲ್ ಕಳ್ಳತನ ಮಾಡುತ್ತಿದ್ದಾರೆ. ಬೈಕ್ ಗಳ ಕಳ್ಳತನಗಳೂ ನಡೆದಿವೆ. ಪೆಟ್ರೋಲ್ ಕಳ್ಳತನದಿಂದ ಒಂದು ಕಡೆ ಜನ ಕಂಗಾಲಾಗಿದ್ದಾರೆ. ಮತ್ತೊಂದು ಕಡೆ ಕಳ್ಳತನ ಹಾವಳಿ ಹೆಚ್ಚಾಗಿ ಅನಾಹುತಗಳು ಸಂಭವಿಸಿದರೇನು ಗತಿ ಎಂಬ ಆತಂಕವೂ ಜನರಲ್ಲಿ ಮೂಡಿದೆ.

ಇನ್ನು ಆರೇಳು ತಿಂಗಳುಗಳಿಂದಲೂ ನಗರದ ವಿವಿಧೆಡೆ ಪೆಟ್ರೋಲ್ ಕಳ್ಳತನ ನಡೆಯುತ್ತಿವೆ. ಹೀಗಾಗಿ, ಕೆಲವರು ಮನೆ ಬಳಿ ಸಿಸಿ ಕ್ಯಾಮರಾ ಅಳವಡಿಸಿದ್ದಾರೆ. ಆದ್ರೂ ಸಹ ಪೆಟ್ರೋಲ್ ಕಳ್ಳರ ಹಾವಳಿ ಮಾತ್ರ ಕಡಿಮೆ ಆಗಿಲ್ಲ. ಹೀಗಾಗಿ, ಪೊಲೀಸರ ನಿರ್ಲಕ್ಷ್ಯದಿಂದಾಗಿ ಕಳ್ಳರ ಹಾವಳಿ ಹೆಚ್ಚಾಗಿದೆ. ಪೊಲೀಸ್ ಇಲಾಖೆ ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂಬುದು ಸ್ಥಳೀಯರ ಆಗ್ರಹವಾಗಿದೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದಲ್ಲಿ ಬೈಕ್ ಮತ್ತು ಪೆಟ್ರೋಲ್ ಕಳ್ಳರ ಹಾವಳಿ ಹೆಚ್ಚಾಗಿದೆ. ಪರಿಣಾಮ ನಗರದ ವಿವಿಧ ಬಡಾವಣೆಯ ಜನರಲ್ಲಿ ಕಳ್ಳರ ಹಾವಳಿ ಭೀತಿ ಸೃಷ್ಟಿಸಿದೆ. ಹೀಗಾಗಿ, ಪೊಲೀಸ್ ಇಲಾಖೆ ಬೈಕ್ ಮತ್ತು ಪೆಟ್ರೋಲ್ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಕಳ್ಳರ ಹಾವಳಿಗೆ ಬ್ರೇಕ್ ಹಾಕಬೇಕೆಂಬುದು ಜನರ ಆಗ್ರಹವಾಗಿದೆ.

ವರದಿ: ಬಸವರಾಜ ಮುದನೂರ್, ಟಿವಿ 9, ಚಿತ್ರದುರ್ಗ

ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್