AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

POCSO: ಮುರುಘಾ ಶ್ರೀ ವಿರುದ್ಧ ಪೊಲೀಸ್​​ ಲುಕ್‌ಔಟ್‌ ನೋಟಿಸ್ ಜಾರಿ, ಯಾವುದೇ ಕ್ಷಣ ಮುರುಘಾ ಶ್ರೀ ಬಂಧನ ಸಾಧ್ಯತೆ

ಮುರುಘಾಶ್ರೀಗಳಿಗೆ ಇದೀಗ ಪೊಲೀಸರು ಲುಕ್ ಔಟ್ ನೋಟಿಸ್ ನೀಡಿದ್ದಾರೆ. ಡಿವೈಎಸ್ಪಿ ಅನಿಲ್ ರಿಂದ ಮುರುಘಾಶ್ರೀಗೆ ನೋಟಿಸ್ ಜಾರಿಯಾಗಿದೆ. ದೇಶ ಬಿಟ್ಟು ತೆರಳದಂತೆ ಪೊಲೀಸರಿಂದ ನೋಟಿಸ್ ಹೊರಬಿದ್ದಿದೆ.

POCSO: ಮುರುಘಾ ಶ್ರೀ ವಿರುದ್ಧ ಪೊಲೀಸ್​​ ಲುಕ್‌ಔಟ್‌ ನೋಟಿಸ್ ಜಾರಿ, ಯಾವುದೇ ಕ್ಷಣ ಮುರುಘಾ ಶ್ರೀ ಬಂಧನ ಸಾಧ್ಯತೆ
ಪೋಕ್ಸೋ ಪ್ರಕರಣ: ಮುರುಘಾಶ್ರೀ ವಿರುದ್ಧ ಪೊಲೀಸರಿಂದ ಲುಕ್‌ಔಟ್‌ ನೋಟಿಸ್ ಜಾರಿ
TV9 Web
| Edited By: |

Updated on:Sep 01, 2022 | 9:09 PM

Share

ಚಿತ್ರದುರ್ಗದ ಮುರುಘಾ ಮಠದ (Sri Murugha Matha) ಮುರುಘಾಶ್ರೀ ವಿರುದ್ಧ ಪೋಕ್ಸೋ ಕಾಯ್ದೆಯಡಿ (POCSO case) ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಶ್ರೀಗಳ ವಿರುದ್ಧ ಇದೀಗ ಪೊಲೀಸರಿಂದ ಲುಕ್‌ಔಟ್‌ ನೋಟಿಸ್ ಜಾರಿ ಮಾಡಿದ್ದಾರೆ. ಮುರುಘಾ ಮಠದ ಲೈಂಗಿಕ ಪ್ರಕರಣಗಳ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳು (Murugha Shree) ಆಗಸ್​​ 29ರಂದು ಅಜ್ಞಾತ ಸ್ಥಳಕ್ಕೆ ತೆರಳಿದ್ದರು.

ಬಳಿಕ ಮಾಧ್ಯಮಗಳಲ್ಲಿ ಕಾಡ್ಕಿಚ್ಚಿನಂತೆ ಸುದ್ದಿ ಹಬ್ಬಿದಾಗ ತಕ್ಷಣ ಅವರು ಮಠಕ್ಕೆ ವಾಪಸಾಗಿದ್ದರು. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಮುರುಘಾಶ್ರೀಗಳಿಗೆ ಇದೀಗ ಪೊಲೀಸರು ಲುಕ್ ಔಟ್ ನೋಟಿಸ್ ನೀಡಿದ್ದಾರೆ. ಡಿವೈಎಸ್ಪಿ ಅನಿಲ್ ರಿಂದ ಮುರುಘಾಶ್ರೀಗೆ ನೋಟಿಸ್ ಜಾರಿಯಾಗಿದೆ. ದೇಶ ಬಿಟ್ಟು ತೆರಳದಂತೆ ಪೊಲೀಸರಿಂದ ನೋಟಿಸ್ ಹೊರಬಿದ್ದಿದೆ.

ಮುರುಘಾಶ್ರೀ ವಿರುದ್ಧ ಫೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳು ನಾಪತ್ತೆಯಾಗಿದ್ದಾರೆ.

A-3 ಮಠದ ಉತ್ತರಾಧಿಕಾರಿ (ಬಸವಾದಿತ್ಯ) , A-4 ಮಠದ ಕಾರ್ಯದರ್ಶಿ ಪರಮಶಿವಯ್ಯ, A-5 ವಕೀಲ ಗಂಗಾಧರಯ್ಯ ನಾಪತ್ತೆಯಾಗಿದ್ದಾರೆ

A-1 ಮುರುಘಾ ಶ್ರೀ ಮುರುಘಾಮಠದಲ್ಲೇ ವಾಸ್ತವ್ಯ ಹೂಡಿದ್ದಾರೆ.

A- 2 ಲೇಡಿ ವಾರ್ಡನ್ ಪೊಲೀಸರ ವಶದಲ್ಲಿದ್ದು,  ಪ್ರಸ್ತುತ ಸಾಂತ್ವನ ಕೇಂದ್ರದಲ್ಲಿದ್ದಾರೆ.

ಪೋಕ್ಸೋ ಕೇಸ್​ ತನಿಖೆ ಚುರುಕಾದ ಬೆನ್ನಲ್ಲೇ ಶ್ರೀಗಳಿಗೆ ಬಂಧನದ ಭೀತಿ? ಪೋಕ್ಸೋ ಕೇಸ್​ ತನಿಖೆ ಚುರುಕಾದ ಬೆನ್ನಲ್ಲೇ ಮುರುಘಾ ಶ್ರೀಳಿಗೆ ಬಂಧನದ ಭೀತಿ ತೀವ್ರವಾಗಿದೆ. ಯಾವುದೇ ಕ್ಷಣದಲ್ಲಿ ಮುರುಘಾಶ್ರೀಗಳ ಬಂಧನ ಸಾಧ್ಯತೆಯಿದೆ. ತಡರಾತ್ರಿ ಅಥವಾ ನಾಳೆ ಶುಕ್ರವಾರದೊಳಗೆ ಮುರುಘಾ ಶ್ರೀ ಬಂಧನ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಮುರುಘಾಮಠದ ಸುತ್ತಮುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

Published On - 6:14 pm, Thu, 1 September 22

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