AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chitradurga: ಹಣದ ವಿಚಾರವಾಗಿ ಸ್ವಂತ ತಮ್ಮನನ್ನೇ ಕೊಂದ ಅಕ್ಕ ಭಾವ

ಹಣದ ವಿಚಾರವಾಗಿ ಸಂಬಂಧವನ್ನೇ ಮರೆತು ಸ್ವಂತ ತಮ್ಮನನ್ನೇ ಅಕ್ಕ ಮತ್ತು ಭಾವ ಸೇರಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಕೋಟೆನಾಡಿನಲ್ಲಿ ನಡೆದಿದೆ.

Chitradurga: ಹಣದ ವಿಚಾರವಾಗಿ ಸ್ವಂತ ತಮ್ಮನನ್ನೇ ಕೊಂದ ಅಕ್ಕ ಭಾವ
ಕೊಲೆ ಆರೋಪಿಗಳಾದ ರಾಧಮ್ಮ, ತಿಮ್ಮರಾಜು
TV9 Web
| Edited By: |

Updated on: Jan 20, 2023 | 10:43 PM

Share

ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಶಿವಗಂಗಾ ಗ್ರಾಮದ ಬಸವರಾಜ್ (33) ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿದ್ದು, ಇತನನ್ನ ಜನವರಿ 13ರ ರಾತ್ರಿ ಸ್ವತಃ ಆತನ ಅಕ್ಕ ಮತ್ತು ಭಾವ ಸೇರಿ ಕೊಲೆ ಮಾಡಿದ್ದಾರೆ. ಗ್ರಾಮದಲ್ಲಿಯೇ ಫೋಟೋ ಸ್ಟುಡಿಯೋ ನಡೆಸಿಕೊಂಡಿದ್ದ ಬಸವರಾಜ್ ತನ್ನ ಪತ್ನಿ ಹೆರಿಗೆಗೆಂದು ತವರು ಮನೆಗೆ ತೆರಳಿದ್ದನು. ಈ ಸಂದರ್ಭದಲ್ಲಿ ಹಿರಿಯೂರಿನ ಪಿಲಾಲಿ ಗ್ರಾಮದಲ್ಲಿದ್ದ ತನ್ನ ಅಕ್ಕ ರಾಧಾಮ್ಮ ಮತ್ತು ಮಕ್ಕಳನ್ನು ಕರೆಸಿಕೊಂಡಿದ್ದನು. ಆದರೆ ಎರಡು ವರ್ಷ ಕಳೆದರೂ ಅಕ್ಕ ರಾಧಮ್ಮಳನ್ನ ಪತಿಯ ಊರಿಗೆ ಕಳಿಸಿರಲಿಲ್ಲ. ಪತಿ ತಿಮ್ಮರಾಜು ತನ್ನ ಪತ್ನಿಯನ್ನು ಊರಿಗೆ ಕಳುಹಿಸು ಎಂದು ಕೇಳಿದಾಗ ಬಸವರಾಜ್ ಗಲಾಟೆ ಮಾಡಿದ್ದನು. ಈ ಹಿಂದೆ ಪಡೆದಿದ್ದ ಹಣ ಮತ್ತು ನಿನ್ನ ಪತ್ನಿ ಮತ್ತು ಮಕ್ಕಳನ್ನು ಎರಡು ವರ್ಷದಿಂದ ಮನೆಯಲ್ಲಿಟ್ಟುಕೊಂಡು ನೋಡಿದ ಖರ್ಚು ಸೇರಿ 5ಲಕ್ಷ ರೂಪಾಯಿ ಕೊಟ್ಟು ಕರೆದುಕೊಂಡು ಹೋಗು ಎಂದಿದ್ದನು.

