ಚಿತ್ರದುರ್ಗ: ಹಿಂದುಳಿದ, ದಲಿತ ಸಮುದಾಯದ ಮಠಾಧೀಶರ ಜೊತೆ RSS ಮುಖ್ಯಸ್ಥ ಮೋಹನ್ ಭಾಗವತ್ ಚರ್ಚೆ

ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀ ನೇತೃತ್ವದಲ್ಲಿ ಮಾದಾರ ಚನ್ನಯ್ಯ ಮಠಕ್ಕೆ ಆಗಮಿಸಿದ ಮಠಾಧೀಶರನ್ನು ಮೋಹನ್‌ ಭಾಗವತ್ ಭೇಟಿ ಮಾಡಿದ್ದಾರೆ. ಇನ್ನು ಶಿವಶರಣ ಮಾದಾರ ಚನ್ನಯ್ಯ ಮಠದಲ್ಲಿ ಮೋಹನ್ ಭಾಗವತ್ ಹಿಂದುಳಿದ, ದಲಿತ ಸಮುದಾಯದ ಮಠಾಧೀಶರ ಜೊತೆ ಸಭೆ ನಡೆಸಿದ್ದಾರೆ.

ಚಿತ್ರದುರ್ಗ: ಹಿಂದುಳಿದ, ದಲಿತ ಸಮುದಾಯದ ಮಠಾಧೀಶರ ಜೊತೆ RSS ಮುಖ್ಯಸ್ಥ ಮೋಹನ್ ಭಾಗವತ್ ಚರ್ಚೆ
ಮಠಾಧೀಶರ ಜೊತೆ RSS ಮುಖ್ಯಸ್ಥ ಮೋಹನ್ ಭಾಗವತ್ ಚರ್ಚೆ
Follow us
| Updated By: ಆಯೇಷಾ ಬಾನು

Updated on:Jul 12, 2022 | 8:41 PM

ಚಿತ್ರದುರ್ಗ: ಚಿತ್ರದುರ್ಗದ ಶ್ರೀ ಶಿವಶರಣ ಮಾದಾರಚನ್ನಯ್ಯ ಗುರುಪೀಠಕ್ಕೆ ನಿನ್ನೆ ಸಂಜೆ ಆರ್​ಎಸ್​ಎಸ್ ಸಂಘಚಾಲಕ ಮೋಹನ್ ಭಾಗವತ್ ಭೇಟಿ ನೀಡಿದರು. ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳ ದರ್ಶನ ಪಡೆದು ನಿನ್ನೆ ರಾತ್ರಿ ಮಠದಲ್ಲೇ ವಾಸ್ತವ್ಯ ಹೂಡಿದ್ದರು. ಇಂದು ದಲಿತ, ಹಿಂದುಳಿದ ವರ್ಗಗಳ 21 ಮಠಾಧೀಶರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು‌‌ ಮೋಹನ್ ಭಾಗವತ್ ಅವರು ಮಾತನಾಡಿದರು. ಸಂವಾದದಲ್ಲಿ ಅನೇಕ ಸ್ವಾಮೀಜಿಯವರು ಕೇಳಿದ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿದರು.

