AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರುಘಾಮಠದಿಂದ ಬಸವರಾಜನ್‌ಗೆ ಗೇಟ್‌ಪಾಸ್‌, ನ್ಯಾ. ವಸ್ತ್ರದ್‌ಮಠ್‌ ನೇಮಕಕ್ಕೆ ನಿರ್ಧಾರ

ಎಸ್.ಕೆ.ಬಸವರಾಜನ್ ಇದುವರೆಗಿನ ಕಾರ್ಯದರ್ಶಿಯಾಗಿದ್ದರು. ಬಸವರಾಜನ್‌ ಸ್ಥಾನಕ್ಕೆ ಎಸ್.ಬಿ.ವಸ್ತ್ರದ್‌ಮಠ್‌ ನೇಮಕಕ್ಕೆ ಇದೀಗ ವೇದಿಕೆ ಸಿದ್ಧವಾಗಿದೆ.

ಮುರುಘಾಮಠದಿಂದ ಬಸವರಾಜನ್‌ಗೆ ಗೇಟ್‌ಪಾಸ್‌, ನ್ಯಾ. ವಸ್ತ್ರದ್‌ಮಠ್‌ ನೇಮಕಕ್ಕೆ ನಿರ್ಧಾರ
ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Sep 01, 2022 | 4:24 PM

ಚಿತ್ರದುರ್ಗ: ಲೈಂಗಿಕ ಪ್ರಕರಣಗಳ ಚಟುವಟಿಕೆ ಬೆನ್ನಲ್ಲೇ ಮುರುಘಾಶ್ರೀಗಳು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ. ಮುರುಘಾಮಠದಿಂದ (Sri Murugha Matha) ಎಸ್.ಕೆ. ಬಸವರಾಜನ್‌ಗೆ (SK Basavaraj) ಗೇಟ್‌ಪಾಸ್‌ ನೀಡಲು ನಿರ್ಧರಿಸಲಾಗಿದ್ದು, ಮುರುಘಾಮಠದ ಎಸ್.ಜೆ.ಎಂ. ವಿದ್ಯಾಪೀಠ ಸೇವೆಯಿಂದ ಅವರನ್ನು ಮುಕ್ತಗೊಳಿಸಲಾಗಿದೆ. ಅವರ ಜಾಗದಲ್ಲಿ ಎಸ್.ಜೆ.ಎಂ. ವಿದ್ಯಾಪೀಠದದ ಕಾರ್ಯದರ್ಶಿಯನ್ನಾಗಿ ನಿವೃತ್ತ ನ್ಯಾಯಾಧೀಶ ಎಸ್.ಬಿ. ವಸ್ತ್ರದ್‌ಮಠ್‌ (retired judge SB Vastrad) ನೇಮಕಕ್ಕೆ ನಿರ್ಧಾರ ಮಾಡಲಾಗಿದೆ. ಎಸ್.ಕೆ.ಬಸವರಾಜನ್ ಇದುವರೆಗಿನ ಕಾರ್ಯದರ್ಶಿಯಾಗಿದ್ದರು. ಬಸವರಾಜನ್‌ ಸ್ಥಾನಕ್ಕೆ ಎಸ್.ಬಿ.ವಸ್ತ್ರದ್‌ಮಠ್‌ ನೇಮಕಕ್ಕೆ ಇದೀಗ ವೇದಿಕೆ ಸಿದ್ಧವಾಗಿದೆ.

ಪೋಕ್ಸೋ ಪ್ರಕರಣದ 2ನೇ ಆರೋಪಿ ವಿಚಾರಣೆ:

