AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ತುಂತುರು ಮಳೆಗೆ ಬೆಳೆ ನಾಶ; ಕೈಗೆ ಬಂದ ತುತ್ತು ಬಾಯಿಗೆ ಬಾರದೆ ರೈತ ಕಂಗಾಲು

ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ ಹದಿನೈದು ದಿನಗಳಿಂದ ಸೋನೆ ಮಳೆ ಸುರಿಯುತ್ತಿದೆ. ಪರಿಣಾಮ ಮೆಣಸಿಕಾಯಿ ಬೆಳೆ ಕೈಗೆ ಬಂದಿದ್ದು ಬಾಯಿಗೆ ಬರದಂತಾಗಿದೆ. ಎಷ್ಟೇ ರಾಸಾಯನಿಕ ಸಿಂಪಡಿಸಿದರೂ ಪ್ರಯೋಜನವಾಗಿಲ್ಲ. ಬದಲಾಗಿ ರೈತನ ಜೇಬಿಗೆ ಕತ್ತರಿ ಬಿದ್ದಿದ್ದು, ನೇಗಿಲಯೋಗಿ ಸಂಕಷ್ಟಕ್ಕೆ ಸಿಲುಕಿದ್ದಾನೆ.

ಚಿತ್ರದುರ್ಗದಲ್ಲಿ ತುಂತುರು ಮಳೆಗೆ ಬೆಳೆ ನಾಶ; ಕೈಗೆ ಬಂದ ತುತ್ತು ಬಾಯಿಗೆ ಬಾರದೆ ರೈತ ಕಂಗಾಲು
ಚಿತ್ರದುರ್ಗದಲ್ಲಿ ಮಳೆಗೆ ಬೆಳೆ ಹಾನಿ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 01, 2023 | 7:11 AM

Share

ಚಿತ್ರದುರ್ಗ, ಆ.01: ಜಿಲ್ಲೆಯಲ್ಲಿ ಹದಿನೈದು ದಿನದಿಂದ ತುಂತುರು ಮಳೆಯ ಪರಿಣಾಮ ಬೆಳೆ ಹಾಳಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬಾರದ ಸ್ಥಿತಿಯಿಂದ ರೈತರು(Farmers) ಕಂಗಾಲಾಗಿದ್ದು, ಸೂಕ್ತ ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ರೈತರು ಆಗ್ರಹಿಸಿದ್ದಾರೆ. ಹೌದು ಚಿತ್ರದುರ್ಗ(Chitradurga) ತಾಲೂಕಿನ ಹುಣಸೇಕಟ್ಟೆ ಭಾಗದಲ್ಲಿ ಅನೇಕ ರೈತರು ಹತ್ತಾರು ಎಕರೆಯಲ್ಲಿ ಮೆಣಸಿಕಾಯಿ ಬೆಳೆ ಬೆಳೆದಿದ್ದಾರೆ. ಉತ್ತಮ ಬೆಳೆಯೂ ಬಂದಿದ್ದು, ಇನ್ನೇನು ಕೈಗೆ ಬರುವ ಸಂದರ್ಭದಲ್ಲಿ ಸೋನೆ ಮಳೆ ಶುರುವಾಗಿದೆ. ಪರಿಣಾಮ ಮೆಣಸಿಕಾಯಿ ಬೆಳೆ ಬಹುತೇಕ ನಾಶವಾಗಿದೆ. ಈ ಭಾಗದಲ್ಲಿ ನೂರಾರು ಎಕರೆಯಲ್ಲಿ ಬೆಳೆದಿದ್ದ ಮೆಣಸಿನಕಾಯಿ ಬೆಳೆ ಹಾನಿ ಆಗಿದೆ. ಸಾಲ ಸೋಲ ಮಾಡಿ ಎಕರೆಗೆ 50ಸಾವಿರದಿಂದ ಲಕ್ಷದವರೆಗೆ ಖರ್ಚು ಮಾಡಿದ್ದೇವೆ. ಆದ್ರೆ, ಬೆಳೆ ಹಾನಿಯಿಂದ ವಿಷ ಕುಡಿಯುವ ಸ್ಥಿತಿ ಎದುರಾಗಿದೆ ಎಂದು ರೈತರು ಸಂಕಟ ತೋಡಿಕೊಳ್ಳುತ್ತಿದ್ದಾರೆ.

ಇನ್ನು ಕೈಗೆ ಬಂದ ಬೆಳೆ ಕಣ್ಮುಂದೆ ಹಾಳಾಗುವುದನ್ನು ನೋಡಲಾಗದೆ, ವಿವಿಧ ರಾಸಾಯನಿಕಗಳನ್ನು ತಂದು ಸಿಂಪಡಣೆ ಮಾಡಿದ್ದೇವೆ. ರಾಸಾಯನಿಕ ಸಿಂಪಡಣೆಗಾಗಿಯೇ ಲೆಕ್ಕವಿಲ್ಲದಷ್ಟು ಹಣವನ್ನೂ ಖರ್ಚು ಮಾಡಿದ್ದೇವೆ. ಆದ್ರೆ, ರಾಸಾಯನಿಕ ಸಿಂಪಡಣೆ ಬಳಿಕ ಮತ್ತಷ್ಟು ಹೆಚ್ಚಿನ ಬೆಳೆ ನಾಶವಾಗಿದೆ. ಹೀಗಾಗಿ, ಸರ್ಕಾರ ಈ ಬಗ್ಗೆ ಪರಿಶೀಲನೆ ನಡೆಸಿ, ಸೂಕ್ತ ಪರಿಹಾರ ನೀಡಬೇಕೆಂದು ರೈತರು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ರೇಷ್ಮೆ ಗೂಡಿನ ಬಾಕಿ ಹಣ ಕೊಡದೆ ಪ್ರಾಣ ಬೆದರಿಕೆ ಹಾಕಿದ ವ್ಯಾಪಾರಿ: ನ್ಯಾಯ ಕೋರಿ ಪೊಲೀಸ್ ಠಾಣೆ ಮೆಟ್ಟಿಲೇರಿದ ರೈತರು

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದಲ್ಲಿ ಕಳೆದ ಹದಿನೈದು ದಿನದಿಂದ ಜಡಿ ಮಳೆ ಸುರಿಯುತ್ತಿದೆ. ಪರಿಣಾಮ ಮೆಣಸಿನಕಾಯಿ ಬೆಳೆ ಬಹುತೇಕ ಹಾನಿಗೊಳಗಾಗಿದೆ. ಅಲ್ಲದೆ ಫರ್ಟಿಲೈಸರ್ಸ್​ನಲ್ಲಿ ಕೊಂಡು ಸಿಂಪಡಿಸಿದ ವಿವಿಧ ರಾಸಾಯನಿಕದಿಂದಲೂ ಬೆಳೆ ಹಾನಿಗೊಳಗಾಗಿದೆ ಎಂದು ರೈತರು ಆರೋಪಿಸಿದ್ದಾರೆ. ಹೀಗಾಗಿ, ಜಿಲ್ಲಾಡಳಿತ ಮತ್ತು ಕೃಷಿ ಇಲಾಖೆ ಈ ಬಗ್ಗೆ ಗಮನಹರಿಸಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್