AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

POCSO Case: ಪೀಠ ತ್ಯಾಗಕ್ಕೆ ಶಿವಮೂರ್ತಿ ಮುರುಘಾಶ್ರೀ ನಕಾರ: ಇಂದು ವೀರಶೈವ ಲಿಂಗಾಯತ ಸಮಾಜದ ಮುಖಂಡರ ಸಭೆ

ಪೀಠ ತ್ಯಾಗ ಮಾಡದ ಹಿನ್ನೆಲೆ, ಮಾಜಿ ಸಚಿವ H. ಏಕಾಂತಯ್ಯ ನೇತೃತ್ವದಲ್ಲಿ ಚಿತ್ರದುರ್ಗದ ಎಸ್.ನಿಜಲಿಂಗಪ್ಪ ಸ್ಮಾರಕ ಆವರಣದಲ್ಲಿ ಇಂದು ವೀರಶೈವ ಲಿಂಗಾಯತ ಸಮಾಜದ ಮುಖಂಡರ ಸಭೆ ನಡೆಯಲಿದೆ.

POCSO Case: ಪೀಠ ತ್ಯಾಗಕ್ಕೆ ಶಿವಮೂರ್ತಿ ಮುರುಘಾಶ್ರೀ ನಕಾರ: ಇಂದು ವೀರಶೈವ ಲಿಂಗಾಯತ ಸಮಾಜದ ಮುಖಂಡರ ಸಭೆ
ಶಿವಮೂರ್ತಿ ಮುರುಘಾಶ್ರೀ
TV9 Web
| Edited By: |

Updated on: Sep 29, 2022 | 8:43 AM

Share

ಚಿತ್ರದುರ್ಗ: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ (POCSO Case) ಎಸಗಿದ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಸದ್ಯ ಪೀಠ ತ್ಯಾಗ ಮಾಡದ ಹಿನ್ನೆಲೆ, ಮಾಜಿ ಸಚಿವ H. ಏಕಾಂತಯ್ಯ ನೇತೃತ್ವದಲ್ಲಿ ಚಿತ್ರದುರ್ಗದ ಎಸ್.ನಿಜಲಿಂಗಪ್ಪ ಸ್ಮಾರಕ ಆವರಣದಲ್ಲಿ ಇಂದು ವೀರಶೈವ ಲಿಂಗಾಯತ ಸಮಾಜದ ಮುಖಂಡರ ಸಭೆ ನಡೆಯಲಿದೆ. ಮಠದ ಪರಂಪರೆ, ಸಂಪ್ರದಾಯ ನಿರ್ವಹಣೆ ಕುರಿತು, ಮುಂದಿನ ನಡೆ ಬಗ್ಗೆ ಚರ್ಚಿಸಲು ಮುಖಂಡರು ಸಭೆ ಕರೆದಿದ್ದಾರೆ. ಶ್ರೀಗಳ ಪೀಠ ತ್ಯಾಗಕ್ಕೆ ಆಗ್ರಹಿಸಿ ಹೋರಾಟದ ರೂಪುರೇಷೆ ಬಗ್ಗೆ ಚರ್ಚೆ ಆಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಮಠದ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಚೆಕ್, ದಾಖಲೆಗಳಿಗೆ ಸಹಿ ಹಾಕಲು ಅನುಮತಿ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಮಠದ ಶಿಕ್ಷಣ ಸಂಸ್ಥೆಯ ಶಿಕ್ಷಕರಿಗೆ ವೇತನ ನೀಡಿವ ಸಲುವಾಗಿ ಚೆಕ್​ಗಳಿಗೆ ಸಹಿ ಹಾಕಲು ಅನುಮತಿ ನೀಡುವಂತೆ ಕೋರ್ಟ್​ಗೆ ಮನವಿ ಮಾಡಿದ್ದು, ಜೈಲಿನಿಂದಲೇ ಚೆಕ್, ದಾಖಲೆಗೆ ಸಹಿ ಹಾಕಲು ಅನುಮತಿ ಕೋರಿದ್ದಾರೆ.

