AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕಿ ಪೂರ್ಣಿಮಾ ಬೆಂಬಲಿಗರಿಂದ ಪ್ರತಿಭಟನೆ; ಮಂತ್ರಿ ಸ್ಥಾನ ನೀಡದಕ್ಕೆ ಟೈರಿಗೆ ಬೆಂಕಿ ಹಚ್ಚಿ ಆಕ್ರೋಶ

ಶಾಸಕಿ ಪೂರ್ಣಿಮಾ ಬೆಂಬಲಿಗರ ಪ್ರತಿಭಟನೆಯಲ್ಲಿ ವಿವಿಧ ಗ್ರಾಮ ಪಂಚಾಯತಿ ಸದಸ್ಯರು, ಕೆಲ ಬಿಜೆಪಿ ಮುಖಂಡರು ಸೇರಿದಂತೆ ಧರ್ಮಪುರ ಹೋಬಳಿಯ ವಿವಿಧ ಗ್ರಾಮದ ಜನರು ಭಾಗಿಯಾಗಿದ್ದಾರೆ.

ಶಾಸಕಿ ಪೂರ್ಣಿಮಾ ಬೆಂಬಲಿಗರಿಂದ ಪ್ರತಿಭಟನೆ; ಮಂತ್ರಿ ಸ್ಥಾನ ನೀಡದಕ್ಕೆ ಟೈರಿಗೆ ಬೆಂಕಿ ಹಚ್ಚಿ ಆಕ್ರೋಶ
ಶಾಸಕಿ ಪೂರ್ಣಿಮಾ ಬೆಂಬಲಿಗರಿಂದ ಪ್ರತಿಭಟನೆ
TV9 Web
| Edited By: |

Updated on: Aug 06, 2021 | 12:18 PM

Share

ಚಿತ್ರದುರ್ಗ:  ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್​ಗೆ ಸಚಿವ ಸ್ಥಾನ ಕೈತಪ್ಪಿದ್ದು, ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಈಗಾಗಲೇ ಸಾಮಾಜಿಕ ಜಾಲತಾಣದ ಮೂಲಕ ಈ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ. ಶಾಸಕಿ ಪೂರ್ಣಿಮಾ ಬೆಂಬಲಿಗರು ಪ್ರತಿಭಟನೆ ಮೂಲಕ ಸರ್ಕಾರಕ್ಕೆ‌ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಕಳೆದ ಬುಧವಾರ ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪೂರ್ಣಿಮಾ ಬೆಂಬಲಿಗರು ಧರಣಿ ನಡೆಸಿದ್ದರು. ನಿನ್ನೆ ಲಕ್ಷ್ಮಮ್ಮ ಸಭಾಂಗಣದಲ್ಲಿ ಸಭೆ ನಡೆಸಿ ನಿರಂತರ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಅದಂತೆ ಇಂದು ಹಿರಿಯೂರು ತಾಲೂಕಿನ ಧರ್ಮಪುರ ಗ್ರಾಮದಿಂದ ಹಿರಿಯೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

