AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಿವೆಡ್ಡಿಂಗ್ ಶೂಟ್: ಗುತ್ತಿಗೆ ಆಧಾರಿತ ವೈದ್ಯ ವಜಾ

ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಿವೆಡ್ಡಿಂಗ್ ಶೂಟ್ ವಿಡಿಯೋ ಮಾಡಿಸಿದ್ದ ಗುತ್ತಿಗೆ ಆಧಾರಿತ ವೈದ್ಯ ಅಭಿಷೇಕ್​ ನನ್ನು ಸೇವೆಯಿಂದ ವಜಾ ಮಾಡಿ ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್​ರಿಂದ ಆದೇಶ ಹೊರಡಿಸಲಾಗಿದೆ. ಕರ್ತವ್ಯ ಲೋಪ ಹಿನ್ನೆಲೆ ಕೆಲಸದಿಂದ​ ವಜಾ ಮಾಡಲಾಗಿದೆ. ಡಿಫರೆಂಟ್ ಮತ್ತು ಯುನೀಕ್ ಆಗಿ ಪ್ರಿವೆಡ್ಡಿಂಗ್ ಶೂಟ್ ಮಾಡಿಸುವ ಭರದಲ್ಲಿ ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಗುತ್ತಿಗೆ ಆಧಾರಿತ ವೈದ್ಯ ಡಾ.ಅಭಿಷೇಕ್​​ ಯಡವಟ್ಟು ಮಾಡಿಕೊಂಡಿದ್ದಾರೆ. 

ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಿವೆಡ್ಡಿಂಗ್ ಶೂಟ್: ಗುತ್ತಿಗೆ ಆಧಾರಿತ ವೈದ್ಯ ವಜಾ
ಪ್ರಿವೆಡ್ಡಿಂಗ್ ಫೋಟೋಶೂಟ್
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Feb 09, 2024 | 10:33 PM

Share

ಚಿತ್ರದುರ್ಗ, ಫೆಬ್ರವರಿ 9: ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಿವೆಡ್ಡಿಂಗ್ ಶೂಟ್ (Pre Wedding Shoot)​ ಮಾಡಿಸಿದ್ದ ಗುತ್ತಿಗೆ ಆಧಾರಿತ ವೈದ್ಯ ಡಾ.ಜಗದೀಶ್​ನನ್ನು ಸೇವೆಯಿಂದ ವಜಾ ಚಿತ್ರದುರ್ಗ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಿವೆಡ್ಡಿಂಗ್ ಶೂಟ್ ವಿಡಿಯೋ ಮಾಡಲಾಗಿತ್ತು. ನಿಯಮ ಬಾಹಿರ ಕೃತ್ಯ, ಕರ್ತವ್ಯ ಲೋಪ ಹಿನ್ನೆಲೆ ಕೆಲಸದಿಂದ ವಜಾ ಮಾಡಲಾಗಿದೆ. ಡಿಫರೆಂಟ್ ಮತ್ತು ಯುನೀಕ್ ಆಗಿ ಪ್ರಿವೆಡ್ಡಿಂಗ್ ಶೂಟ್ ಮಾಡಿಸುವ ಭರದಲ್ಲಿ ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಗುತ್ತಿಗೆ ಆಧಾರಿತ ವೈದ್ಯ ಡಾ.ಅಭಿಷೇಕ್​​ ಯಡವಟ್ಟು ಮಾಡಿಕೊಂಡಿದ್ದಾರೆ.

‘ಆಪರೇಷನ್ ನಾಗಪ್ಪ’ ಶೀರ್ಷಿಕೆಯಡಿ ವ್ಯಕ್ತಿಗೆ ಆಪರೇಷನ್ ಮಾಡುತ್ತಿರುವಂತೆ ಆಪರೇಷನ್ ಥಿಯೇಟರ್​​ನಲ್ಲಿ ಡಾ.ಅಭಿಷೇಕ್ ಜೋಡಿಯ ಪ್ರಿವೆಡ್ಡಿಂಗ್ ವಿಡಿಯೋ ಶೂಟ್ ಮಾಡಲಾಗಿದೆ. ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸಾಕಷ್ಟು ವೈರಲ್​ ಆಗಿದೆ. ಜೊತೆಗೆ ಡಾ.ಅಭಿಷೇಕ್ ಜೋಡಿ ಬಗ್ಗೆ ಟೀಕೆ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ದುರ್ಬಳಕೆ ಬಗ್ಗೆ ಕಿಡಿಕಾರಲಾಗಿದೆ.

