AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಕಮಿಷನ್ ಬಗ್ಗೆ ದಿಂಗಾಲೇಶ್ವರ ಶ್ರೀಗಳ ಆರೋಪ ಸತ್ಯಕ್ಕೆ ದೂರ ಎಂದ ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟ

ದಿಂಗಾಲೇಶ್ವರ ಶ್ರೀಗಳ ಆರೋಪ ಸತ್ಯಕ್ಕೆ ದೂರವಾದದ್ದು. ಸರ್ಕಾರ, ಜನಪ್ರತಿನಿಧಿ, ಅಧಿಕಾರಿಗಳು ಪರ್ಸೆಂಟೇಜ್ ಕೇಳಿಲ್ಲ ಎಂದು ಕಾಗಿನೆಲೆ ಮಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಪರ್ಸೆಂಟೇಜ್ ಕೊಟ್ಟು ಅನುದಾನ ಪಡೆಯುವ ಸ್ಥಿತಿಯಿಲ್ಲ.

ಸರ್ಕಾರದ ಕಮಿಷನ್ ಬಗ್ಗೆ ದಿಂಗಾಲೇಶ್ವರ ಶ್ರೀಗಳ ಆರೋಪ ಸತ್ಯಕ್ಕೆ ದೂರ ಎಂದ ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟ
ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟದಿಂದ ಸುದ್ದಿಗೋಷ್ಠಿ
TV9 Web
| Updated By: ಆಯೇಷಾ ಬಾನು|

Updated on: Apr 20, 2022 | 2:37 PM

Share

ಚಿತ್ರದುರ್ಗ: ಮಠಗಳ ಅನುದಾನದಲ್ಲಿ ಸರ್ಕಾರ ಕಮಿಷನ್ ಪಡೆದ ಆರೋಪಕ್ಕೆ ಸಂಬಂಧಿಸಿ ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟದಿಂದ ಸುದ್ದಿಗೋಷ್ಠಿ ನಡೆಸಲಾಗಿದೆ. ಚಿತ್ರದುರ್ಗದ ಬೋವಿ ಮಠದಲ್ಲಿ ಶ್ರೀಗಳಿಂದ ಸುದ್ದಿಗೋಷ್ಠಿ ನಡೆದಿದ್ದು ಒಕ್ಕೂಟದ ಅಧ್ಯಕ್ಷ ಕಾಗಿನೆಲೆ ಮಠದ ನಿರಂಜನಾನಂದಪುರಿ ಶ್ರೀ, ಪ್ರ.ಕಾರ್ಯದರ್ಶಿ ಶಿವಶರಣ ಮಾದಾರ ಚನ್ನಯ್ಯ, ಮಠದ ಬಸವಮೂರ್ತಿ ಮಾದಾರ ಚನ್ನಯ್ಯಶ್ರೀ, ಬೋವಿ ಮಠದ ಇಮ್ಮಡಿ‌ಸಿದ್ಧರಾಮೇಶ್ವರ ಶ್ರೀ, ಕುಂಚಿಟಿಗ ಮಠದ ಶಾಂತವೀರ ಶ್ರೀ, ಭಗೀರಥ ಮಠದ ಪುರುಷೋತ್ತಮಾನಂದಪುರಿ ಶ್ರೀ, ಮಾಚಿದೇವ ಮಠದ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀ, ಗಾಣಿಗ ಮಠದ ಬಸವಕುಮಾರ್ ಶ್ರೀ ಸೇರಿ ವಿವಿಧ‌ ಮಠಾಧೀಶರು ಭಾಗಿಯಾಗಿದ್ದರು.

ಮಠಗಳಿಗೆ ಸರ್ಕಾರ ನೀಡಿದ ಅನುದಾನದಲ್ಲಿ ಪರ್ಸೆಂಟೇಜ್ ಆರೋಪಕ್ಕೆ ಸಂಬಂಧಿಸಿ ದಿಂಗಾಲೇಶ್ವರ ಶ್ರೀಗಳ ಹೇಳಿಕೆ ಬಗ್ಗೆ ಒಕ್ಕೂಟ ಪ್ರತಿಕ್ರಿಯೆ ನೀಡಿದೆ. ಸಮುದಾಯದ ಪ್ರಗತಿಗೆ ಸರ್ಕಾರದಿಂದ ಅನುದಾನ ಪಡೆದಿದ್ದೇವೆ. ಬಿಎಸ್ವೈ ಸರ್ಕಾರದಿಂದ ಈವರೆಗೂ ಅನುದಾನ ಪಡೆದಿದ್ದೇವೆ. ಆದ್ರೆ ನಾವು ಯಾರಿಗೂ ಪರ್ಸೆಂಟೇಜ್ ನೀಡಿಲ್ಲ. ಸರ್ಕಾರ, ಅಧಿಕಾರಿಗಳು ಯಾರೂ ಸಹ ಪರ್ಸೆಂಟೇಜ್ ಬೇಡಿಕೆಯಿಟ್ಟಲ್ಲ. ಸರ್ಕಾರದ ಅನುದಾನ ಸಮುದಾಯಗಳ ಅಭಿವೃದ್ಧಿಗೆ ಬಳಕೆ ಆಗಿದೆ ಎಂದು ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀ ತಿಳಿಸಿದ್ದಾರೆ.

ದಿಂಗಾಲೇಶ್ವರ ಶ್ರೀಗಳ ಆರೋಪ ಸತ್ಯಕ್ಕೆ ದೂರವಾದದ್ದು. ಸರ್ಕಾರ, ಜನಪ್ರತಿನಿಧಿ, ಅಧಿಕಾರಿಗಳು ಪರ್ಸೆಂಟೇಜ್ ಕೇಳಿಲ್ಲ ಎಂದು ಕಾಗಿನೆಲೆ ಮಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಪರ್ಸೆಂಟೇಜ್ ಕೊಟ್ಟು ಅನುದಾನ ಪಡೆಯುವ ಸ್ಥಿತಿಯಿಲ್ಲ. ಅಂತಹ ಪರಿಸ್ಥಿತಿ ಬಂದರೆ ನಮಗೆ ಅದರ ಅಗತ್ಯವೂ ಇಲ್ಲ. ಭಕ್ತರು ನೀಡಿದ ಕಾಣಿಕೆಯಲ್ಲೇ ಮಠ, ಸಮಾಜದ ಅಭಿವೃದ್ಧಿಯಾಗುತ್ತೆ ಎಂದರು.

ಇದನ್ನೂ ಓದಿ: ಕೊವಿಡ್: ದೆಹಲಿಯಲ್ಲಿ ಮತ್ತೆ ಮಾಸ್ಕ್ ಕಡ್ಡಾಯ; ನಿಯಮ ಉಲ್ಲಂಘಿಸಿದರೆ ₹500 ದಂಡ

Jet Airways: ಮತ್ತೆ ಹಾರಾಟ ನಡೆಸಲು ರೆಕ್ಕೆ ಬಿಚ್ಚುವುದಕ್ಕೆ ಸಜ್ಜಾಗಿದೆ ಜೆಟ್​ ಏರ್​ವೇಸ್

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!