ಮುರುಘಾಶ್ರೀಗಳ ವಿರುದ್ಧ ಎ1 ಆರೋಪಿಯಾಗಿ ದಾಖಲಾಗಿರುವ ಪ್ರಕರಣದಲ್ಲಿ ಲೇಡಿ ವಾರ್ಡನ್ ವಿಚಾರಣೆ ನಡೆದಿದೆ. ವಿಚಾರಣೆ ಕುರಿತಾಗಿ ಚಿತ್ರದುರ್ಗ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಮಾತನಾಡಿದ್ದು, ಪೋಕ್ಸೋ ಕೇಸ್‌ನಲ್ಲಿ ಎರಡನೇ ಆರೋಪಿಯಾಗಿರುವ ಲೇಡಿ ವಾರ್ಡನ್ ವಿಚಾರಣೆ ನಡೆಸಿದ್ದೇವೆ. ವಿಚಾರಣೆಗೆ ಅಗತ್ಯವಿದ್ದಲ್ಲಿ ಎಲ್ಲಾ ಆರೋಪಿಗಳನ್ನೂ ವಿಚಾರಣೆ ಮಾಡಲಾಗುವುದು ಎಂದು ಎಸ್ಪಿ ಪರಶುರಾಮ್ ಮಾಹಿತಿ ನೀಡಿದ್ದಾರೆ.

ಮುರುಘಾಮಠದ ಎಸ್.ಕೆ. ಬಸವರಾಜನ್​ಗೂ ಬಂಧನದ ಭೀತಿ

ಮುರುಘಾಮಠದ ಲೈಂಗಿಕ ಪ್ರಕರಣಗಳ ಹಿನ್ನೆಲೆಯಲ್ಲಿ ಮುರುಘಾಮಠದ ಎಸ್.ಕೆ. ಬಸವರಾಜನ್​ಗೂ ಬಂಧನದ ಭೀತಿ ಎದುರಾಗಿದೆ. ಹಾಗಾಗಿ ಜಾಮೀನು ಕೋರಿ ಎಸ್.ಕೆ. ಬಸವರಾಜನ್ ಪರ ವಕೀಲರು ಚಿತ್ರದುರ್ಗ ಜಿಲ್ಲಾ 1ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಹಾಸ್ಟೆಲ್ ಲೇಡಿ ವಾರ್ಡನ್ ಪ್ರಕರಣದಲ್ಲಿ ಬಸವರಾಜನ್​ಗೆ ಸಂಕಷ್ಟ ಎದುರಾಗಿದೆ. ಮುರುಘಾಮಠದ ಆಡಳಿತಾಧಿಕಾರಿಯಾಗಿ ಎಸ್.ಕೆ.ಬಸವರಾಜನ್ ಅವರ ವಿರುದ್ಧ ಬಲಾತ್ಕಾರ ಯತ್ನ, ಬೆದರಿಕೆ ಆರೋಪ ಕೇಳಿಬಂದಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಜಿ ಶಾಸಕರೂ ಆದ ಬಸವರಾಜನ್​ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ ಕೇಳಿಬಂದಿದ್ದು, ಕೋರ್ಟ್​ಗೆ ನ್ಯಾಯಾಧೀಶರು ಆಗಮಿಸುತ್ತಿದ್ದಂತೆ ನ್ಯಾಯಾಧೀಶರ ಎದುರು ಸಿಆರ್​ಪಿಸಿ 164 ಅಡಿ ಸಂತ್ರಸ್ತೆ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ. ಸಂತ್ರಸ್ತೆ ಪೊಲೀಸ್ ಬಿಗಿ ಭದ್ರತೆಯಲ್ಲಿ ಕೋರ್ಟ್​ಗೆ ಹಾಜರಾಗಿದ್ದಾರೆ.

ಮಾಜಿ ಶಾಸಕ ಎಸ್.ಕೆ.ಬಸವರಾಜನ್ ದಂಪತಿಗೆ ಜಾಮೀನು

ಮಾಜಿ ಶಾಸಕ ಎಸ್.ಕೆ.ಬಸವರಾಜನ್ ದಂಪತಿಗೆ ಜಾಮೀನು ದೊರೆತಿದೆ. ಎಸ್.ಕೆ.ಬಸವರಾಜನ್​ ವಿರುದ್ಧ ಅತ್ಯಾಚಾರ ಆರೋಪದಡಿ ದೂರು ದಾಖಲಾಗಿತ್ತು. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಹಾಸ್ಟೆಲ್​ ಮಹಿಳಾ ವಾರ್ಡನ್​ ದೂರು ದಾಖಲಿಸಿದ್ದರು.

Published On - 3:41 pm, Thu, 1 September 22

ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