AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಠದ ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಚಿತ್ರದುರ್ಗ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಹೇಳಿದ್ದೇನು?

ಜು.24ರಂದು ಬಾಲಕಿಯರಿಬ್ಬರು ಚಿತ್ರದುರ್ಗದಿಂದ ಬೆಂಗಳೂರಿಗೆ ಬಂದಿದ್ದರು. ಅಂದು ರಾತ್ರಿ 11.30ರ ಸುಮಾರಿಗೆ ಮೆಜೆಸ್ಟಿಕ್ಗೆ ಬಂದಿಳಿದಿದ್ರು. ಆಟೋ ಡ್ರೈವರ್ ವಿದ್ಯಾರ್ಥಿನಿಯರನ್ನು ಲಗ್ಗೆರೆಗೆ ಕರೆದೊಯ್ದಿದ್ದ. ಮನೆಗೆ ಬಿಟ್ಟುಕೊಳ್ಳದೆ ಬಾಲಕಿ ದೊಡ್ಡಮ್ಮ ಹೊರಗೆ ಹಾಕಿದ್ದರು.

ಮಠದ ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಚಿತ್ರದುರ್ಗ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಹೇಳಿದ್ದೇನು?
ಚಿತ್ರದುರ್ಗ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್
TV9 Web
| Updated By: ಆಯೇಷಾ ಬಾನು|

Updated on:Aug 27, 2022 | 5:07 PM

Share

ಚಿತ್ರದುರ್ಗ: ಮಠದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣ ಸಂಬಂಧ ಹಾಸ್ಟೆಲ್ ವಾರ್ಡನ್ ದೂರು ನೀಡಿದ ಬಗ್ಗೆ ಮಾಹಿತಿ ನೀಡಿದ್ದಾರೆ. ಮಾಜಿ ಶಾಸಕ ಎಸ್.ಕೆ.ಬಸವರಾಜನ್, ಪತ್ನಿ ಸೌಭಾಗ್ಯ ವಿರುದ್ಧ ಹಾಸ್ಟೆಲ್ ವಾರ್ಡನ್ ದೂರು ನೀಡಿದ್ದಾರೆ.

ಜು.24ರಂದು ಬಾಲಕಿಯರಿಬ್ಬರನ್ನ ಹಾಸ್ಟೆಲ್ನಿಂದ ಹೊರಕಳಿಸಲಾಗಿತ್ತು. ಆ ಬಾಲಕಿಯರು ಬೆಂಗಳೂರಿನ ಕಾಟನ್ಪೇಟೆಯಲ್ಲಿ ಪತ್ತೆಯಾಗಿದ್ರು. ಬಾಲಕಿಯರನ್ನು ಕರೆತಂದು ಬಸವರಾಜನ್ ವಶದಲ್ಲಿಟ್ಟುಕೊಂಡಿದ್ರು. ಈ ಬಗ್ಗೆ ಹಾಸ್ಟೆಲ್ ವಾರ್ಡನ್ ಬಸವರಾಜನ್ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ನೀಡಿದ್ದಾರೆ ಎಂದು ಎಸ್ಪಿ ಪರಶುರಾಮ್ ತಿಳಿಸಿದ್ದಾರೆ.