ಬೆಳಗ್ಗೆಯಿಂದಲೇ ಶಾಸಕಿ ಪೂರ್ಣಿಮಾ ಬೆಂಬಲಿಗರು ಪಾದಯಾತ್ರೆ ಆರಂಭಿಸಿದ್ದಾರೆ. ಧರ್ಮಪುರದಿಂದ ಸುಮಾರು 30 ಕಿ.ಮೀ ದೂರದ ಹಿರಿಯೂರಿಗೆ ಪಾದಯಾತ್ರೆ ನಡೆಸುತ್ತಿದ್ದು, ಪ್ರತಿಭಟನಾಕಾರರು ಧರ್ಮಪುರ ಬಳಿ ಟೈರಿಗೆ ಬೆಂಕಿಯಿಟ್ಟು ಬಸವಾಜ್​ ಬೊಮ್ಮಾಯಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಜತೆಗೆ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ನ್ಯಾಯ ಮತ್ತು ಮಹಿಳಾ ಕೋಟಾದಡಿ ಶಾಸಕಿ ಪೂರ್ಣಿಮಾಗೆ ಮಂತ್ರಿ ಸ್ಥಾನ ನೀಡಲೇಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದು, ಪೂರ್ಣಿಮಾಗೆ ಮಂತ್ರಿಗಿರಿಯ ಭರವಸೆ ನೀಡಿದ್ದ ಸಿಎಂ ಬಿಮ್ಮಾಯಿ ಮತ್ತು ನಾಯಕರು ಕೊನೆ ಕ್ಷಣದಲ್ಲಿ ಒತ್ತಡಕ್ಕೆ ಮಣಿದು ಬದಲಾಯಿಸಿದ್ದಾರೆ. ಭ್ರಷ್ಟಾಚಾರದ ಆರೋಪ‌ ಹೊತ್ತಿರುವ ಶಶಿಕಲಾ‌ ಜೊಲ್ಲೆಗೆ ಮತ್ತೆ ಮಣೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಶಾಸಕಿ ಪೂರ್ಣಿಮಾ ಬೆಂಬಲಿಗರ ಪ್ರತಿಭಟನೆಯಲ್ಲಿ ವಿವಿಧ ಗ್ರಾಮ ಪಂಚಾಯತಿ ಸದಸ್ಯರು, ಕೆಲ ಬಿಜೆಪಿ ಮುಖಂಡರು ಸೇರಿದಂತೆ ಧರ್ಮಪುರ ಹೋಬಳಿಯ ವಿವಿಧ ಗ್ರಾಮದ ಜನರು ಭಾಗಿಯಾಗಿದ್ದಾರೆ. ಪಾದಯಾತ್ರೆಗೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಡಿವೈಎಸ್​ಪಿ ರೋಷನ್ ಜಮೀರ್, ಸಿಪಿಐ ರಾಘವೇಂದ್ರ ಪಾದಾಯಾತ್ರೆ ವೇಳೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಶಾಂತಿ ಪಾಲನೆಗೆ ಸೂಚಿಸಿದ್ದಾರೆ.

ಗೊಲ್ಲ ಸಮುದಾಯದ ಏಕೈಕ ಶಾಸಕಿ, ಹಿಂದುಳಿದ ಸಮುದಾಯಗಳ ಆಶಾಕಿರಣವಾದ ಪೂರ್ಣಿಮಾ ಶ್ರೀನಿವಾಸ್​ಗೆ ಮಂತ್ರಿಗಿರಿಯ ಆಸೆ ತೋರಿಸಿ ವಂಚಿಸಲಾಗಿದೆ. ಮಂತ್ರಿಗಿರಿ ನೀಡುವವರೆಗೆ ನಾವು ವಿರಮಿಸುವುದಿಲ್ಲ. ಹಿರಿಯೂರು ಬಂದ್ ಸೇರಿದಂತೆ ಉಗ್ರ ಪ್ರತಿಭಟನೆ ನಡೆಸುತ್ತೇವೆ. ರಾಜ್ಯಾದ್ಯಂತ ಪ್ರತಿಭಟನೆ ನಡೆಯಲಿದೆ ಎಂದು ಧರ್ಮಪುರ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಶಿವಣ್ಣ ಹೇಳಿದ್ದಾರೆ.

ಇದನ್ನೂ ಓದಿ: ಫೇಸ್‌ಬುಕ್ ಪೋಸ್ಟ್‌ಗೆ ಶಾಸಕಿ ಪೂರ್ಣಿಮಾ ಸ್ಪಷ್ಟನೆ, ಹಾಗಾದ್ರೆ ಬಿಜೆಪಿ ಬಗ್ಗೆ ಅವರು ಹೇಳಿದ್ದೇನು?

ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ: ಸಚಿವ ಸಂಪುಟ ರಚನೆ ಬಳಿಕ ಸಿಎಂ ಮೊದಲ ಮಾತು

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್