AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವೇ ದೇಗುಲ ನಿರ್ಮಿಸಿಕೊಳ್ಳಿ, ನೀವೇ ಪೂಜಾರಿಗಳಾಗಿ: ಶೋಷಿತ ಸಮುದಾಯದಕ್ಕೆ ಸಿದ್ದರಾಮಯ್ಯ ಕರೆ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ನಡೆದ ಉಪ್ಪಾರ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗರ್ಭಗುಡಿಗೆ ಶ್ರೀಗಳಿಗೆ ನಿರ್ಬಂಧ ವಿಚಾರ ತಿಳಿದು ಬೇಸರವಾಯಿತು. ಶೋಷಿತ ಸಮುದಾಯದ ಜನರು ನೀವೇ ದೇಗುಲ ನಿರ್ಮಿಸಿಕೊಳ್ಳಿ. ನೀವೇ ದೇವಸ್ಥಾನಗಳಲ್ಲಿ ಪೂಜಾರಿಗಳಾಗಿ ಎಂದು ಕರೆ ನೀಡಿದ್ದಾರೆ. ದಾರ್ಶನಿಕರು ಜಾಗೃತಿ ಮೂಡಿಸಿದಾಗ ಜಾತಿ ವ್ಯವಸ್ಥೆ ತಿಳಿಯಾಗಿದೆ. ಬಳಿಕ ಮತ್ತೆ ಜಾತಿ ವ್ಯವಸ್ಥೆ ಗಟ್ಟಿ ಆಗುತ್ತಲೇ ಸಾಗಿದೆ ಎಂದು ಜಾತಿ ವ್ಯವಸ್ಥೆ ಬಗ್ಗೆ ಪಾಠ ಮಾಡಿದ್ದಾರೆ. 

ನೀವೇ ದೇಗುಲ ನಿರ್ಮಿಸಿಕೊಳ್ಳಿ, ನೀವೇ ಪೂಜಾರಿಗಳಾಗಿ: ಶೋಷಿತ ಸಮುದಾಯದಕ್ಕೆ ಸಿದ್ದರಾಮಯ್ಯ ಕರೆ
ಸಿಎಂ ಸಿದ್ದರಾಮಯ್ಯ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Feb 09, 2024 | 3:30 PM

Share

ಚಿತ್ರದುರ್ಗ, ಫೆಬ್ರವರಿ 9: ಗರ್ಭಗುಡಿಗೆ ಶ್ರೀಗಳಿಗೆ ನಿರ್ಬಂಧ ವಿಚಾರ ತಿಳಿದು ಬೇಸರವಾಯಿತು. ಶೋಷಿತ ಸಮುದಾಯದ ಜನರು ನೀವೇ ದೇಗುಲ ನಿರ್ಮಿಸಿಕೊಳ್ಳಿ. ನೀವೇ ದೇವಸ್ಥಾನಗಳಲ್ಲಿ ಪೂಜಾರಿಗಳಾಗಿ ಎಂದು  ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ನಡೆದ ಉಪ್ಪಾರ ಸಮಾವೇಶದಲ್ಲಿ  ಚನ್ನಕೇಶವ ದೇವಸ್ಥಾನದಲ್ಲಿ ಕುರುಬ ಸ್ವಾಮೀಜಿಗೆ ನಿರ್ಬಂಧ ವಿಚಾರವಾಗಿ ಮಾತನಾಡಿದ ಅವರು, ಪಟ್ಟಭದ್ರರಿಂದ ಎಚ್ಚರವಾಗಿರಿ, ಬಿಕೇರ್ ಫುಲ್. ಶಿಕ್ಷಣದಿಂದ ವಂಚಿತರನ್ನಾಗಿಸುವ ಕೆಲಸ ಹಿಂದಿನಿಂದಲೂ ನಡೆದಿದೆ. ಮೊದಲು ಶಿಕ್ಷಿತರಾಗಿ ಬಳಿಕ ಸಾಮಾಜಿಕ, ಆರ್ಥಿಕವಾಗಿ ಸಬಲರಾಗಿರಿ. ನಾನು ಚಿಕ್ಕಂದಿನಲ್ಲಿ ಬಾವಿ ನೀರು ತರಲು ಹೋಗುತ್ತಿದ್ದೆನು. ಕಸ ತಿಳಿಗೊಳಿಸಿ ಕೊಡದಲ್ಲಿ ನೀರು ತುಂಬಿಕೊಳ್ಳುತ್ತಿದ್ದೆನು. ಬಳಿಕ ಮತ್ತೆ ನೀರ ಮೇಲೆ‌ ಕಸ‌ ಮುಚ್ಚಿಕೊಳ್ಳುತ್ತಿತ್ತು. ದಾರ್ಶನಿಕರು ಜಾಗೃತಿ ಮೂಡಿಸಿದಾಗ ಜಾತಿ ವ್ಯವಸ್ಥೆ ತಿಳಿಯಾಗಿದೆ. ಬಳಿಕ ಮತ್ತೆ ಜಾತಿ ವ್ಯವಸ್ಥೆ ಗಟ್ಟಿ ಆಗುತ್ತಲೇ ಸಾಗಿದೆ ಎಂದು ಜಾತಿ ವ್ಯವಸ್ಥೆ ಬಗ್ಗೆ ಪಾಠ ಮಾಡಿದ್ದಾರೆ.

