AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರಿಗಳಿಗೆ ಶೀಫ್ ಪಾಕ್ಸ್ ರೋಗ: ಕುರಿಗಾಹಿಗಳಿಂದ ಚಿತ್ರದುರ್ಗದಲ್ಲೊಂದು ವಿಚಿತ್ರ ಆಚರಣೆ

ದದ್ದು ರೋಗಕ್ಕೆ 'ಕುರಿ ಅಮ್ಮ ರೋಗ' ಎಂದು ಕುರಿಗಾಹಿಗಳು ಕರೆಯುತ್ತಾರೆ. ರೋಗ ನಿವಾರಣೆಗಾಗಿ ಮೃತ ಕುರಿ-ಮೇಕೆಯನ್ನು ಬೇವಿನ ಮರಕ್ಕೆ ತಲೆ ಕೆಳಗಾಗಿ ನೇತು ಹಾಕುವ ಆಚರಣೆ ಮಾಡಿಕೊಂಡು ಬರಲಾಗುತ್ತಿಲ್ಲ.

ಕುರಿಗಳಿಗೆ ಶೀಫ್ ಪಾಕ್ಸ್ ರೋಗ: ಕುರಿಗಾಹಿಗಳಿಂದ ಚಿತ್ರದುರ್ಗದಲ್ಲೊಂದು ವಿಚಿತ್ರ ಆಚರಣೆ
ಮೃತ ಕುರಿಯನ್ನು ಬೇವಿನ ಮರಕ್ಕೆ ತಲೆ ಕೆಳಗಾಗಿ ನೇತು ಹಾಕಿರುವುದು.
TV9 Web
| Edited By: |

Updated on:Dec 29, 2022 | 4:57 PM

Share

ಚಿತ್ರದುರ್ಗ: ಬುಡಕಟ್ಟು ಸಮುದಾಯದ ಜನರೇ ಹೆಚ್ಚಾಗಿರುವ ಕೋಟೆನಾಡಿನಲ್ಲಿ ಜಾನುವಾರು ಸಾಕಣೆಯೇ ಪ್ರಮುಖ ಕಸುಬಾಗಿದೆ. ಕುರಿ-ಮೇಕೆ, ಹಸು ಸಾಕಣೆ ಮೂಲಕವೇ ಅನೇಕರು ಬದುಕು ಕಟ್ಟಿಕೊಂಡಿದ್ದಾರೆ. ಇತ್ತೀಚೆಗೆ ಕುರಿಗಳಿಗೆ ದದ್ದುರೋಗ (Sheep fungus disease) (ಶೀಪ್ ಫಾಕ್ಸ್) ರೋಗ ಬಾಧಿಸುತ್ತಿದೆ. ಕೆಲವೆಡೆ ಕುರಿಗಳು ಸಾವಿಗೀಡಾಗುತ್ತಿದ್ದು ಕುರಿಗಾಹಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಮೊಳಕಾಲ್ಮೂರು ತಾಲೂಕಿನ ಕೋನಸಾಗರ ಗ್ರಾಮ ಸೇರಿ ವಿವಿಧೆಡೆ ಕುರಿಗಳು ಸಾವಿಗೀಡಾಗಿವೆ. ಒಂದು ವಾರದಿಂಸ ಕುರಿ-ಮೇಕೆಗಳ ಹಿಂಡುಗಳಲ್ಲಿ ರೋಗ ಕಾಣಿಸಿಕೊಂಡಿದೆ. ದದ್ದು ರೋಗಕ್ಕೆ ‘ಕುರಿ ಅಮ್ಮ ರೋಗ’ ಎಂದು ಕುರಿಗಾಹಿಗಳು ಕರೆಯುತ್ತಾರೆ. ರೋಗ ನಿವಾರಣೆಗಾಗಿ ಮೃತ ಕುರಿ-ಮೇಕೆಯನ್ನು ಬೇವಿನ ಮರಕ್ಕೆ ತಲೆ ಕೆಳಗಾಗಿ ನೇತು ಹಾಕುವ ಆಚರಣೆಯೊಂದನ್ನು ಕುರಿಗಾಹಿಗಳು ಈ ಹಿಂದಿನಿಂದ ಆಚರಿಸುತ್ತ ಬಂದಿದ್ದಾರೆ. ‘ಕುರಿ ಅಮ್ಮ ರೋಗ’ ಎಂದು ನಂಬಿರುವ ಕುರಿಗಾಹಿಗಳು ಚಿಕಿತ್ಸೆ ಕೊಡಿಸಲು ಹಿಂದೇಟು ಹಾಕುತ್ತಾರೆ. ಈ ಹಿಂದಿನಂತೆ ಬೇವಿನ ಮರಕ್ಕೆ ನೇತು ಹಾಕುವುದೇ ಪರಿಹಾರ ಎಂಬ ನಂಬಿಕೆಯಿಂದ ಪುರಾತನ ಆಚರಣೆಗೆ ಮೊರೆ ಹೋಗಿದ್ದಾರೆ.

