AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿಗೆ ಹಾವು ಕಡಿತ: ಬಾಯಿಂದ ವಿಷ ತೆಗೆಯಲು ಯತ್ನಿಸಿದ ಶಿಕ್ಷಕ ಆಸ್ಪತ್ರೆಗೆ ದಾಖಲು

ಚಿತ್ರದುರ್ಗದಲ್ಲಿ 6 ವರ್ಷದ ವಿದ್ಯಾರ್ಥಿನಿಗೆ ನಾಗರಹಾವು ಕಡಿತದಿಂದ ಸ್ಥಿತಿ ಗಂಭೀರವಾಗಿರುವಂತಹ ಘಟನೆ ನಡೆದಿದೆ. ಇನ್ನು ಈ ವೇಳೆ ಶಾಲಾ ಶಿಕ್ಷಕ ಬಾಯಿಂದ ವಿಷ ತೆಗೆಯಲು ಯತ್ನಿಸಿದ್ದು, ಅವರು ಕೂಡ ಅಸ್ವಸ್ಥಗೊಂಡಿದ್ದಾರೆ. ಸದ್ಯ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಡ್ಯ ಮತ್ತು ಕೊಡಗು ಜಿಲ್ಲೆಗಳಲ್ಲಿ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ವಿದ್ಯಾರ್ಥಿನಿಗೆ ಹಾವು ಕಡಿತ: ಬಾಯಿಂದ ವಿಷ ತೆಗೆಯಲು ಯತ್ನಿಸಿದ ಶಿಕ್ಷಕ ಆಸ್ಪತ್ರೆಗೆ ದಾಖಲು
ಹಾವು (ಸಂಗ್ರಹ ಚಿತ್ರ) Image Credit source: google
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Mar 14, 2026 | 5:07 PM

Share

ಚಿತ್ರದುರ್ಗ, ಮಾರ್ಚ್​ 14: ನಾಗರಹಾವು ಕಡಿತಕ್ಕೊಳಗಾಗಿ (Snake bite) ಒಂದನೇ ತರಗತಿಯ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಚಿತ್ರದುರ್ಗ ತಾಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿ ನಡೆದಿದೆ. ಸೃಷ್ಟಿ(6) ನಾಗರಹಾವು ಕಡಿತಕ್ಕೊಳಗಾದ ವಿದ್ಯಾರ್ಥಿನಿ. ಶಾಲಾ ಆವರಣದಲ್ಲಿ ಕುಳಿತಿದ್ದಾಗ ನಾಗರಹಾವು ಕಡಿದಿದೆ. ಈ ವೇಳೆ ಶಾಲಾ ಶಿಕ್ಷಕ ರವಿಶಂಕರ್ ಬಾಯಿಂದ ವಿಷ ತೆಗೆಯಲು ಯತ್ನಿಸಿದ್ದಾರೆ. ಸದ್ಯ ಅಸ್ವಸ್ಥಗೊಂಡ ಸೃಷ್ಠಿಯನ್ನು ಖಾಸಗಿ ಆಸ್ಪತ್ರೆಗೆ ಮತ್ತು ರವಿಶಂಕರ್​​ರನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕೆರೆಯಲ್ಲಿ ಈಜಲು ಹೋಗಿ ಓರ್ವ ವಿದ್ಯಾರ್ಥಿ ಸಾವು: ಮತ್ತೊಬ್ಬನ ರಕ್ಷಣೆ

ಮಂಡ್ಯದ ಮಳವಳ್ಳಿ ಪಟ್ಟಣದ ದೊಡ್ಡಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳ ಪೈಕಿ ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬ ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ನಡೆದಿದೆ. ಕೇಶವ(11) ಸಾವು, ಹೇಮಂತ್​(12) ರಕ್ಷಣೆಗೊಳಗಾದ ವಿದ್ಯಾರ್ಥಿ.

ಇದನ್ನೂ ಓದಿ: ಬಾಗಲಕೋಟೆ ದಲಿತ ಯುವಕನ ಹತ್ಯೆಗೆ ಬಿಗ್ ಟ್ವಿಸ್ಟ್: ಅನುಮಾನಪಟ್ಟು ಹೊಡೆದು ಕೊಂದ್ರಾ?

ಕೇಶವ ಮತ್ತು ಹೇಮಂತ್​ ಮಳವಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದರು. ಪರೀಕ್ಷೆ ಮುಗಿಸಿ ಕೆರೆಗೆ ಈಜಲು ಹೋಗಿದ್ದಾಗ ಅವಘಡ ಸಂಭವಿಸಿದೆ. ಮಳವಳ್ಳಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹೇರೂರು ಬಳಿ ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಬೆಂಗಳೂರು ಮೂಲದ ವಿದ್ಯಾರ್ಥಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ವಿದ್ಯಾರ್ಥಿಗಳ ತಂಡ ಬೆಂಗಳೂರಿನಿಂದ‌ ಪ್ರವಾಸ‌ಕ್ಕೆ ಬಂದಿದ್ದರು. ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸುದರ್ಶನ್(22) ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬೈಕ್ ನಿಯಂತ್ರಣ ತಪ್ಪಿ ಬಿದ್ದು ಯುವಕ ಸಾವು

ಬೈಕ್​ ನಿಯಂತ್ರಣ ತಪ್ಪಿ ಬಿದ್ದು ಯುವಕ ಸಾವನ್ನಪ್ಪಿರುವಂತಹ ಘಟನೆ ದಾವಣಗೆರೆ ಹೊರವಲಯದ ಇಂಡಸ್ಟ್ರಿಯಲ್ ಏರಿಯಾ ಬಳಿ ನಡೆದಿದೆ. ಹೊಸಹಳ್ಳಿ ಗ್ರಾಮದ ಮಲ್ಲಿಕಾರ್ಜುನ (21) ಮೃತ ದುರ್ದೈವಿ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ ಆಗಿದೆ. ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ವೈಯರ್‌ನಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿ ಆತ್ಮಹತ್ಯೆ ಎಂದು ನಾಟಕವಾಡಿದ್ದ ಪ್ರಿಯಕರ!

ತನ್ನ ಅಜ್ಜಿಯನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿಕೊಂಡು ಬೈಕ್​​ನಲ್ಲಿ ತನ್ನ ಊರು ಹೊಸಹಳ್ಳಿ ಗ್ರಾಮಕ್ಕೆ ತೆರಳುವಾಗ ಘಟನೆ ಸಂಭವಿಸಿದೆ. ಬೈಕ್ ಅಡ್ಡ ಬಂದ ವೇಳೆ ಬ್ರೇಕ್ ಹಾಕಿದ್ದಕ್ಕೆ ನಿಯಂತ್ರಣ ತಪ್ಪಿ ಅಪಘಾತ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