AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಮಂಗಳೂರಿಗೆ ಬಂದ ಪ್ರಧಾನಿ ನರೇಂದ್ರ ಮೋದಿ; ಜನಸ್ತೋಮದಿಂದ ಹರ್ಷೋದ್ಗಾರ

PM Modi in Mangaluru: ಮಂಗಳೂರಿನ ಬಂಗ್ರಕೂಳೂರಿನಲ್ಲಿ ಬಿಜೆಪಿ ಬೃಹತ್ ಕಾರ್ಯಕ್ರಮ ಆಯೋಜಿಸಿದೆ. ಸಮಾವೇಶ ಸ್ಥಳದಲ್ಲಿ ಕೇಸರಿ ಶಾಲು ಬೀಸುತ್ತಾ ಮೋದಿ ಪರ ಘೋಷಣೆ ಕೂಗುತ್ತಾ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ.

Narendra Modi: ಮಂಗಳೂರಿಗೆ ಬಂದ ಪ್ರಧಾನಿ ನರೇಂದ್ರ ಮೋದಿ; ಜನಸ್ತೋಮದಿಂದ ಹರ್ಷೋದ್ಗಾರ
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Sep 02, 2022 | 2:11 PM

Share

ಮಂಗಳೂರು: ಕೇರಳದ ಕೊಚ್ಚಿನ್​ನಲ್ಲಿ ದೇಶೀ ನಿರ್ಮಿತ ವಿಮಾನ ವಾಹಕ ಯುದ್ಧನೌಕೆ ಐಎನ್​ಎಸ್ ವಿಕ್ರಾಂತ್​ ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇದೀಗ ಮಂಗಳೂರಿಗೆ ಆಗಮಿಸಿದ್ದಾರೆ. ಮೋದಿ ಅವರಿದ್ದ ವಿಮಾನವು ಬಜಪೆ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಯಿತು. ಏರ್​​ಪೋರ್ಟ್​​ನಿಂದ ಕುಳೂರು ಹೆಲಿಪ್ಯಾಡ್​ನತ್ತ ಸೇನಾ ಹೆಲಿಕಾಪ್ಟರ್​​ನಲ್ಲಿ ಮೋದಿ ಹೊರಟರು. ಮಂಗಳೂರಿನ ಬಂಗ್ರಕೂಳೂರಿನಲ್ಲಿ ಬಿಜೆಪಿ ಬೃಹತ್ ಕಾರ್ಯಕ್ರಮ ಆಯೋಜಿಸಿದೆ. ಸಮಾವೇಶ ಸ್ಥಳದಲ್ಲಿ ಕೇಸರಿ ಶಾಲು ಬೀಸುತ್ತಾ ಮೋದಿ ಪರ ಘೋಷಣೆ ಕೂಗುತ್ತಾ ಯುವತಿಯರು ಡಾನ್ಸ್ ಮಾಡುತ್ತಿದ್ದಾರೆ. ಕೇಸರಿ ರುಮಾಲು ಧರಿಸಿರುವ ಮಹಿಳಾ ಬಿಜೆಪಿ ಕಾರ್ಯಕರ್ತೆಯರು ಮಿಂಚುತ್ತಿದ್ದಾರೆ. ಭರ್ತಿಯಾಗಿರುವ ಗೋಲ್ಡ್ ಫಿಂಚ್ ಸಿಟಿ ಮೈದಾನವು ಈಗಾಗಲೇ ಭರ್ತಿಯಾಗಿದೆ. ಮೈದಾನದತ್ತ ಇನ್ನೂ ಜನಸ್ತೋಮ ಹರಿದು ಬರುತ್ತಲೇ ಇದೆ. ಮೋದಿ ಸಮಾವೇಶಕ್ಕೆ ಪದ್ಮಶ್ರೀ ಹರೇಕಳ ಹಾಜಬ್ಬ ಸಹ ಬಂದಿದ್ದಾರೆ.

ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲೆಂದು ಎನ್​ಎಂಪಿಎ ಹೆಲಿಪ್ಯಾಡ್​ಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವರಾದ ಗೋವಿಂದ ಕಾರಜೋಳ, ಶ್ರೀರಾಮುಲು ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಕಾಯುತ್ತಿದ್ದಾರೆ.