ಕುರಿ-ಮೇಕೆಗಳಿಗೂ ರೋಗ ಹರಡುವ ಭೀತಿ

ಕಳೆದ ಒಂದು ವಾರದಿಂದ ಮೊಳಕಾಲ್ಮೂರು ಭಾಗದಲ್ಲಿ ಕುರಿ-ಮೇಕೆಗಳ ಹಿಂಡಿನಲ್ಲಿ ರೋಗ ಕಾಣಿಸಿಕೊಂಡಿದೆ. ಎಲ್ಲಾ ಕುರಿ-ಮೇಕೆಗಳಿಗೂ ರೋಗ ಹರಡುವ ಭೀತಿಗೊಳಗಾದ ಕುರಿಗಾಹಿಗಳು ಕೋನಸಾಗರ ಬಳಿ ಬೇವಿನ ಮರಕ್ಕೆ ಮೃತ ಮೇಕೆಯೊಂದನ್ನು ತಲೆ ಕೆಳಗಾಗಿ ನೇತು ಹಾಕಿದ್ದು ಕಂಡು ಬಂದಿದೆ. ದದ್ದು ರೋಗದ ಪರಿಣಾಮ ಕುರಿ-ಮೇಕೆಯ ದೇಹದ ಎಲ್ಲಾ ಭಾಗದಲ್ಲೂ ದದ್ದುಗಳು ಕಾಣಿಸಿಕೊಳ್ಳುತ್ತವೆ. ಜ್ವರ ಹೆಚ್ಚಾಗಿ ಕುರಿ-ಮೇಕೆಗಳು ಅಸುನೀಗುತ್ತವೆ. ಅಲ್ಲದೆ ಒಂದರಿಂದ ಒಂದಕ್ಕೆ ಈ ರೋಗ ಹರಡುವ ರೋಗ ಇದಾಗಿದೆ.

ಇದನ್ನೂ ಓದಿ: ಕನ್ನಡಿಯಲ್ಲಿ ಹಿಂಬದಿ ಚಕ್ರ ಸಡಿಲಗೊಂಡಿರುವುದನ್ನ ನೋಡಿದ KSRTC ಬಸ್ ಚಾಲಕ, ಮುಂದೇನು ಮಾಡಿದರು ನೋಡಿ!

ಮೌಢ್ಯ ಆಚರಣೆಯ ಮೊರೆ ಹೋಗಬಾರದು: ರೈತ ಶಂಕರಪ್ಪ

ಕುರಿಗಾಹಿಗಳು ಮತ್ತು ರೈತರು ಕುರಿ-ಮೇಕೆಗಳಿಗೆ ರೋಗ ಕಾಣಿಸಿಕೊಂಡಾಗ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು ಚಿಕಿತ್ಸೆ ಕೊಡಿಸಬೇಕು. ಮೌಢ್ಯ ಆಚರಣೆಯ ಮೊರೆ ಹೋಗಬಾರದು. ಕುರಿ-ಮೇಕೆಗಳನ್ನು ಮತ್ತಷ್ಟು ಬಲಿ ಕೊಟ್ಟಂತಾಗುತ್ತದೆ ಎಂದು ಪ್ರಗತಿಪರ ರೈತ ಶಂಕರಪ್ಪ ಹೇಳುತ್ತಾರೆ.

ಇದನ್ನೂ ಓದಿ: ದುರ್ಗದ ಕುರಿಗಾಹಿ ಬಾಲಕಿ ವಿಶ್ವ ಥ್ರೋಬಾಲ್ ಗೆದ್ದುಬಂದಳು, ಆದರೆ ಹೋಗುವ ಮುನ್ನ ಆರ್ಥಿಕ ನೆರವು ಕೇಳಿದರೆ ಸಿಎಂ ಬೊಮ್ಮಾಯಿ ಇಲ್ಲಾ ಅಂದರು!

ಶೀಪ್ ಪಾಕ್ಸ್ ರೋಗದ ಬಗ್ಗೆ ಜಾಗೃತಿ: ಡಾ‌.ರಂಗಸ್ವಾಮಿ 

ಕುರಿ-ಮೇಕೆಗಳಿಗೆ ಶೀಪ್ ಪಾಕ್ಸ್ ರೋಗ ಕಂಡು ಬಂದಾಗ ಇಲಾಖೆಯನ್ನು ಸಂಪರ್ಕಿಸಿದರೆ ಆಂಟಿಬಟಿಕ್ ಲಸಿಕೆ ನೀಡಲಾಗುತ್ತದೆ. ಇತರೆ ಕುರಿ-ಮೇಕೆಗೆ ಹರಡದಂತೆ ತಡೆಯಬಹುದಾಗಿದೆ. ಈ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ಪಶು ಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಡಾ‌.ರಂಗಸ್ವಾಮಿ ಹೇಳಿದ್ದಾರೆ.

ವರದಿ: ಬಸವರಾಜ ಮುದನೂರ್, ಟಿವಿ 9, ಚಿತ್ರದುರ್ಗ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:56 pm, Thu, 29 December 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್