ಜೈಲಲ್ಲಿದ್ದ ಪೋಕ್ಸೋ ಪ್ರಕರಣದ ಆರೋಪಿ ದಿಢೀರ್​ ಸಾವು; ತನಿಖೆಗೆ ಸಂಬಂಧಿಕರ ಆಗ್ರಹ

ಪೋಕ್ಸೋ ಪ್ರಕರಣದ ಆರೋಪಿ ಸುಮಾರು 3ವರ್ಷದಿಂದ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿದ್ದನು. ಆದ್ರೆ, ನಿನ್ನೆ(ಏ.03) ಬೆಳಗಿನ ಜಾವ ದಿಢೀರನೆ ಸಾವಿಗೀಡಾಗಿದ್ದು, ಸಂಬಂಧಿಕರಲ್ಲಿ ಅನುಮಾನ ಮೂಡಿಸಿದೆ. ಆದ್ರೆ, ಜಿಲ್ಲಾ ಕಾರಾಗೃಹದ ಜೈಲರ್ ಶ್ರೀಮಂತ್ ಪಾಟೀಲ್ ಮಾತ್ರ ‘ಎದೆನೋವು ಎಂಬ ಕಾರಣಕ್ಕೆ ಜಿಲ್ಲಾಸ್ಪತ್ರೆಗೆ ಕರೆತಂದಿದ್ದೆವು. ವೈದ್ಯರು ಬ್ರಾಡ್ ಡೆಡ್ ಎಂದು ತಿಳಿಸಿದ್ದಾರೆ ಎಂದಿದ್ದಾರೆ.

ಜೈಲಲ್ಲಿದ್ದ ಪೋಕ್ಸೋ ಪ್ರಕರಣದ ಆರೋಪಿ ದಿಢೀರ್​ ಸಾವು; ತನಿಖೆಗೆ ಸಂಬಂಧಿಕರ ಆಗ್ರಹ
ಪೋಕ್ಸೋ ಪ್ರಕರಣದ ಆರೋಪಿ​ ಸಾವು; ಮುಗಿಲುಮುಟ್ಟಿದ ಕುಟುಂಬಸ್ಥರ ಆಕ್ರಂದನ
Edited By: ಕಿರಣ್ ಹನುಮಂತ್​ ಮಾದಾರ್

Updated on: Apr 04, 2024 | 2:26 PM

ಚಿತ್ರದುರ್ಗ, ಏ.04: ಜಿಲ್ಲೆಯ ಹೊಳಲ್ಕೆರೆ(Holalkere) ತಾಲೂಕಿನ ಕಾಗಳಗೆರೆ ಗ್ರಾಮದ ರಮೇಶ್ (36) ಫೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದನು. ಮೊನ್ನೆಯಷ್ಟೇ ಕುಟುಂಬಸ್ಥರಿಗೆ ಕರೆ ಮಾಡಿ ಮಾತನಾಡಿದ್ದನಂತೆ. ಯುಗಾದಿ ಹಬ್ಬದ ಬಳಿಕ ಭೇಟಿಗೆ ಬನ್ನಿ ಎಂದು ತಾಯಿ, ತಂಗಿ ಮತ್ತು ಸಹೋದರರಿಗೆ ಹೇಳಿದ್ದನಂತೆ. ಆದ್ರೆ, ನಿನ್ನೆ(ಏ.03) ಬೆಳಗಿನ ಜಾವ ಜಿಲ್ಲಾ ಕಾರಾಗೃಹದ ಜೈಲರ್ ಶ್ರೀಮಂತ್ ಪಾಟೀಲ್ ಕರೆ ಮಾಡಿ ರಮೇಶ್ ಸಾವಿಗೀಡಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಆದ್ರೆ, ಜೈಲಿನಲ್ಲಿ ಏನೋ ಮೋಸ ನಡೆದಿದೆ. ಈ ಸಾವಿನ ಬಗ್ಗೆ ನಮಗೆ ಅನುಮಾನಗಳಿವೆ. ಹೀಗಾಗಿ, ರಮೇಶ್
ಸಾವಿನ ಬಗ್ಗೆ ತನಿಖೆ ನಡೆಸಬೇಕು ಎಂದು ಮೃತನ ಸಹೋದರಿ ಮತ್ತು ಸಂಬಂಧಿಕರು ಆಗ್ರಹಿಸಿದ್ದಾರೆ. ಜಿಲ್ಲಾ ಕಾರಾಗೃಹದಲ್ಲಿ
ಹಲ್ಲೆ ನಡೆದಿದೆಯೇ ಎಂಬ ಅನುಮಾನವೂ ಇದೆ. ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಈ ಬಗ್ಗೆ ಕೂಲಂಕುಷ
ತನಿಖೆ ನಡೆಯಬೇಕಿದೆ.

ಇದನ್ನೂ ಓದಿ:ಹಾವೇರಿ: ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಬೊಲೆರೊ ಡಿಕ್ಕಿ: ಮೂವರು ಸೇರಿ 20 ಕುರಿಗಳು ಸಾವು

ಬೆಂಗಳೂರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ

ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈಯಲಾಗಿದೆ. ಎರಡು ದಿನಗಳ ಹಿಂದೆ ಅಮೃತಹಳ್ಳಿಯ ಕಾಫಿ ಬೋರ್ಡ್ ಬಳಿ ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಯಚೂರು ಮೂಲದ 55 ವರ್ಷದ ಮಹಿಳೆ ಕೊಲೆಯಾದ ದುರ್ದೈವಿ‌. ಗಾರೆ ಕೆಲಸ ಮಾಡುತ್ತಿದ್ದ ‌ಮಹಿಳೆಯನ್ನು ಎಳೆದೊಯ್ದು
ರಾತ್ರಿ ವೇಳೆ ನಿರ್ಮಾಣ ಹಂತದ ಕಟ್ಟಡದಲ್ಲಿ ಅತ್ಯಾಚಾರ ಎಸಗಿ ಕೊಲೆಗೈಯಲಾಗಿದೆ. ಮರು ದಿನ ಬೆಳಿಗ್ಗೆ ಕಟ್ಟಡದ ಮಾಲೀಕ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಖಾಸಗಿ ಭಾಗದಲ್ಲಿ ವಿಕೃತಿ ಮೆರೆದು ಕೊಲೆ ಮಾಡಲಾಗಿದ್ದು, ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಈಗಾಗಲೇ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:24 pm, Thu, 4 April 24

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us