ಅದರಂತೆಯೇ ಹಣ ಕೊಡದಿದ್ದರೆ ಹತ್ಯೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದನಂತೆ. ಹೀಗಾಗಿ ರಾಧಮ್ಮ ಮತ್ತು ಪತಿ ತಿಮ್ಮರಾಜು ಸೇರಿ ಬಸವರಾಜನನ್ನು ಮುಗಿಸಲು ಸ್ಕೆಚ್ ಹಾಕಿದ್ದಾರೆ. ಜ.13ರ ರಾತ್ರಿ ಎಂದಿನಂತೆ ಮನೆಗೆ ಬಂದು ಬೆಡ್​ರೂಮಿನಲ್ಲಿ ಮಲಗಿದ್ದ ಬಸವರಾಜ್​ನ ರೂಮಿಗೆ ಮದ್ಯ ರಾತ್ರಿ ವೇಳೆ ತೆರಳಿ ಮಾರಕಾಸ್ತ್ರದಿಂದ ಮನಸೋ ಇಚ್ಛೆ ಇರಿದು ಹತ್ಯೆ ಮಾಡಿ ಎಸ್ಕೇಪ್ ಆಗಿದ್ದರು. ಇನ್ನು ಭೀಕರವಾಗಿ ಹತ್ಯೆ ಮಾಡಿದ್ದನ್ನ ಕಂಡು ಗ್ರಾಮದ ಜನರು, ಮೃತನ ಸಂಬಂಧಿಕರು ಬೆಚ್ಚಿಬಿದ್ದಿದ್ದರು. ಪೊಲೀಸ್ ತನಿಖೆಯಿಂದ ಖುದ್ದು ಅಕ್ಕ ಮತ್ತು ಭಾವನೇ ಕೊಲೆಗಾರರು ಎಂಬ ಅಂಶ ಬಯಲಾಗಿದ್ದು ಮತ್ತಷ್ಟು ಶಾಕ್ ನೀಡಿದೆ. ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಲಿ ಎಂದು ಮೃತನ ಸಂಬಂಧಿಕರು ಆಗ್ರಹಿಸಿದ್ದು ಇದೀಗ ಇಬ್ಬರೂ ಆರೋಪಿಗಳನ್ನ ಸದ್ಯ ಪೊಲೀಸರು ಬಂಧಿಸಿ ಜೈಲಿಗೆ ಕಳಿಸಿದ್ದಾರೆ.

ಇದನ್ನೂ ಓದಿ:ಬಿಸಿ ನೀರಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ: ಇಬ್ಬರು ಆರೋಪಿಗಳ ಬಂಧನ

ಒಟ್ಟಾರೆಯಾಗಿ ಹಣದ ವ್ಯವಹಾರ ಎಂಬುದು ಕರಳು ಬಳ್ಳಿ ಎಂಬ ಬಂಧನವನ್ನು ಸಹ ಮರೆಸಿದೆ. ಅಕ್ಕ-ಭಾವನಿಗೆ ನೀಡಿದ ಹಣ ಎಂಬುದನ್ನೂ ಮರೆತು ಬಸವರಾಜ್ ಆವಾಜ್ ಹಾಕಿ ಹಣ ಕೇಳಿದ್ದಾನೆ. ಕೊಲೆ ಬೆದರಿಕೆಯನ್ನೂ ಹಾಕಿದ್ದನಂತೆ. ಆದರೆ ಅಕ್ಕ ಮತ್ತು ಭಾವ ಮಾತ್ರ ಹಣ ಕೇಳಿದವನನ್ನೆ ಹೆಣವನ್ನಾಗಿಸಿ ಅಕ್ಕ-ತಮ್ಮ, ಅಳಿಯ-ಭಾವ ಎಂಬ ಸಂಬಂಧಕ್ಕೆ ಬೆಲೆ ಇಲ್ಲದಂತೆ ಮಾಡಿದ್ದು ಮಾತ್ರ ವಿಪರ್ಯಾಸವೇ ಸರಿ.

ವರದಿ: ಬಸವರಾಜ ಮುದನೂರ್ ಟಿವಿ9 ಚಿತ್ರದುರ್ಗ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​