ಸರ್ಕಾರಿ ಆಸ್ಪತ್ರೆಗಳಿರುವುದು ಜನರ ಆರೋಗ್ಯ ಸೇವೆಗೆ ಹೊರತು ವೈಯಕ್ತಿಕ ಕೆಲಸಗಳಿಗಲ್ಲ: ಸಚಿವ ದಿನೇಶ್​ ಗುಂಡೂರಾವ್

ಬೆಂಗಳೂರಲ್ಲಿ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಮಾತನಾಡಿ,​ ಚಿತ್ರದುರ್ಗದ ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರಿ ವೆಡ್ಡಿಂಗ್ ಶೋಟ್ ನಡೆಸಿದ ವೈದ್ಯರನ್ನ ಸೇವೆಯಿಂದ ವಜಾಗೊಳಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಿರುವುದು ಜನರ ಆರೋಗ್ಯ ಸೇವೆಗೆ ಹೊರತು ವೈಯಕ್ತಿಕ ಕೆಲಸಗಳಿಗಲ್ಲ. ವೈದ್ಯರಿಂದ ಇಂಥಹ ಅಶಿಸ್ತುಗಳನ್ನ ನಾನು ಸಹಿಸುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಪ್ರೀವೆಡ್ಡಿಂಗ್ ಶೂಟ್: ಕನ್ನಡ ಮಾಧ್ಯಮ ಸರ್ಕಾರಿ ಶಾಲೆಗಳ ಉಳಿವಿಗೆ ಪ್ರತಿಜ್ಞೆ ತೊಟ್ಟ ‘ಅನಂತಗಾಯತ್ರಿ’

ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ಗುತ್ತಿಗೆ ನೌಕರರು ಸೇರಿದಂತೆ ವೈದ್ಯರು, ಸಿಬ್ಬಂದಿ ವರ್ಗದವರು ಸರ್ಕಾರಿ ಸೇವಾ ನಿಯಮಾವಳಿಗಳ ಅನ್ವಯ ಕರ್ತವ್ಯ ನಿರ್ವಹಿಸಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಈ ರೀತಿಯ ದುರುಪಯೋಗಳು ಆಗದಂತೆ ಎಚ್ಚರಿಕೆ ವಹಿಸಲು ಸಂಬಂಧಪಟ್ಟ ವೈದ್ಯರು ಹಾಗೂ ಎಲ್ಲಾ ಸಿಬ್ಬಂದಿಗಳಿಗೆ ಈಗಾಗಲೇ ಸೂಚಿಸಿದ್ದೇನೆ.

ಸರ್ಕಾರಿ ಆಸ್ಪತ್ರೆಗಳಿಗೆ ಸರ್ಕಾರ ಒದಗಿಸಿರುವ ಸೌಕರ್ಯಗಳು ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ಎಂಬುದನ್ನ ಅರಿತು ಕರ್ತವ್ಯ ನಿರ್ವಹಿಸುವತ್ತ ಎಲ್ಲರು ಗಮನಹರಿಸಬೇಕು ಎಂದು ಹೇಳಿದ್ದಾರೆ.

ಚಿತ್ರದುರ್ಗ ಡಿಹೆಚ್​​ಒ ಡಾ.ರೇಣುಪ್ರಸಾದ್ ಹೇಳಿದ್ದಿಷ್ಟು

ಈ ವಿಚಾರವಾಗಿ ಚಿತ್ರದುರ್ಗ ಡಿಹೆಚ್​​ಒ ಡಾ.ರೇಣುಪ್ರಸಾದ್ ಪ್ರತಿಕ್ರಿಯೆ ನೀಡಿದ್ದು, ಆಸ್ಪತ್ರೆ ಆಪರೇಷನ್ ಥಿಯೇಟರ್ ದುರ್ಬಳಕೆ ಆಗಿದೆ. ಆಪರೇಷನ್ ಥಿಯೇಟರ್ ಕೆಲ ತಿಂಗಳಿಂದ್ ಸ್ಥಗಿತ ಆಗಿತ್ತು. ಭರಮಸಾಗರ ಆಸ್ಪತ್ರೆ ವೈದ್ಯಾಧಿಕಾರಿಗೆ ನೋಟಿಸ್ ಜಾರಿ ಮಾಡಿದ್ದೇವೆ.

ಇದನ್ನೂ ಓದಿ: ಚಿತ್ರದುರ್ಗ ಸರ್ಕಾರಿ ಆಪರೇಷನ್ ಥಿಯೇಟರಿನಲ್ಲೇ ಪ್ರಿವೆಡ್ಡಿಂಗ್ ವಿಡಿಯೋ ಶೂಟ್, ಪೇಚಿಗೆ ಸಿಲುಕಿದ ಜೋಡಿ!

ಒಂದು ತಿಂಗಳ ಹಿಂದೆ ಡಾ.ಜಗದೀಶ್ ಗುತ್ತಿಗೆ ಆಧಾರದಲ್ಲಿ ವೈದ್ಯಾಧಿಕಾರಿ ಆಗಿ ನೇಮಕ ಆಗಿದ್ದರು. ಪರಿಶೀಲನೆ ನಡೆಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದರು. ಇದೀಗ ಗುತ್ತಿಗೆ ಆಧಾರಿತ ವೈದ್ಯ ಡಾ.ಜಗದೀಶ್​ನನ್ನು ಸೇವೆಯಿಂದ ವಜಾ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:08 pm, Fri, 9 February 24

Follow Us
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು