Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ರಣಭೀಕರ ಬರಗಾಲ: ಸರ್ಕಾರ ಇದುವರೆಗೂ ಗೋಶಾಲೆ ತೆರೆದಿಲ್ಲ, ರೈತರ ಆಕ್ರೋಶ

ಚಿತ್ರದುರ್ಗ ಜಿಲ್ಲೆಯಲ್ಲಿ ರಣಭೀಕರ ಬರಗಾಲವಿದೆ. ಜಾನುವಾರುಗಳು ಸಮರ್ಪಕ ನೀರು-ಮೇವು ಸಿಗದೆ ಮೂಕ ವೇದನೆಗೆ ಸಿಲುಕಿವೆ. ಆದ್ರೆ, ಬರಪೀಡಿತ ಜಿಲ್ಲೆ ಎಂದು ಘೋಷಿಸಿರುವ ಸರ್ಕಾರ ಈವರೆಗೆ ಗೋಶಾಲೆ ತೆರೆಯದೇ ಇರುವುದು ರೈತಾಪಿ ವರ್ಗದಲ್ಲಿ ಆಕ್ರೋಶ ಮೂಡಿಸಿದೆ.

ಚಿತ್ರದುರ್ಗದಲ್ಲಿ ರಣಭೀಕರ ಬರಗಾಲ: ಸರ್ಕಾರ ಇದುವರೆಗೂ ಗೋಶಾಲೆ ತೆರೆದಿಲ್ಲ, ರೈತರ ಆಕ್ರೋಶ
ಬರಗಾಲ - ಚಿತ್ರದುರ್ಗದಲ್ಲಿ ಸರ್ಕಾರ ಇದುವರೆಗೂ ಗೋಶಾಲೆ ತೆರೆದಿಲ್ಲ
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಸಾಧು ಶ್ರೀನಾಥ್​

Updated on: Nov 25, 2023 | 1:27 PM

ಕೋಟೆನಾಡು ಚಿತ್ರದುರ್ಗದಲ್ಲಿ (chitradurga) ರಣಭೀಕರ ಬರಗಾಲ ಆವರಿಸಿದೆ. ಜಾನುವಾರುಗಳಿಗೆ ನೀರು ಮೇವಿನ ಕೊರತೆ ಹೇಳ ತೀರದಾಗಿದೆ. ಜಾನುವಾರುಗಳ ( cattle) ಸಾವು -ನೋವಿಗೀಡಾಗುವ ಸಂದರ್ಭ ಎದುರಾಗಿದೆ. ಆದ್ರೂ, ಸಹ ಜಿಲ್ಲಾಡಳಿತ ಈವರೆಗೆ ಗೋಶಾಲೆ (goshala) ತೆರೆಯದೇ ಇರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ವರದಿ ಇಲ್ಲಿದೆ. ಸಮರ್ಪಕ ನೀರು-ಮೇವು ಸಿಗದ ಜಾನುವಾರುಗಳ ಮೂಕ ವೇದನೆ. ಬರ ಪೀಡಿತ ಜಿಲ್ಲೆ ಎಂದು ಘೋಷಿಸಿರುವ ಸರ್ಕಾರದಿಂದಲೇ ( karnataka government) ಗೋಶಾಲೆ ತೆರೆಯದೆ ನಿರ್ಲಕ್ಷ. ಕೂಡಲೇ ಗೋಶಾಲೆ ತೆರೆಯುವಂತೆ ರೈತರಿಂದ ಆಗ್ರಹ. ಈ ದೃಶ್ಯಗಳು ಕಂಡು ಬಂದಿದ್ದು ಕೋಟೆನಾಡು ಚಿತ್ರದುರ್ಗದಲ್ಲಿ.

ಹೌದು, ಚಿತ್ರದುರ್ಗ ಜಿಲ್ಲೆಯಲ್ಲಿ ರೈತಾಪಿ ವರ್ಗ ಕೃಷಿ ಕಾಯಕದ ಜತೆಗೆ ಜಾನುವಾರು ಸಾಕಣೆಯನ್ನೂ ಪ್ರಮುಖ ಕಸುಬಾಗಿಸಿಕೊಂಡಿದ್ದಾರೆ. ಆದ್ರೆ, ಈ ವರ್ಷ ರಣಭೀಕರ ಬರಗಾಲದ ಪರಿಣಾಮ ಒಂದು ಕಡೆ ಬೆಳೆ ನಾಶವಾಗಿದೆ. ಮತ್ತೊಂದು ಕಡೆ ಜಾನುವಾರು, ಕುರಿ-ಮೇಕೆಗೆ ಸಮರ್ಪಕ ನೀರು-ಮೇವು ಸಿಗದ ಪರಿಸ್ಥಿತಿ ನಿರ್ಮಾಣ ಆಗಿದೆ. ಸಾಂಪ್ರದಾಯಿಕ ದೇವರ ಎತ್ತುಗಳಿರುವ ಚಳ್ಳಕೆರೆ ಭಾಗದಲ್ಲಿನ ಖಾಸಗಿ ಗೋಶಾಲೆಗಳಲ್ಲೂ ಸಮಸ್ಯೆ ಎದುರಾಗಿದೆ. ಮೂಕ ಪ್ರಾಣಿಗಳು ನೀರು -ಮೇವಿಲ್ಲದೆ ಸಾವು-ನೋವಿಗೀಡಾಗುವಂತ ಪರಿಸ್ಥಿತಿ ನಿರ್ಮಾಣ ಆಗಿದೆ. ಆದ್ರೆ, ಸರ್ಕಾರ ಮಾತ್ರ ಬರ ಪೀಡಿತ ಜಿಲ್ಲೆ ಎಂದು ಮೂರ್ನಾಲ್ಕು ತಿಂಗಳ ಹಿಂದೆಯೇ ಘೋಷಿಸಿದೆಯಾದ್ರೂ ಗೋಶಾಲೆ ತೆರೆಯುವ ಕೆಲಸ ಮಾತ್ರ ಮಾಡಿಲ್ಲ. ಹೀಗೆ ನಿರ್ಲಕ್ಷ ಧೋರಣೆ ಮುಂದುವರೆದರೆ ರೈತರು ಉಗ್ರ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ರೈತ ಮುಖಂಡರು ಎಚ್ಚರಿಸಿದ್ದಾರೆ.