ಕುಂಚಿಟಿಗ ಮಠದ ಶಾಂತವೀರ ಸ್ವಾಮೀಜಿ, ಬೋವಿ ಮಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಭಗೀರಥ ಮಠದ ಪುರುಷೋತ್ತಮಾನಂದ ಸ್ವಾಮೀಜಿ, ಶ್ರೀ ಕೃಷ್ಣ ಯಾದವಾನಂದ ಮಠದ ಯಾದವಾನಂದ ಸ್ವಾಮೀಜಿ, ಮಡಿವಾಳ ಮಾಚಿದೇವ ಮಠದ ಬಸವ ಮಾಚಿದೇವ ಮಹಾಸ್ವಾಮೀಜಿ, ಅನ್ನದಾನಿ ಭಾರತೀ ಅಪ್ಪಣ್ಣ ಸ್ವಾಮೀಜಿ, ಬಸವಕುಂಬಾರ ಗುಂಡಯ್ಯ ಸ್ವಾಮೀಜಿ, ರೇಣುಕಾನಂದ ಸ್ವಾಮೀಜಿ, ವೇಮನಾನಂದ ಸ್ವಾಮೀಜಿ, ಶಾಂತಭೀಷ್ಮ ಅಂಬಿಗರ ಚೌಡಯ್ಯ ಸ್ವಾಮೀಜಿ, ಬಸವ ಭೃಂಗೀಶ್ವರ ಸ್ವಾಮೀಜಿ, ಬಸವಕುಮಾರ ಸ್ವಾಮೀಜಿ, ದಯಾನಂದಪುರಿ ಸ್ವಾಮೀಜಿ, ಇಮ್ಮಡಿ ಕೇತೇಶ್ವರ ಸ್ವಾಮೀಜಿ, ಬಸವ ನಾಗೀದೇವ ಸ್ವಾಮೀಜಿ, ಜ್ಞಾನಾನಂದ ಪುರಿ ಸ್ವಾಮೀಜಿ, ಮಾತಾ ಬಿಸ್ಠದೇವಿಯವರು, ಬಸವ ಅರಳಯ್ಯ ಸ್ವಾಮೀಜಿ, ಪೂರ್ಣಾನಂದ ಭಾರತೀ ಸ್ವಾಮೀಜಿ, ಶ್ರೀಧರಾನಂದ ಸ್ವಾಮೀಜಿ ಸೇರಿದಂತೆ ದಲಿತ, ಹಿಂದುಳಿದ ವರ್ಗಗಳ 21 ಮಠಾಧೀಶರು ಭಾಗಿಯಾಗಿದ್ದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಮೋಹನ್‌ ಭಾಗವತ್‌ ಅವರು, ಸಂಘಕ್ಕೆ ಹೆಚ್ಚು ಹೊಂದುವುದು ರಾಜಕೀಯ ಅಲ್ಲ. ಧಾರ್ಮಿಕತೆ ಮತ್ತು ಆಧ್ಯಾತ್ಮಿಕತೆ. ಹಾಗಾಗಿ ನಮಗೆ ಸಂಘಕ್ಕೆ ರಾಜಕೀಯದವರಿಗಿಂತ ಸ್ವಾಮೀಜಿಗಳೇ ಹೆಚ್ಚು ಹತ್ತಿರವಾಗುತ್ತಾರೆ. ನಮ್ಮ ಸಮಾಜದಲ್ಲಿ ಕೆಲವು ಭಾಗ ಹಿಂದುಳಿಯಿತು. ಏಕೆಂದರೆ ಸಂಪರ್ಕ ಮುರಿದು ಹೋಯಿತು. ಹಿಂದು ಸಮಾಜದ ಎಲ್ಲಾ ಅಂಗಗಳನ್ನು ಸುಸ್ಥಿತಿಯಲ್ಲಿಡುವುದು ಕರ್ತವ್ಯ. ಮತ್ತೆ ಮತ್ತೆ ಸೇರುವುದರಿಂದ ಇದು ಸರಿ ಆಗುತ್ತದೆ. ಇದನ್ನೇ ಸಮರಸತೆ ಎನ್ನುವರು. ಸಂಘ ಇದೇ ಪ್ರಯತ್ನ ಮಾಡುತ್ತಿದೆ. ಸಮಾಜದ ಎಲ್ಲಾ ಅಂಗಗಳ ಬಗ್ಗೆ ಸಂವೇದನೆ ಇರಬೇಕು. ಪರಸ್ಪರ ಆಗಾಗ ಸೇರುವುದರಿಂದ ನಮಗೆ ಪರಸ್ಪರರ ಬಗ್ಗೆ ಅರಿವು ಹೆಚ್ಚಾಗುತ್ತದೆ. ಅರಿವು ಹೆಚ್ಚಾದಾಗ ಸಂಶಯಗಳು, ಅಪನಂಬಿಕೆಗಳು ದೂರ ಆಗುತ್ತವೆ. ಆಗ ಮನಸ್ಸುಗಳು ಒಂದಾಗುತ್ತವೆ.

ಅಸ್ಪೃಶ್ಯತೆ, ಅಸಮಾನತೆ ಮನಸಲ್ಲಿದೆ, ಶಾಸ್ತ್ರದಲ್ಲಿ ಸಮಸ್ಯೆಯಿಲ್ಲ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಮಠಗಳು ಹಾಗೂ ಸ್ವಾಮೀಜಿಗಳೂ ಪರಸ್ಪರ ಮತ್ತೆ ಮತ್ತೆ ಭೇಟಿ ಮಾಡುತ್ತಿರಬೇಕು. ಹಿಂದೂ ಸಮಾಜದ ಪ್ರಮುಖ ಸಮಸ್ಯೆಗಳಾದ ಅಸ್ಪೃಶ್ಯತೆ, ವಿಷಮತೆ, ಅಸಮಾನತೆ ಇವುಗಳು ಮುಖ್ಯವಾಗಿ ಇರುವುದು ನಮ್ಮ ಮನಸ್ಸಿನಲ್ಲಿ. ಶಾಸ್ತ್ರಗಳಲ್ಲಿ ಸಮಸ್ಯೆ ಇಲ್ಲ. ಮತ್ತು ಈ ಸಮಸ್ಯೆಗಳು ಹಲವಾರು ಶತಮಾನಗಳಿಂದ ನಮ್ಮ ಮನಸ್ಸಿನಲ್ಲಿ ಉಳಿದಿವೆ. ಹಾಗಾಗಿ ಇದರ ಪರಿಹಾರಕ್ಕೂ ಸಮಯ ತಗುಲುವುದು. ನಿಧಾನವಾಗಿ ಇದನ್ನು ಮನಸ್ಸಿನಿಂದ ತೆಗೆಯುವ ಕೆಲಸವಾಗಬೇಕಿದೆ. ಅಲ್ಲಿಯವರೆಗೂ ಸಹನೆ ಮತ್ತು ಧೈರ್ಯವನ್ನು ನಾವು ಹೊಂದಬೇಕು. ಅದು ಆಗೇ ಆಗುತ್ತದೆ. ಮತ್ತು ಆ ಕಾರ್ಯದಲ್ಲಿ ನಾವು ನಿರತರಾಗಿದ್ದೇವೆ.

