Sign In

By signing in or creating an account, you agree with Associated Broadcasting Company's Terms & Conditions and Privacy Policy.

POCSO: ಮುರುಘಾ ಶ್ರೀ ವಿರುದ್ಧ ಪೊಲೀಸ್​​ ಲುಕ್‌ಔಟ್‌ ನೋಟಿಸ್ ಜಾರಿ, ಯಾವುದೇ ಕ್ಷಣ ಮುರುಘಾ ಶ್ರೀ ಬಂಧನ ಸಾಧ್ಯತೆ

ಮುರುಘಾಶ್ರೀಗಳಿಗೆ ಇದೀಗ ಪೊಲೀಸರು ಲುಕ್ ಔಟ್ ನೋಟಿಸ್ ನೀಡಿದ್ದಾರೆ. ಡಿವೈಎಸ್ಪಿ ಅನಿಲ್ ರಿಂದ ಮುರುಘಾಶ್ರೀಗೆ ನೋಟಿಸ್ ಜಾರಿಯಾಗಿದೆ. ದೇಶ ಬಿಟ್ಟು ತೆರಳದಂತೆ ಪೊಲೀಸರಿಂದ ನೋಟಿಸ್ ಹೊರಬಿದ್ದಿದೆ.

POCSO: ಮುರುಘಾ ಶ್ರೀ ವಿರುದ್ಧ ಪೊಲೀಸ್​​ ಲುಕ್‌ಔಟ್‌ ನೋಟಿಸ್ ಜಾರಿ, ಯಾವುದೇ ಕ್ಷಣ ಮುರುಘಾ ಶ್ರೀ ಬಂಧನ ಸಾಧ್ಯತೆ
ಪೋಕ್ಸೋ ಪ್ರಕರಣ: ಮುರುಘಾಶ್ರೀ ವಿರುದ್ಧ ಪೊಲೀಸರಿಂದ ಲುಕ್‌ಔಟ್‌ ನೋಟಿಸ್ ಜಾರಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Sep 01, 2022 | 9:09 PM

ಚಿತ್ರದುರ್ಗದ ಮುರುಘಾ ಮಠದ (Sri Murugha Matha) ಮುರುಘಾಶ್ರೀ ವಿರುದ್ಧ ಪೋಕ್ಸೋ ಕಾಯ್ದೆಯಡಿ (POCSO case) ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಶ್ರೀಗಳ ವಿರುದ್ಧ ಇದೀಗ ಪೊಲೀಸರಿಂದ ಲುಕ್‌ಔಟ್‌ ನೋಟಿಸ್ ಜಾರಿ ಮಾಡಿದ್ದಾರೆ. ಮುರುಘಾ ಮಠದ ಲೈಂಗಿಕ ಪ್ರಕರಣಗಳ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳು (Murugha Shree) ಆಗಸ್​​ 29ರಂದು ಅಜ್ಞಾತ ಸ್ಥಳಕ್ಕೆ ತೆರಳಿದ್ದರು.

ಬಳಿಕ ಮಾಧ್ಯಮಗಳಲ್ಲಿ ಕಾಡ್ಕಿಚ್ಚಿನಂತೆ ಸುದ್ದಿ ಹಬ್ಬಿದಾಗ ತಕ್ಷಣ ಅವರು ಮಠಕ್ಕೆ ವಾಪಸಾಗಿದ್ದರು. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಮುರುಘಾಶ್ರೀಗಳಿಗೆ ಇದೀಗ ಪೊಲೀಸರು ಲುಕ್ ಔಟ್ ನೋಟಿಸ್ ನೀಡಿದ್ದಾರೆ. ಡಿವೈಎಸ್ಪಿ ಅನಿಲ್ ರಿಂದ ಮುರುಘಾಶ್ರೀಗೆ ನೋಟಿಸ್ ಜಾರಿಯಾಗಿದೆ. ದೇಶ ಬಿಟ್ಟು ತೆರಳದಂತೆ ಪೊಲೀಸರಿಂದ ನೋಟಿಸ್ ಹೊರಬಿದ್ದಿದೆ.

ಮುರುಘಾಶ್ರೀ ವಿರುದ್ಧ ಫೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳು ನಾಪತ್ತೆಯಾಗಿದ್ದಾರೆ.

A-3 ಮಠದ ಉತ್ತರಾಧಿಕಾರಿ (ಬಸವಾದಿತ್ಯ) , A-4 ಮಠದ ಕಾರ್ಯದರ್ಶಿ ಪರಮಶಿವಯ್ಯ, A-5 ವಕೀಲ ಗಂಗಾಧರಯ್ಯ ನಾಪತ್ತೆಯಾಗಿದ್ದಾರೆ

A-1 ಮುರುಘಾ ಶ್ರೀ ಮುರುಘಾಮಠದಲ್ಲೇ ವಾಸ್ತವ್ಯ ಹೂಡಿದ್ದಾರೆ.

A- 2 ಲೇಡಿ ವಾರ್ಡನ್ ಪೊಲೀಸರ ವಶದಲ್ಲಿದ್ದು,  ಪ್ರಸ್ತುತ ಸಾಂತ್ವನ ಕೇಂದ್ರದಲ್ಲಿದ್ದಾರೆ.

ಪೋಕ್ಸೋ ಕೇಸ್​ ತನಿಖೆ ಚುರುಕಾದ ಬೆನ್ನಲ್ಲೇ ಶ್ರೀಗಳಿಗೆ ಬಂಧನದ ಭೀತಿ? ಪೋಕ್ಸೋ ಕೇಸ್​ ತನಿಖೆ ಚುರುಕಾದ ಬೆನ್ನಲ್ಲೇ ಮುರುಘಾ ಶ್ರೀಳಿಗೆ ಬಂಧನದ ಭೀತಿ ತೀವ್ರವಾಗಿದೆ. ಯಾವುದೇ ಕ್ಷಣದಲ್ಲಿ ಮುರುಘಾಶ್ರೀಗಳ ಬಂಧನ ಸಾಧ್ಯತೆಯಿದೆ. ತಡರಾತ್ರಿ ಅಥವಾ ನಾಳೆ ಶುಕ್ರವಾರದೊಳಗೆ ಮುರುಘಾ ಶ್ರೀ ಬಂಧನ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಮುರುಘಾಮಠದ ಸುತ್ತಮುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

Published On - 6:14 pm, Thu, 1 September 22

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