AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಗೂಂಡಾಗಳಿಂದ ಪ್ರವೀಣ್ ನೆಟ್ಟಾರು ಹತ್ಯೆಯಾಗಿದೆ: ಹೇಡಿಗಳ ರೀತಿ ಕೊಲೆ ಮಾಡಿ ಓಡಿ ಹೋಗಿದ್ದಾರೆ -ಕೆ.ಎಸ್.ಈಶ್ವರಪ್ಪ

ಕೊಲೆಗೆ ಕೊಲೆಯೇ ಉತ್ತರ ಅಲ್ಲ, ಕೊಲೆ ಮಾಡಿಲ್ಲ ಅಂದರೆ ಹಿಂದೂ ಸಮಾಜ ದುರ್ಬಲ ಅಂತ ಅಲ್ಲ. ನಿರಪರಾಧಿ ಹುಡುಗರ ಕೊಲೆಯನ್ನು ಇಡೀ ರಾಜ್ಯ, ದೇಶ ಗಮನಿಸುತ್ತಿದೆ.

ಮುಸ್ಲಿಂ ಗೂಂಡಾಗಳಿಂದ ಪ್ರವೀಣ್ ನೆಟ್ಟಾರು ಹತ್ಯೆಯಾಗಿದೆ: ಹೇಡಿಗಳ ರೀತಿ ಕೊಲೆ ಮಾಡಿ ಓಡಿ ಹೋಗಿದ್ದಾರೆ -ಕೆ.ಎಸ್.ಈಶ್ವರಪ್ಪ
ಮಾಜಿ ಸಚಿವ ಕೆ ಎಸ್ ಈಶ್ವರಪ್ಪ
TV9 Web
| Edited By: |

Updated on:Jul 28, 2022 | 4:53 PM

Share

ಚಿತ್ರದುರ್ಗ: ಮುಸ್ಲಿಂ ಗೂಂಡಾಗಳಿಂದ ಪ್ರವೀಣ್ ನೆಟ್ಟಾರು ಹತ್ಯೆಯಾಗಿದೆ. ಅವರು ಮಾನಸಿಕ ಸ್ಥಿತಿಯನ್ನು ಬದಲಾವಣೆ ಮಾಡಿಕೊಂಡಿಲ್ಲ. ಒಬ್ಬನೇ ಇದ್ದಾಗ ಹತ್ಯೆಗೈದು ಹೇಡಿಗಳ ರೀತಿ ಓಡಿ ಹೋಗಿದ್ದಾರೆ ಎಂದು ಮಾಜಿ ಸಚಿವ‌ ಕೆ.ಎಸ್.ಈಶ್ವರಪ್ಪ(KS Eshwarappa) ಆಕ್ರೋಶ ಹೊರ ಹಾಕಿದ್ದಾರೆ.

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಚಿತ್ರದುರ್ಗದಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಇದೇ ರೀತಿ ಶಿವಮೊಗ್ಗದಲ್ಲಿ ಹರ್ಷನ ಹತ್ಯೆ ನಡೆದಿತ್ತು. ಮುಸ್ಲಿಂ ಸಮುದಾಯದ ಹಿರಿಯರು ಗುಂಡಾಗಳಿಗೆ ತಿಳಿಹೇಳಬೇಕು. ಇಡೀ ರಾಜ್ಯದ ಶಾಂತಿ, ಸುವ್ಯವಸ್ಥೆ ಹಾಳು ಮಾಡ್ತಿದ್ದಾರೆ. ಬೆಳಗ್ಗೆ ಬಿಜೆಪಿ ರಾಜ್ಯದ್ಯಕ್ಷ ನಳೀನ್ ಕುಮಾರ್ ಕಟೀಲ್ ಬೇಟಿ‌ ಮಾಡಿದ್ದೇನೆ. ಶಾಂತಿಪ್ರಿಯ ಕರ್ನಾಟಕ ರಾಜ್ಯದಲ್ಲಿ ಕಗ್ಗೊಲೆ ನಡೆದಿದೆ. ಸೂಕ್ತ ಕ್ರಮದ ಬಗ್ಗೆ ಹಿರಿಯರಿಂದ ಚಿಂತನೆ ನಡೆಯುತ್ತಿದೆ. ಕೊಲೆ ಮಾಡದಂತೆ ಯಾವ ರೀತಿ ಭಯ ಇರಿಸಬೇಕೆಂಬ ಚಿಂತನೆ ನಡೆದಿದೆ.

ಕೊಲೆಗೆ ಕೊಲೆಯೇ ಉತ್ತರ ಅಲ್ಲ, ಕೊಲೆ ಮಾಡಿಲ್ಲ ಅಂದರೆ ಹಿಂದೂ ಸಮಾಜ ದುರ್ಬಲ ಅಂತ ಅಲ್ಲ. ನಿರಪರಾಧಿ ಹುಡುಗರ ಕೊಲೆಯನ್ನು ಇಡೀ ರಾಜ್ಯ, ದೇಶ ಗಮನಿಸುತ್ತಿದೆ. ರಾಜ್ಯದ ಸಿಎಂ, ಪ್ರಧಾನಿ ಮೋದಿ, ಅಮಿತ್ ಶಾ ಅವರಲ್ಲಿ ಪ್ರಾರ್ಥನೆ ಮಾಡುತ್ತೇನೆ. ಇದೇ ಕೊಲೆ ಕೊನೆ ಆಗಬೇಕು, ರಾಜ್ಯದಲ್ಲಿ ಮತ್ತೊಂದು ಕೊಲೆ ಆಗಬಾರದು. ತುರ್ತಾಗಿ ಕಠಿಣ ಕಾನೂನು ರಚನೆ ಆಗಬೇಕು. ಕೊಲೆಗಾರರು ಯಾರೆಂದು ಪತ್ತೆ ಹಚ್ಚಬೇಕು. ಕೊಲೆ ಹಿಂದೆ ಯಾವ ರಾಷ್ಟ್ರದ್ರೋಹಿ ಸಂಘಟನೆ ಇದೆ ಪತ್ತೆ ಹಚ್ಚಬೇಕು ಎಂದು ಆಗ್ರಹಿಸಿದ್ದಾರೆ.

‘ಪ್ರವೀಣ್ ಹಂತಕರನ್ನ ಎನ್​ಕೌಂಟರ್ ಮಾಡಿ’ ಇನ್ನು ಪ್ರವೀಣ್ ನೆಟ್ಟಾರು ಹಂತಕರನ್ನ ಎನ್​ಕೌಂಟರ್​ ಮಾಡುವಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲ, ಪಿಎಫ್​ಐ, ಎಸ್​ಡಿಪಿಐ ಸಂಘಟನೆಗಳನ್ನ ಬ್ಯಾನ್​ ಮಾಡಬೇಕು. ಆಗಸ್ಟ್​ 5 ರಂದು ರಾಜ್ಯ ಮಟ್ಟದಲ್ಲಿ ಹೋರಾಟ ಮಾಡ್ತೇವೆ ಅಂತಾ ಎಚ್ಚರಿಕೆ ಕೂಡ ಕೊಟ್ರು. ಜೊತೆಗೆ , ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ನೀವು ಅಧಿಕಾರದಲ್ಲಿರೋಕೆ ನಾಲಾಯಕ್ ಅಂತಾ ಕೆಂಡವಾದ್ರು.

Published On - 4:53 pm, Thu, 28 July 22

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್