ಜೈಲಿನಿಂದಲೇ ಚೆಕ್, ದಾಖಲೆಗೆ ಸಹಿ ಹಾಕಲು ಅನುಮತಿ ಕೋರಿ ಮುರುಘಾ ಶರಣ ಪರ ವಕೀಲರು ಚಿತ್ರದುರ್ಗದ ಸೆಷನ್​ ಕೋರ್ಟ್​ಗೆ ಮನವಿ ಮಾಡಿದ್ದರು. ಆದರೆ ಕೋರ್ಟ್, ಅನುಮತಿ ನಿರಾಕರಿಸಿ ಸೆ.20ರಂದು ಆದೇಶ ಹೊರಡಿಸಿತ್ತು. ಮುರುಘಾ ಮಠದಿಂದ ನಡೆಸಲಾಗುತ್ತಿರುವ ಎಸ್​.ಜೆ.ಎಂ ವಿದ್ಯಾಪೀಠದ ಸುಮಾರು 5000 ನೌಕರರಿಗೆ ವೇತನ ನೀಡಲು ಚೆಕ್​ಗೆ ಅಧ್ಯಕ್ಷರಾದ ಶಿವಮೂರ್ತಿ ಶರಣರ ಸಹಿ ಅಗತ್ಯವಾಗಿದೆ ಎಂದು ವಕೀಲರು ವಾದ ಮಂಡಿಸಿದ್ದರು.

ನಿಮ್ಮ ಸಮಸ್ಯೆಯಿಂದ‌ ಯಾವುದೇ ಸಿಬ್ಬಂದಿಯನ್ನು ಉಪವಾಸಕ್ಕೆ ದೂಡಬಾರದು

ಚೆಕ್ ಹಾಗೂ ಇತರ ದಾಖಲೆಗಳಿಗೆ ಸಹಿ ಹಾಕಲು ಅವಕಾಶ ನೀಡಬೇಕು ಎಂದು ಕೋರಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್​ ಆರಂಭಿಸಿದೆ. ಮಠದ ಸಿಬ್ಬಂದಿ ಮತ್ತು ಶಿಕ್ಷಣ ಸಂಸ್ಥೆಯ ಸಿಬ್ಬಂದಿಗೆ ವೇತನ ಪಾವತಿ ಹಾಗೂ ಇತರ ಖರ್ಚುಗಳಿಗಾಗಿ ಪ್ರತಿತಿಂಗಳು 200ಕ್ಕೂ ಚೆಕ್​ಗಳಿಗೆ ಮುರುಘಾ ಶರಣರು ಸಹಿ ಹಾಕಬೇಕಿದೆ. ಇಲ್ಲದಿದ್ದರೆ ವೇತನ ಪಾವತಿ ಸಾಧ್ಯವಾಗುವುದಿಲ್ಲ ಎಂದು ಮುರುಘಾ ಶರಣರ ಪರ ವಕೀಲ‌ ಸಂದೀಪ್ ಪಾಟೀಲ್ ವಾದ ಮಂಡಿಸಿದ್ದಾರೆ. ವಾದ ಆಲಿಸಿದ ಹೈಕೋರ್ಟ್, ‘ನಿಮ್ಮ ಸಮಸ್ಯೆಯಿಂದ‌ ಯಾವುದೇ ಸಿಬ್ಬಂದಿಯನ್ನು ಉಪವಾಸಕ್ಕೆ ದೂಡಬಾರದು. ಬಂಧನಕ್ಕೆ ಮೊದಲು ಹೇಗೆ ಸಂಬಳ ನೀಡಲಾಗುತ್ತಿತ್ತು ಎನ್ನುವ ಬಗ್ಗೆ ವಿವರವಾದ ಮಾಹಿತಿ ಇರುವ ಮೆಮೊ ಸಲ್ಲಿಸಿ’ ಎಂದು ಮುರುಘಾ ಶರಣರ ಪರ ವಕೀಲರಿಗೆ ಸೂಚನೆ ನೀಡಿತು.