ಭಾರತ ಭಾರತವಾಗಿ ಉಳಿಯಬೇಕಾದರೆ, ನಾವು ನಾವಾಗಿ ಉಳಿಯಬೇಕು. ಇಲ್ಲದಿದ್ದರೆ ಭಾರತ ಭಾರತವಾಗಿ ಉಳಿಯುವುದಿಲ್ಲ. ಹಾಗಾಗಿ ಧರ್ಮವು ಎಲ್ಲಕಡೆ ಓತಪ್ರೋತವಾಗಿ ಇರುವಂತೆ ಆಗಬೇಕು. ಮತಾಂತರ ಆಗುವುದರಿಂದ ನಮ್ಮಲ್ಲಿ ಪ್ರತ್ಯೇಕತೆಯನ್ನು ತರುತ್ತದೆ. ಮೂಲದಿಂದ ಬೇರಿನಿಂದ ಮತಾಂತರ ಆದವರು ದೂರ ಉಳಿಯುವಂತೆ ಮಾಡುತ್ತದೆ. ಹಾಗಾಗಿ ನಾವು ಮತಾಂತರವನ್ನು ತಡೆಯುವ ಪ್ರಯತ್ನ ಮಾಡಬೇಕು. ಸಂಸ್ಕಾರದ ಬಗ್ಗೆಯೂ ಗಮನಹರಿಸಬೇಕಿದೆ. ದೊಡ್ಡವರಿಗೆ ಗೌರವಕೊಡುವುದು, ನಮ್ಮ ಮಾತೆಯರು ಸೋದರಿಯರಲ್ಲಿ ಹೇಗೆ ನಡೆದುಕೊಳ್ಳಬೇಕು? ಇವುಗಳನ್ನು ನಮ್ಮ ಸಮಾಜದ ನವ ಪೀಳಿಗೆಗಳಿಗೆ ಹೇಳಿಕೊಡಬೇಕಿದೆ.

ಆಧುನಿಕ ವಿದ್ಯಾಭ್ಯಾಸದೊಂದಿಗೆ ಶಿಕ್ಷಣ ಸಿಗುತ್ತಿದೆ, ಆದರೆ ಸಂಸ್ಕಾರ ಸ್ವಲ್ಪ ದೂರ ಆಗುತ್ತಿದೆ. ಸಂಸ್ಕಾರ, ನಿಷ್ಠೆ ದೃಢವಾಗಬೇಕು ಎಂದರೆ ಏನಾದರೂ ಒಂದು ರೀತಿಯ ಉಪಾಸನೆಯನ್ನು ಜೋಡಿಸಿಕೊಳ್ಳಬೇಕು. ನೀವು, ಸ್ವಾಮೀಜಿಗಳು. ಸಾಧನೆ, ನಿಯಮಿತ ತಪಸ್ಸನ್ನು ನೀವು ಮಾಡುವವರು. ನಿಮ್ಮ ಜೀವನದ ಕಾರಣಕ್ಕಾಗಿ ನೀವು ಇದನ್ನು ಕೊಡಲು ಅಧಿಕಾರಿಗಳು. ನೀವು ಸಮಾಜವನ್ನು ಸಂಸ್ಕಾರವಂತ ಸಮಾಜವನ್ನಾಗಿ ಎಬ್ಬಿಸಿ ನಿಲ್ಲಿಸಬೇಕು. ಎಲ್ಲರೂ ಒಟ್ಟಾಗಿ ಮುನ್ನಡೆಯಬಹುದು. ಮುನ್ನಡೆಯಬೇಕು. ಸೇವೆ ಮತ್ತು ಸಂಸ್ಕಾರದ ಮೂಲಕ ನಾವು ಸಮಾಜವನ್ನು ಕಟ್ಟಿಬೆಳೆಸಬೇಕಿದೆ. ಸತ್ಯದ ಸಾಧನೆ ಮಾಡುತ್ತಾ ಸರ್ವರ ಸೇವೆ ಮಾಡಬೇಕಿದೆ. ಆತ್ಮನೋ ಮೋಕ್ಷಾರ್ಥಂ ಜಗದ್ಧಿತಾಯ ಚ ಎಂದು ಹೇಳುತ್ತೇವೆ. ಆ ರೀತಿ ಮಾಡಬೇಕಿದೆ.