ಮಂಗಳೂರಿಗೆ ಪ್ರಧಾನಿ ಬಂದು ವಾಪಾಸ್ ಹೋಗುವವರೆಗೆ ಪೊಲೀಸ್ ಭದ್ರತೆ ಬಿಗಿಯಾಗಿ ಇರಲಿದೆ. ಡಿಜಿಪಿ ಮತ್ತು ಎಡಿಜಿಪಿ, ಮಂಗಳೂರು ‌ಕಮಿಷನರ್ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದೆ. 100 ಜನ ಉನ್ನತ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಸುಮಾರು 2,000 ಸಾವಿರ ಸಿವಿಲ್ ಪೊಲೀಸರು ಭದ್ರತೆ ಒದಗಿಸುತ್ತಿದ್ದಾರೆ. ಕೆಎಸ್​ಆರ್​ಪಿ, ಸಿಎಆರ್, ಎಎನ್​ಎಫ್, ಆರ್​ಎಎಫ್, ಕೋಸ್ಟಲ್ ಸೆಕ್ಯೂರಿಟಿ, ಐಎಸ್​ಡಿ ಹಾಗೂ ಗರುಡ ಪಡೆಯ ಸುಮಾರು ಮೂರು ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ವಿಮಾನ ನಿಲ್ದಾಣದ ಸಮೀಪದ ಕೆಂಜಾರ್ ಬಳಿ ಟ್ರಾಫಿಕ್ ಜಾಮ್ ಆಗಿದೆ. ಕಳೆದ ಅರ್ಧ ಗಂಟೆಯಿಂದ ವಾಹನಗಳು ನಿಂತಲ್ಲೇ ನಿಂತಿವೆ. ಸುಮಾರು ಒಂದು ಕಿಲೋಮೀಟರ್​ಗೂ ಹೆಚ್ಚು ದೂರ ಸಂಚಾರ ದಟ್ಟಣೆಯಾಗಿದೆ. ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ವಾಹನಗಳನ್ನು ತಡೆಯುತ್ತಿದ್ದಾರೆ. ಟ್ರಾಫಿಕ್ ಜಾಮ್​ನಿಂದಾಗಿ ವಾಹನ ಸವಾರರು ಮತ್ತು ಪ್ರಯಾಣಿಕರು ಹೈರಾಣಾಗಿದ್ದಾರೆ.

ಬಸ್​ಗಳ ಮೂಲಕ ಸಮಾವೇಶಕ್ಕೆ ಜನರು ಸಾಗಿ ಬರುತ್ತಿದ್ದಾರೆ. ಇದರ ಜೊತೆಗೆ ಕೊಟ್ಟಾರ ಚೌಕಿ ಫ್ಲೈ ಓವರ್ ಮತ್ತು ಕೂಳೂರು ಕಡೆಯಿಂದ ಕಾಲ್ನಡಿಗೆ ಮೂಲಕವೂ ಜನರು ಬರುತ್ತಿದ್ದಾರೆ. ನರೇಂದ್ರ ಮೋದಿ ಮತ್ತು ಸಾವರ್ಕರ್ ಪರ ಘೋಷಣೆಗಳು ಮೊಳಗುತ್ತಿವೆ. ಬಿಜೆಪಿ, ಭಗವಾಧ್ವಜ ಮತ್ತು ಹನುಮಾನ್ ಧ್ವಜ ಹಿಡಿದಿರುವ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಿದ್ದಾರೆ.

ಮೋದಿ ಊಟದ ಮೆನು ಹೀಗಿದೆ

ನರೇಂದ್ರ ಮೋದಿ ಅವರಿಗಾಗಿ ಓಶಿಯನ್ ಪರ್ಲ್ ಹೋಟೆಲ್​ನಿಂದ ಮಧ್ಯಾಹ್ನದ ಊಟ ತರಿಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. ಮೆನು ಮೇಲೆ ಪ್ಯೂರ್ ವೆಜಿಟೇರಿಯನ್ ಎಂದು ನಮೂದಿಸಲಾಗಿದೆ. ಮಿಕ್ಸ್ ವೆಜಿಟೇಬಲ್ಸ್ ಸೂಪ್, ತವಾ ಮೇಡ್ ರೋಟಿ, ಪ್ಲೈನ್ ಮತ್ತು ಜೀರಾ ರೈಸ್, ದಾಲ್, ಎರಡು ಸಬ್ಜಿ, ಲೆಸ್ ಸ್ಪೈಸಿ ಮಸಾಲಾ (ಲೆಸ್ ಆಯಿಲ್), ಪ್ಲೈನ್ ಮೊಸರು, ನಿಂಬೆಹಣ್ಣು, ಮಿಕ್ಸಡ್ ಕಟ್ ಫ್ರೂಟ್ಸ್ ಮೆನುವಿನಲ್ಲಿದೆ.

Published On - 2:11 pm, Fri, 2 September 22

ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?