Also Read: ಮುಜರಾಯಿ ಇಲಾಖೆ ದೇವಸ್ಥಾನಗಳ ಗೋಶಾಲೆ ಗೋವುಗಳು ನರಕಯಾತನೆ ಅನುಭವಿಸುತ್ತಿವೆ, ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ!

ಇನ್ನು ಜಿಲ್ಲೆಯಲ್ಲಿ 2019ರ ಜಾನುವಾರು ಗಣತಿ ಪ್ರಕಾರ 3ಲಕ್ಷ 38ಸಾವಿರ 907 ದನ ಎಮ್ಮೆಗಳಿವೆ. 17ಲಕ್ಷ 37ಸಾವಿರ 145 ಕುರಿ ಮೇಕೆಗಳನ್ನು ಸಾಕಣೆ ಮಾಡಲಾಗಿದೆ. ಆದ್ರೆ, ಜಿಲ್ಲೆಯಲ್ಲಿ ಭೀಕರ ಬರಗಾಲ ಎದುರಾದ ಪರಿಣಾಮ ಜಾನುವಾರುಗಳು, ಕುರಿ-ಮೇಕೆಗೆ ನೀರು ಮೇವು ಸಮರ್ಪಕವಾಗಿ ಸಿಗದಂತಾಗಿದೆ. ಅನೇಕರು ಜಾನುವಾರು ಸಮೇತ ಗೂಳೆ ಹೋಗುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ, ಕೂಡಲೇ ಗೋಶಾಲೆ ತೆರೆಯುವಂತೆ ರೈತರು ಆಗ್ರಹಿಸಿದ್ದಾರೆ. ಈ ಬಗ್ಗೆ ಪಶುಸಂಗೋಪನಾ ಇಲಾಖೆ ಉಪನಿರ್ದೇಶಕರನ್ನು ಪ್ರಶ್ನಿಸಿದಾಗ ಈಗಾಗಲೇ ಜಿಲ್ಲಾಡಳಿತ ಹೋಬಳಿಗೊಂದರಂತೆ ಜಿಲ್ಲೆಯಲ್ಲಿ 22ಗೋಶಾಲೆ ತೆರೆಯಲು ಸಿದ್ಧತೆ ನಡೆಸಿದೆ. ಸುಮಾರು 28ಸಾವಿರ ಮೆಟ್ರಿಕ್ ಟನ್ ಮೇವು ಪೂರೈಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು 2ವಾರದೊಳಗೆ ಗೋಶಾಲೆಗಳನ್ನು ತೆರೆದು ನೀರು-ಮೇವು ಪೂರೈಸಲಾಗುವುದು ಎಂದು ಪಶು ಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ ಉಪ ನಿರ್ದೇಶಕ ಬಾಬುರತ್ನ್ ತಿಳಿಸಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ರಣಭೀಕರ ಬರಗಾಲ ಎದುರಾಗಿದೆ. ಜಾನುವಾರುಗಳು ಸಮರ್ಪಕ ನೀರು-ಮೇವು ಸಿಗದೆ ಮೂಕ ವೇದನೆಗೆ ಸಿಲುಕ ಪರಿಸ್ಥಿತಿ ನಿರ್ಮಾಣ ಆಗಿದೆ. ಆದ್ರೆ, ಬರಪೀಡಿತ ಜಿಲ್ಲೆ ಎಂದು ಘೋಷಿಸಿರುವ ಸರ್ಕಾರ ಈವರೆಗೆ ಗೋಶಾಲೆ ತೆರೆಯದೇ ಇರುವುದು ರೈತಾಪಿ ವರ್ಗದಲ್ಲಿ ಆಕ್ರೋಶ ಮೂಡಿಸಿದೆ. ಇನ್ನಾದ್ರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಶೀಘ್ರ ಗೋಶಾಲೆ ತೆರೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