ಜೈಲಿನಿಂದ ಚಿತ್ರದುರ್ಗ ಮುರುಘಾಶ್ರೀ ಬಿಡುಗಡೆಗೆ ​ಆದೇಶ

ಚಿತ್ರದುರ್ಗದ ಮುರುಘಾ ಮಠದಶ್ರೀಗಳ ಪೋಕ್ಸೋ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಈ ಪ್ರಕರಣದಲ್ಲಿ ಮುರುಘಾಶ್ರೀಗಳು ಜೈಲು ಸೇರಿದ್ದರು. ಇದೀಗ, ಪ್ರಕರಣದ ಸಾಕ್ಷಿಗಳ ವಿಚಾರಣೆ ಮುಗಿದಿದೆ. ಈ ಹಿನ್ನೆಲೆಯಲ್ಲಿ ಮುರುಘಾಶ್ರೀ ಬಿಡುಗಡೆಗೆ ಕೋರ್ಟ್​ ಆದೇಶ ನೀಡಿದೆ.

ಜೈಲಿನಿಂದ ಚಿತ್ರದುರ್ಗ ಮುರುಘಾಶ್ರೀ ಬಿಡುಗಡೆಗೆ ​ಆದೇಶ
ಮುರುಘಾ ಶ್ರೀ
Edited By: ವಿವೇಕ ಬಿರಾದಾರ

Updated on: Oct 07, 2024 | 2:36 PM

ಚಿತ್ರದುರ್ಗ, ಅಕ್ಟೋಬರ್​​​ 07: ಪೋಕ್ಸೋ (Pocso) ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀ (Chitradurga Murugha Shri) ಅವರನ್ನು ಬಿಡುಗಡೆಗೆ ನ್ಯಾಯಾಲಯ ಆದೇಶ ಹೊರಡಿಸಿದೆ. ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಆದೇಶವನ್ನು ಹೊರಡಿಸಿದೆ.

ಈ ಹಿಂದೆ ಹೈಕೋರ್ಟ್ ಮುರುಘಾಶ್ರೀಗೆ ಜಾಮೀನು ನೀಡಿತ್ತು. ಆದರೆ, ಸಾಕ್ಷ ವಿಚಾರಣೆ ನಡೆಸುವವರೆಗೆ ಬಂಧನದಲ್ಲಿಡಲು ಸುಪ್ರೀಂಕೋರ್ಟ್​ ಆದೇಶಿಸಿತ್ತು. ಇದೀಗ, ಸಂತ್ರಸ್ತೆಯರಿಬ್ಬರು ಸೇರಿದಂತೆ 12 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್​ ಜಾಮೀನಿನ ಆದೇಶದ ಪ್ರಕಾರ ಮುರುಘಾಶ್ರೀ ಬಿಡುಗಡೆಯಾಗಿದ್ದಾರೆ.

ಇದನ್ನೂ ಓದಿ: ಮುರುಘಾ ಶ್ರೀ ವಿರುದ್ಧ ಜಾರ್ಜ್​ಶೀಟ್ ಸಲ್ಲಿಸಿದ ಪೊಲೀಸರು: 12 ಮತ್ತು 14 ವರ್ಷದ ಸಂತ್ರಸ್ತೆಯರ ಹೇಳಿಕೆ ಇಲ್ಲಿದೆ

ಆದೇಶದ ಪ್ರತಿ ಜಿಲ್ಲಾ ಕಾರಾಗೃಹ ಅಧಿಕಾರಿಗಳ ಕೈ ಸೇರಿದ ಬಳಿಕ ತಲುಪಿದ ಬಳಿಕ ಬಿಡುಗಡೆ ಮುರುಘಾಶ್ರೀ ಜೈಲಿನಿಂದ ಹೊರಗೆ ಬರಲಿದ್ದಾರೆ. ಹೊರಬಂದ ಬಳಿಕ ಶ್ರೀಗಳು ದಾವಣಗೆರೆಯ ಶಿವಯೋಗಿ ಮಂದಿರಕ್ಕೆ ತೆರಳಲಿದ್ದಾರೆ.

ಫೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನೀಡಿತ್ತು. ಜಾಮೀನು ರದ್ದು ಕೋರಿ ಸಂತ್ರಸ್ತೆ ಪರವಾಗಿ ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಮುರುಘಾಶ್ರೀ ಅವರ ಜಾಮೀನು ರದ್ದುಗೊಳಿಸಿತ್ತು. ಸಾಕ್ಷಗಳ ವಿಚಾರಣೆ ಮುಗಿಯುವವರೆಗೆ ಮುರುಘಾಶ್ರೀ ಬಂಧನದಲ್ಲಿರಲು ಸುಪ್ರೀಂಕೋರ್ಟ್​ ಸೂಚಿಸಿತ್ತು. ಇಂದಿಗೆ 13 ಮುಖ್ಯ ಸಾಕ್ಷಗಳ ವಿಚಾರಣೆ ಮುಗಿದಿದೆ. ಈ ಹಿನ್ನೆಲೆಯಲ್ಲಿ ಮುರುಘಾಶ್ರೀ ಅವರ ಬಿಡುಗಡೆಗೆ ನ್ಯಾಯಾಲಯ ಆದೇಶ ನೀಡಿದೆ ಎಂದು ಮುರುಘಾಶ್ರೀ ಪರ ವಕೀಲ ಕೆ. ವಿಶ್ವನಾಥಯ್ಯ ಹೇಳಿದರು.

ಚಿತ್ರದುರ್ಗ ಜೈಲಿಗೆ ಕೋರ್ಟ್​ನಿಂದ ಬಿಡುಗಡೆ ಆದೇಶ ಬಂದಿದೆ. ಹೈಕೋರ್ಟ್ ನೀಡಿದ ಷರತ್ತುಬದ್ಧ ಜಾಮೀನಿನ್ವಯ ಮಧ್ಯಾಹ್ನ 4ಗಂಟೆ ವೇಳೆಗೆ ಮುರುಘಾಶ್ರೀ ಬಿಡುಗಡೆಯಾಗುತ್ತಾರೆ. ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಯಲ್ಲಿ ಮುರುಘಾಶ್ರೀ ಇರುವಂತಿಲ್ಲ. ಹೀಗಾಗಿ ಮುರುಘಾಶ್ರೀಗಳು ಬಿಡುಗಡೆ ಬಳಿಕ ದಾವಣಗೆರೆಗೆ ತೆರಳುತ್ತಾರೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:55 pm, Mon, 7 October 24

ಬಸವರಾಜ ಮುದನೂರ್, ಚಿತ್ರದುರ್ಗ

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us