Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದಂತೆಯೇ ಗೋವಿಂದ ಕಾರಜೋಳ ವಿರುದ್ಧ ಪ್ರತಿಭಟನೆ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಚಿತ್ರದುರ್ಗ(Chitradurga) ಲೋಕಸಭಾ ಕ್ಷೇತ್ರದ ಟಿಕೆಟ್​ನ್ನು ಗೋವಿಂದ ಕಾರಜೋಳ ಅವರಿಗೆ ನೀಡಲಾಗಿದ್ದು, ಈ ಹಿನ್ನಲೆ ಟಿಕೆಟ್​ ಆಕಾಂಕ್ಷಿಯಾಗಿದ್ದ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಅವರ ಪುತ್ರ ರಘುಚಂದನ್‌ಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆ ಬಂಡಾಯವೆದ್ದಿದ್ದು, ಈ ಮಧ್ಯೆ ಇಂದು(ಮಾ.29) ಕೋಟೆನಾಡಿಗೆ ಗೋವಿಂದ ಕಾರಜೋಳ ಅವರು ಎಂಟ್ರಿ ಕೊಟ್ಟಿದ್ದು, ರಘುಚಂದನ್ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದಂತೆಯೇ ಗೋವಿಂದ ಕಾರಜೋಳ ವಿರುದ್ಧ ಪ್ರತಿಭಟನೆ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದಂತೆಯೇ ಗೋವಿಂದ ಕಾರಜೋಳ ವಿರುದ್ಧ ಪ್ರತಿಭಟನೆ
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 29, 2024 | 8:13 PM

ಚಿತ್ರದುರ್ಗ, ಮಾ.29:  ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು. ಈ ನಡುವೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕಟ್​ ಆಕಾಂಕ್ಷಿಯಾಗಿದ್ದ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಅವರ ಪುತ್ರ ರಘುಚಂದನ್​ಗೆ ಟಿಕೆಟ್​ ಕೈತಪ್ಪಿದ್ದು, ಗೋವಿಂದ್​ ಕಾರಜೋಳ(Govind Karjol) ಅವರಿಗೆ ಟಿಕೆಟ್​ ನೀಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಈ ಮಧ್ಯೆ ವಿರೋಧದ ನಡುವೆ ಇಂದು(ಮಾ.29) ಕೋಟೆನಾಡಿಗೆ ಗೋವಿಂದ ಕಾರಜೋಳ ಅವರು ಎಂಟ್ರಿ ಕೊಟ್ಟಿದ್ದು, ರಘುಚಂದನ್ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಗೋಬ್ಯಾಕ್ ಕಾರಜೋಳ ಘೋಷಣೆ ಕೂಗಿ ಆಕ್ರೋಶ

ಈ ಹಿನ್ನಲೆ ಚಿತ್ರದುರ್ಗ ನಗರ ಪ್ರವೇಶಕ್ಕೂ ಮೊದಲೇ ಚಳ್ಳಕೆರೆ ಗೇಟ್ ಬಳಿ ಕಾರು ಅಡ್ಡಗಟ್ಟಿ ಕಾರಜೋಳ್ ವಿರುದ್ಧ ಕಿಡಿಕಾರಿದ್ದು, ಗೋಬ್ಯಾಕ್ ಕಾರಜೋಳ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ನೂಕುನುಗ್ಗಲಾಗಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರ ಹರಸಾಹಸ ಪಡುತ್ತಿದ್ದಾರೆ. ಇದೀಗ ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ:ಚಿತ್ರದುರ್ಗ ಬಿಜೆಪಿ ಟಿಕೆಟ್ ಮಿಸ್: ಯಡಿಯೂರಪ್ಪ-ವಿಜಯೇಂದ್ರ ವಿರುದ್ಧ ಬಂಡಾಯವೆದ್ದ ತಂದೆ-ಮಗ

ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧಾರ

ಇನ್ನು ಚಿತ್ರದುರ್ಗದಲ್ಲಿ ಬೆಂಬಲಿಗರ ಸಭೆ ಬಳಿಕ ಮಾತನಾಡಿದ್ದ ಎಂ.ಚಂದ್ರಪ್ಪ, ‘ಏಪ್ರಿಲ್‌ 3ರಂದು ರಘುಚಂದನ್ ನಾಮಪತ್ರ ಸಲ್ಲಿಕೆಗೆ ಚಿಂತನೆ ಮಾಡಲಾಗಿದೆ. 8 ಕ್ಷೇತ್ರದಲ್ಲಿರುವ ಬೆಂಬಲಿಗರು ನನ್ನ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ. ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದರು. ಇನ್ನೂ ಕಾಲ‌ ಮಿಂಚಿಲ್ಲ, ಬಿಜೆಪಿ ಟಿಕೆಟ್ ಕೇಳುತ್ತಿದ್ದೇವೆ. ನಮ್ಮ ನೋವು ಪಕ್ಷದ ವರಿಷ್ಠರಿಗೆ ಅರ್ಥ ಆಗಿದೆ ಎಂದು ಭಾವಿಸಿದ್ದೇವೆ. ಪುತ್ರನನ್ನು ಚುನಾವಣೆಗೆ ನಿಲ್ಲಿಸುವಂತೆ ಈ ಹಿಂದೆ ಕಾರಜೋಳ ಕೂಡ ಹೇಳಿದ್ದರು. ಈಗ ಗೋವಿಂದ ಕಾರಜೋಳ ಬಂದಿರುವುದು ಸರಿಯೇ ಎಂದು ಕೇಳಿದ್ದೇನೆ ಎನ್ನುವ ಮೂಲಕ ಸ್ವ-ಪಕ್ಷದ ವಿರುದ್ದವೇ ಕಿಡಿಕಾರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:08 pm, Fri, 29 March 24

ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