ಜು.24ರಂದು ಬಾಲಕಿಯರಿಬ್ಬರು ಚಿತ್ರದುರ್ಗದಿಂದ ಬೆಂಗಳೂರಿಗೆ ಬಂದಿದ್ದರು. ಅಂದು ರಾತ್ರಿ 11.30ರ ಸುಮಾರಿಗೆ ಮೆಜೆಸ್ಟಿಕ್ಗೆ ಬಂದಿಳಿದಿದ್ರು. ಆಟೋ ಡ್ರೈವರ್ ವಿದ್ಯಾರ್ಥಿನಿಯರನ್ನು ಲಗ್ಗೆರೆಗೆ ಕರೆದೊಯ್ದಿದ್ದ. ಮನೆಗೆ ಬಿಟ್ಟುಕೊಳ್ಳದೆ ಬಾಲಕಿ ದೊಡ್ಡಮ್ಮ ಹೊರಗೆ ಹಾಕಿದ್ದರು. ಬಳಿಕ ಆಟೋ ಚಾಲಕ ಇಬ್ಬರನ್ನು ಮತ್ತೆ ಮೆಜೆಸ್ಟಿಕ್ಗೆ ಕರೆತಂದಿದ್ದ. ಪೊಲೀಸ್ ಕಂಟ್ರೋಲ್‌ ರೂಮ್ಗೆ ಕರೆ ಮಾಡಿ ಮಾಹಿತಿ ನೀಡಿದ್ದ. ಸ್ಥಳಕ್ಕೆ ಬಂದ ಪೊಲೀಸರು ಬಾಲಕಿಯರನ್ನು ಠಾಣೆಗೆ ಕರೆದೊಯ್ದಿದ್ದರು. ನಂತರ ಪೊಲೀಸರು ವಿಚಾರಿಸಿದಾಗ ವಾರ್ಡನ್ ಕಿರುಕುಳದಿಂದ ಹೊರಗೆ ಬಂದಿದ್ದಾಗಿ ಬಾಲಕಿಯರು ಹೇಳಿಕೊಂಡಿದ್ದಾರೆ. ಆಗ ಕೂಡಲೇ ಚಿತ್ರದುರ್ಗದ ಮುರುಘಾ ಮಠಕ್ಕೆ ಸಂಪರ್ಕ ಮಾಡಲಾಗಿದೆ. ಮಠದ ಆಡಳಿತಾಧಿಕಾರಿ ಬಸವರಾಜನ್ ಬಂದು ಮಕ್ಕಳನ್ನು ಕರೆದುಕೊಂಡು ಹೋಗುವುದಾಗಿ ಹೇಳಲಾಗಿದೆ. ಆಗ ಪೊಲೀಸರು ಪುರುಷರ ಜೊತೆ ಬಾಲಕಿಯರನ್ನು ಕಳಿಸುವುದಿಲ್ಲ ಅಂತಾ ಹೇಳಿದ್ದಾರೆ. ಹೀಗಾಗಿ ಪತ್ನಿ ಸೌಭಾಗ್ಯ ಜೊತೆ ಬಸವರಾಜನ್ ಬೆಳಗಿನ ಜಾವ 5 ಗಂಟೆ‌ಗೆ ಆಗಮಿಸಿ ಬಾಲಕಿಯರನ್ನು ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಪೊಲೀಸರು ಬಾಲಕಿಯರು ಹಾಗೂ ಬಸವರಾಜನ್ ದಂಪತಿ ಹೇಳಿಕೆ ಪಡೆದಿದ್ದಾರೆ.

ಕಾಟನ್ಪೇಟೆ ಪೊಲೀಸರು ಹೇಳಿಕೆಗಳನ್ನು ಪಡೆದು ಕಳುಹಿಸಿದ್ದಾರೆ. ಬಳಿಕ ಬಸವರಾಜನ್‌ ದಂಪತಿ ಬಾಲಕಿಯರನ್ನು ಬೆಂಗಳೂರಿನಿಂದ ಕರೆದೊಯ್ದಿದ್ದಾರೆ. ಎರಡು ದಿನಗಳ ಕಾಲ ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ. ಅನಾಥಾಲಯ & ಪೋಷಕರಿಗೂ ಒಪ್ಪಿಸದೇ ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ. 2 ದಿನಗಳ ಬಳಿಕ ಬಾಲಕಿಯರ ಬಗ್ಗೆ ಮಾಹಿತಿ ಪಡೆದ ಪೊಲೀಸರು ಬಾಲಕಿಯರ ಸುರಕ್ಷತೆ ಬಗ್ಗೆ ವಿಚಾರಣೆ ಮಾಡಿದ್ದಾರೆ. ಆಗ ಆಡಳಿತಾಧಿಕಾರಿ ಬಸವರಾಜನ್ ಚಿತ್ರದುರ್ಗ ಗ್ರಾಮೀಣ ಠಾಣೆ ಪೊಲೀಸರ ಮೂಲಕ ಬಾಲಕಿಯರನ್ನು ಪೋಷಕರಿಗೆ ಒಪ್ಪಿಸಿದ್ದಾರೆ.

ಚಿತ್ರದುರ್ಗದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:07 pm, Sat, 27 August 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?