ಪ್ರತಿಭೆ ಯಾರ ಸ್ವತ್ತಲ್ಲ, ಜಾತಿಯಿಂದ ಬರುವಂಥದಲ್ಲ. ಮಹಾನ್ ವಿದ್ವಾಂಸ ಅಂಬೇಡ್ಕರ್ ಯಾವ ಜಾತಿಯಲ್ಲಿ ಹುಟ್ಟಿದವರು? ಭಗೀರಥ ಮಹರ್ಷಿ ಶಿವನಿಗೆ ಒಲಿಸಿ ನೀರು ತರಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಗ್ಯಾರಂಟಿ ಬಗ್ಗೆ ಟೀಕೆ ಮಾಡ್ತಾರೆ

ಜನಪರ ಯೋಜನೆಗಳನ್ನ ಮಾಡದವರು ಗ್ಯಾರಂಟಿ ಟೀಕಿಸುತ್ತಾರೆ. ಗ್ಯಾರಂಟಿ ಬಗ್ಗೆ ಬಿಜೆಪಿಯವರು ಟೀಕೆ ಮಾಡ್ತಾರೆ, ಹೀಯಾಳಿಸುತ್ತಾರೆ. ಗ್ಯಾರಂಟಿ ಯೋಜನೆಗಳನ್ನ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ. ನಾವೆಲ್ಲಾ ಶ್ರೀರಾಮನ ಭಕ್ತರಲ್ಲವೇ, ರಾಮಾಯಣ ಓದಿಲ್ಲವೇ. ಪಿತೃ ವಾಕ್ಯ ಪರಿಪಾಲನೆ, ರಾಮರಾಜ್ಯ ನಿರ್ಮಿಸಿದ್ದಕ್ಕೆ ಶ್ರೀರಾಮನ ಪೂಜಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಡಿಕೆ ಸುರೇಶ್​ಗೆ ಗುಂಡಿಕ್ಕಬೇಕು; ಕಾನೂನು ಮೀರಿ ನಡೆಯುವವರಿಗೆ ಖಡಕ್​ ಎಚ್ಚರಿಕೆ ಕೊಟ್ಟ ಗೃಹ ಸಚಿವ

ಭಗೀರಥ ಪೀಠಕ್ಕೆ ಜಮೀನು ಮಂಜೂರಾತಿ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಉಪ್ಪಾರ ಸಮಾಜಕ್ಕೆ ಮೀಸಲಾತಿ ಬಗ್ಗೆ ಕೇಂದ್ರಕ್ಕೆ ಶಿಫಾರಸು ಭರವಸೆ ನೀಡಿದ್ದಾರೆ. ಇನ್ನು ಎಸ್ಟಿ ಮೀಸಲಾತಿಗೆ ಉಪ್ಪಾರ ಸಮಾಜ ಮನವಿ ಮಾಡಿದೆ. ಕುರಿ ಕಾಯುವನ ಮಗ ಸಿಎಂ ಆಗಿದ್ದನ್ನು ಕೆಲವರು ಸಹಿಸಲ್ಲ. ನಿಮ್ಮ ಆಶೀರ್ವಾದ ನನ್ನ ಮೇಲೆ ಸರ್ಕಾರದ ಮೇಲೆ ಇರಲಿ ಎಂದಿದ್ದಾರೆ.

ಇದನ್ನೂ ಓದಿ: ಜನರ ವಿರೋಧ ಅರಿತು ಧ್ವಜ ಪ್ರಕರಣದಿಂದ ಹಿಂದೆ ಸರಿದ ಬಿಜೆಪಿ, ಜೆಡಿಎಸ್; ಚೆಲುವರಾಯಸ್ವಾಮಿ

ನನ್ನ ತಂದೆ ಪ್ರತಿಯೊಂದಕ್ಕೂ ಶಾನುಭೋಗರ ಬಳಿ ಕೇಳುತ್ತಿದ್ದರು. ಕಾನೂನು ಪದವಿ ಅಭ್ಯಾಸಕ್ಕೆಂದು ಕೇಳಿದಾಗ ಬೇಡ ಅಂದಿದ್ದರು. ನಾನು ಊರ ಪಂಚಾಯಿತಿ ಸೇರಿಸಿ ಕಾನೂನು ಪದವಿ ಓದಿದೆ. ಕಾನೂನು ಪದವಿ ಓದಿದ್ದಕ್ಕೆ ನಾನು ಈಗ ಮುಖ್ಯಮಂತ್ರಿ ಆಗಿದ್ದೇನೆ. ಅವಕಾಶ ಸಿಕ್ಕರೆ ಎಲ್ಲವೂ ಸಾಧ್ಯ. ಮಾತಿನ ಮಧ್ಯೆ ಸಚಿವ ಡಿ. ಸುಧಾಕರ್​ಗೆ ನೀನು ಮೇಲ್ಜಾತಿಯವನು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