ಇಂದು ನೀವೆಲ್ಲಾ ಮಠಾಧೀಶರು ಮಾಡುತ್ತಿರುವ ಪ್ರಯತ್ನ ಬೀಜರೂಪದಲ್ಲಿದೆ. ಇದು ಖಂಡಿತವಾಗಿ ಹೆಮ್ಮರವಾಗಿ ಬೆಳೆಯುತ್ತದೆ. ಫಲವನ್ನೂ ನೆರಳನ್ನೂ ನೀಡುತ್ತದೆ. ಮಾತ್ರವಲ್ಲ ಸಾವಿರಾರು ಬೀಜಗಳನ್ನು ಸೃಷ್ಟಿಸಿ ಅವೂ ಭೂಮಿಗೆ ತಾಗಿ ಸಸಿಗಳಾಗಿ ಬೆಳೆದು ಹೆಮ್ಮರವಾಗಿ ನಿಂತು ಫಲಗಳನ್ನೂ ನೀಡುವಂತೆ ಖಂಡಿತವಾಗಿ ಬೆಳೆದೇ ಬೆಳಯುತ್ತವೆ. ರಾಷ್ಟ್ರೀಯ ಸ್ವಯಂಸೇವಕ ಸಂಘ ನಿಮ್ಮ ಜೊತೆ ಇದೆ. ಏನೇಬರಲಿ, ಸಂಘ ನಿಮ್ಮ ಜೊತೆ ಇದೆ. ನಮ್ಮದೇ ಒಂದು ಶೈಲಿ ಇದೆ. ಆ ಶೈಲಿಯಲ್ಲೇ ನಾವು ಮಾಡುತ್ತೇವೆ. ಸಂಘದ ರೀತಿ ಅತ್ಯಂತ ಪ್ರಾಕೃತಿಕವಾಗಿದ್ದು. ಸಂಘದ ಗತಿ ನಿಧಾನ ಗತಿ. ನಿಧಾನವಾಗಿ ಹೋದರೆ ದೂರಸಾಗಬಹುದು. ನಿಮ್ಮ ಜೊತೆ ಇದ್ದೇವೆ. ನಿಮ್ಮ ಜೊತೆ ಇರುತ್ತೇವೆ. ನಾವು ದೊಡ್ಡವರು ಎಂಬ ಕಾರಣಕ್ಕಾಗಿ ಅಲ್ಲ. ಬದಲಾಗಿ ಇದು ನಮ್ಮ ಕರ್ತವ್ಯ, ಹಾಗಾಗಿ. ನೀವು ಸಂಘವನ್ನು ತಿಳಿದುಕೊಳ್ಳುವ ಪ್ರಯತ್ನವನ್ನು ಮಾಡಿ. ನಾವೆಲ್ಲರೂ ಹಿಂದು ಸಮಾಜದ ಅವಿಭಾಜ್ಯ ಅಂಗ ಎಂದು ಹೇಳಿದರು.

ರವಿ ಮಲ್ಲಾಪುರ ವಂದಿಸಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾ. ತಿಪ್ಪೇಸ್ವಾಮಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ಆರೆಸ್ಸೆಸ್‌ನ ಸಹಸರಕಾರ್ಯವಾಹರಾದ ಮುಕುಂದ, ಕ್ಷೇತ್ರೀಯ ಪ್ರಚಾರಕರಾದ ಸುಧೀರ, ಕ್ಷೇತ್ರೀಯ ಕಾರ್ಯವಾಹರಾದ ನಾ.ತಿಪ್ಪೇಸ್ವಾಮಿ, ಪಟ್ಟಾಭಿರಾಮ, ಗುರುಪ್ರಸಾದ, ನಂದೀಶ, ಸಾಮರಸ್ಯ ವೇದಿಕೆಯ ವಾದಿರಾಜ, ವಿ.ಹಿಂ.ಪರಿಷತ್‌ ನ ಬಸವರಾಜ ಸಂವಾದ ಸಭೆಯಲ್ಲಿದ್ದರು.

Published On - 6:09 pm, Tue, 12 July 22

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು