AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದಂತೆಯೇ ಗೋವಿಂದ ಕಾರಜೋಳ ವಿರುದ್ಧ ಪ್ರತಿಭಟನೆ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಚಿತ್ರದುರ್ಗ(Chitradurga) ಲೋಕಸಭಾ ಕ್ಷೇತ್ರದ ಟಿಕೆಟ್​ನ್ನು ಗೋವಿಂದ ಕಾರಜೋಳ ಅವರಿಗೆ ನೀಡಲಾಗಿದ್ದು, ಈ ಹಿನ್ನಲೆ ಟಿಕೆಟ್​ ಆಕಾಂಕ್ಷಿಯಾಗಿದ್ದ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಅವರ ಪುತ್ರ ರಘುಚಂದನ್‌ಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆ ಬಂಡಾಯವೆದ್ದಿದ್ದು, ಈ ಮಧ್ಯೆ ಇಂದು(ಮಾ.29) ಕೋಟೆನಾಡಿಗೆ ಗೋವಿಂದ ಕಾರಜೋಳ ಅವರು ಎಂಟ್ರಿ ಕೊಟ್ಟಿದ್ದು, ರಘುಚಂದನ್ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದಂತೆಯೇ ಗೋವಿಂದ ಕಾರಜೋಳ ವಿರುದ್ಧ ಪ್ರತಿಭಟನೆ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದಂತೆಯೇ ಗೋವಿಂದ ಕಾರಜೋಳ ವಿರುದ್ಧ ಪ್ರತಿಭಟನೆ
ಬಸವರಾಜ ಮುದನೂರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on:Mar 29, 2024 | 8:13 PM

Share

ಚಿತ್ರದುರ್ಗ, ಮಾ.29:  ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು. ಈ ನಡುವೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕಟ್​ ಆಕಾಂಕ್ಷಿಯಾಗಿದ್ದ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಅವರ ಪುತ್ರ ರಘುಚಂದನ್​ಗೆ ಟಿಕೆಟ್​ ಕೈತಪ್ಪಿದ್ದು, ಗೋವಿಂದ್​ ಕಾರಜೋಳ(Govind Karjol) ಅವರಿಗೆ ಟಿಕೆಟ್​ ನೀಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಈ ಮಧ್ಯೆ ವಿರೋಧದ ನಡುವೆ ಇಂದು(ಮಾ.29) ಕೋಟೆನಾಡಿಗೆ ಗೋವಿಂದ ಕಾರಜೋಳ ಅವರು ಎಂಟ್ರಿ ಕೊಟ್ಟಿದ್ದು, ರಘುಚಂದನ್ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಗೋಬ್ಯಾಕ್ ಕಾರಜೋಳ ಘೋಷಣೆ ಕೂಗಿ ಆಕ್ರೋಶ

ಈ ಹಿನ್ನಲೆ ಚಿತ್ರದುರ್ಗ ನಗರ ಪ್ರವೇಶಕ್ಕೂ ಮೊದಲೇ ಚಳ್ಳಕೆರೆ ಗೇಟ್ ಬಳಿ ಕಾರು ಅಡ್ಡಗಟ್ಟಿ ಕಾರಜೋಳ್ ವಿರುದ್ಧ ಕಿಡಿಕಾರಿದ್ದು, ಗೋಬ್ಯಾಕ್ ಕಾರಜೋಳ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ನೂಕುನುಗ್ಗಲಾಗಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರ ಹರಸಾಹಸ ಪಡುತ್ತಿದ್ದಾರೆ. ಇದೀಗ ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ:ಚಿತ್ರದುರ್ಗ ಬಿಜೆಪಿ ಟಿಕೆಟ್ ಮಿಸ್: ಯಡಿಯೂರಪ್ಪ-ವಿಜಯೇಂದ್ರ ವಿರುದ್ಧ ಬಂಡಾಯವೆದ್ದ ತಂದೆ-ಮಗ

ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧಾರ

ಇನ್ನು ಚಿತ್ರದುರ್ಗದಲ್ಲಿ ಬೆಂಬಲಿಗರ ಸಭೆ ಬಳಿಕ ಮಾತನಾಡಿದ್ದ ಎಂ.ಚಂದ್ರಪ್ಪ, ‘ಏಪ್ರಿಲ್‌ 3ರಂದು ರಘುಚಂದನ್ ನಾಮಪತ್ರ ಸಲ್ಲಿಕೆಗೆ ಚಿಂತನೆ ಮಾಡಲಾಗಿದೆ. 8 ಕ್ಷೇತ್ರದಲ್ಲಿರುವ ಬೆಂಬಲಿಗರು ನನ್ನ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ. ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದರು. ಇನ್ನೂ ಕಾಲ‌ ಮಿಂಚಿಲ್ಲ, ಬಿಜೆಪಿ ಟಿಕೆಟ್ ಕೇಳುತ್ತಿದ್ದೇವೆ. ನಮ್ಮ ನೋವು ಪಕ್ಷದ ವರಿಷ್ಠರಿಗೆ ಅರ್ಥ ಆಗಿದೆ ಎಂದು ಭಾವಿಸಿದ್ದೇವೆ. ಪುತ್ರನನ್ನು ಚುನಾವಣೆಗೆ ನಿಲ್ಲಿಸುವಂತೆ ಈ ಹಿಂದೆ ಕಾರಜೋಳ ಕೂಡ ಹೇಳಿದ್ದರು. ಈಗ ಗೋವಿಂದ ಕಾರಜೋಳ ಬಂದಿರುವುದು ಸರಿಯೇ ಎಂದು ಕೇಳಿದ್ದೇನೆ ಎನ್ನುವ ಮೂಲಕ ಸ್ವ-ಪಕ್ಷದ ವಿರುದ್ದವೇ ಕಿಡಿಕಾರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:08 pm, Fri, 29 March 24

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!