ಹೈಕೋರ್ಟ್​ ಮೆಟ್ಟಿಲೇರುವ ಮೊದಲು ಜೈಲಿನಿಂದಲೇ ಚೆಕ್, ದಾಖಲೆಗಳಿಗೆ ಸಹಿ ಹಾಕಲು ಅನುಮತಿ ಕೋರಿ ಮುರುಘಾ ಶರಣರ ಪರ ವಕೀಲರು ಚಿತ್ರದುರ್ಗದ ಸೆಷನ್​ ಕೋರ್ಟ್​ಗೆ ಮನವಿ ಮಾಡಿದ್ದರು. ಆದರೆ ಕೋರ್ಟ್, ಸೆ 20ರಂದು ಅನುಮತಿ ನಿರಾಕರಿಸಿ ಆದೇಶ ಹೊರಡಿಸಿತ್ತು. ಮುರುಘಾ ಮಠದಿಂದ ನಡೆಸಲಾಗುತ್ತಿರುವ ಎಸ್​ಜೆಎಂ ವಿದ್ಯಾಪೀಠದ ಸುಮಾರು 5000 ನೌಕರರಿಗೆ ವೇತನ ನೀಡಲು ಚೆಕ್​ಗೆ ಅಧ್ಯಕ್ಷರಾದ ಶಿವಮೂರ್ತಿ ಶರಣರ ಸಹಿ ಅಗತ್ಯವಾಗಿದೆ ಎಂಬ ಸ್ವಾಮೀಜಿ ವಕೀಲರ ವಾದವನ್ನು ಸೆಷನ್ ಕೋರ್ಟ್​ ಒಪ್ಪಿರಲಿಲ್ಲ.

ಮುರುಘಾ ಶರಣರ ಪರ ವಕೀಲರ ವಾದವನ್ನು ವಿರೋಧಿಸಿದ್ದ ಸರ್ಕಾರಿ ವಕೀಲರು, ಕಾರಾಗೃಹದಲ್ಲಿವವರಿಗೆ ಸಹಿ ಮಾಡುವ ಅಧಿಕಾರ ಕೊಟ್ಟರೆ ಮುಂದಿನ ದಿನಗಳಲ್ಲಿ ಶ್ರೀಮಠದ ಆಸ್ತಿ-ಪಾಸ್ತಿಗಳಿಗೆ ತೊಂದರೆಗಳಾಗುವ ಸಾಧ್ಯತೆ ಇರುತ್ತದೆ. ಈಗಾಗಲೇ ಮಠಕ್ಕೆ ಪ್ರಭಾರ ಸ್ವಾಮೀಜಿ ಹಾಗೂ ಆಡಳಿತಾಧಿಕಾರಿಯನ್ನು ನೇಮಿಸಲಾಗಿದೆ. ಹೀಗಾಗಿ ಮುರುಘಾ ಶರಣರಿಗೆ ಸಹಿ ಹಾಕುವ ಅಧಿಕಾರ ಕೊಡುವ ಅಗತ್ಯವಿಲ್ಲ ಎಂದು ಹೇಳಿದ್ದರು. ಸರ್ಕಾರಿ ವಕೀಲರ ವಾದ ಒಪ್ಪಿದ್ದ ಕೋರ್ಟ್ ಚೆಕ್​ಗೆ​ ಸಹಿ ಮಾಡಲು ಶ್ರಿಗಳಿಗೆ ಅವಕಾಶ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಮುರುಘಾ ಶರಣರು ಹೈಕೋರ್ಟ್​ಗೆ​ ಮೊರೆ ಹೋಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