AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾ ಹೋಟೆಲ್​ನಲ್ಲಿ ಮಗು ಹತ್ಯೆ ಮಾಡಿ ಸೂಟ್ ಕೇಸ್​ನಲ್ಲಿ ಶವ ರವಾನಿಸುತ್ತಿದ್ದ ಸ್ಟಾರ್ಟ್ ಅಪ್ ಫೌಂಡರ್ & ಸಿಇಓ ಸುಚನಾ ಅರೆಸ್ಟ್

ಗೋವಾದ ಹೋಟೆಲ್​ವೊಂದರಲ್ಲಿ ಮಗುವಿನ ಹತ್ಯೆ ಮಾಡಿದ ಆರೋಪದ ಮೇಲೆ ಸ್ಟಾರ್ಟ್ ಅಪ್ ಫೌಂಡರ್ & ಸಿಇಓ ಆಗಿರುವ ಸುಚನಾ ಸೇಠ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸೂಟ್ ಕೇಸ್ ನಲ್ಲಿ ಮಗುವಿನ ಶವ ಪತ್ತೆಯಾಗಿದೆ. ಈ ಘಟನೆ ಸಂಬಂಧ ಗೋವಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆದಷ್ಟು ಬೇಗ ಆರೋಪಿಯನ್ನು ಗೋವಾ ಪೊಲೀಸರಿಗೆ ಒಪ್ಪಿಸಲಾಗುತ್ತೆ.

ಗೋವಾ ಹೋಟೆಲ್​ನಲ್ಲಿ ಮಗು ಹತ್ಯೆ ಮಾಡಿ ಸೂಟ್ ಕೇಸ್​ನಲ್ಲಿ ಶವ ರವಾನಿಸುತ್ತಿದ್ದ ಸ್ಟಾರ್ಟ್ ಅಪ್ ಫೌಂಡರ್ & ಸಿಇಓ ಸುಚನಾ ಅರೆಸ್ಟ್
ಐಮಂಗಲ ಪೊಲೀಸ್ ಠಾಣೆ
TV9 Web
| Edited By: ಆಯೇಷಾ ಬಾನು|

Updated on:Jan 09, 2024 | 9:58 AM

Share

ಚಿತ್ರದುರ್ಗ, ಜ.09: ಗೋವಾದ ಹೋಟೆಲ್​ವೊಂದರಲ್ಲಿ ಮಗುವಿನ ಹತ್ಯೆ (Murder) ಮಾಡಲಾಗಿದೆ ಎಂಬ ಆರೋಪದ ಮೇಲೆ ಸ್ಟಾರ್ಟ್ ಅಪ್ ಫೌಂಡರ್ & ಸಿಇಓ ಆಗಿರುವ ಸುಚನಾ ಸೇಠ್ (Suchana Seth) ಅವರನ್ನು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗೋವಾದ ಹೋಟೆಲ್​ನಲ್ಲಿ ತಂಗಿದ್ದ ಸುಚನಾ ಸೇಠ್ ಅವರು ಹೋಟೆಲ್​ನಲ್ಲಿ ತಮ್ಮ ಮಗನ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಸುಚನಾ ಸೇಠ್, ಸೂಟ್ ಕೇಸ್​ನಲ್ಲಿ ಮಗುವಿನ ಶವ ರವಾನಿಸಿದ್ದಾರೆ ಎನ್ನಲಾಗುತ್ತಿದೆ. ಸ್ಟಾರ್ಟ್ ಅಪ್ ಫೌಂಡರ್ & ಸಿಇಓ ಸುಚನಾ ಅವರು ಗೋವಾದ ಹೋಟೆಲ್​ನಲ್ಲಿ ಉಳಿದುಕೊಂಡಿದ್ದರು. ಇನ್ನೇನು ಹೋಟೆಲ್​ನಿಂದ ಬೆಂಗಳೂರಿಗೆ ಹೋಗಲು ತಮ್ಮ ಸೂಟ್ ಕೇಸ್ ಹಿಡಿದು ಟ್ಯಾಕ್ಸಿಯತ್ತ ಹೊರಟಾಗ ಹೋಟೆಲ್ ಸಿಬ್ಬಂದಿ ನಿಮ್ಮ ಜೊತೆ ಬಂದಿದ್ದ ಮಗು ಎಲ್ಲಿ ಎಂದು ವಿಚಾರಿಸಿದ್ದಾರೆ. ಆಗ ಸುಚನಾ ಅವರು ಸಂಬಂಧಿಕರ ಮನೆಗೆ ಕಳಿಸಿದ್ದೇನೆಂದು ಸುಳ್ಳು ಹೇಳಿ ಟ್ಯಾಕ್ಸಿ ಮೂಲಕ ಬೆಂಗಳೂರಿನತ್ತ ತೆರಳಿದ್ದಾರೆ. ಈ ವೇಳೆ ಅನುಮಾನಗೊಂಡ ಹೋಟೆಲ್​ನವರು ರೂಮ್ ಸ್ವಚ್ಛಗೊಳಿಸಲು ಹೋಗಿದ್ದು ಅಲ್ಲಿ ರಕ್ತದ ಕಲೆಗಳು ಪತ್ತೆ ಆಗಿವೆ. ಇದರಿಂದ ಬೆಚ್ಚಿಬಿದ್ದ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅಭಿಮಾನಿ ಬೈಕ್​ಗೆ ನಟ ಯಶ್​ ಬೆಂಗಾವಲು ವಾಹನ ಡಿಕ್ಕಿ; ಚಿಕಿತ್ಸೆ ಫಲಿಸದೆ ಯುವಕ ಸಾವು

ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಟ್ಯಾಕ್ಸಿ ಡ್ರೈವರ್

ಇನ್ನು ಹೋಟೆಲ್ ಸಿಬ್ಬಂದಿ ಗೋವಾ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಂತೆ ಪೊಲೀಸರು ನಂಬರ್ ಹುಡುಕಿ ಸುಚನಾ ಪ್ರಯಾಣಿಸುತ್ತಿದ್ದ ಟ್ಯಾಕ್ಸಿ ಡ್ರೈವರ್​ಗೆ ಕರೆ ಮಾಡಿದ್ದಾರೆ. ಹೈವೇ ಬಳಿ ಪೊಲೀಸ್ ಠಾಣೆ ಕಂಡಾಕ್ಷಣ ಕಾರು ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಪೊಲೀಸರ ಸೂಚನೆಯಂತೆ ರಾಷ್ಟ್ರೀಯ ಹೆದ್ದಾರಿ 4ರ ಐಮಂಗಲ ಠಾಣೆ ಬಳಿ ಚಾಲಕ ಟ್ಯಾಕ್ಸಿ ನಿಲ್ಲಿಸಿದ್ದು ಐಮಂಗಲ ಪೊಲೀಸರಿಗೆ ಆರೋಪಿ ಸುಚನಾಳನ್ನು ಒಪ್ಪಿಸಿದ್ದಾರೆ. ಕಾರ್​ನ ಡಿಕ್ಕಿಯಲ್ಲಿದ್ದ ಸೂಟ್ ಕೇಸ್ ನಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ಶವವನ್ನು ಶವಾಗಾರಕ್ಕೆ ಶಿಫ್ಟ್ ಮಾಡಿ ಆರೋಪಿ ಸುಚನಾಳನ್ನ ವಶಕ್ಕೆ ಪಡೆಯಲಾಗಿದೆ. ಈ ಘಟನೆ ಸಂಬಂಧ ಗೋವಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆದಷ್ಟು ಬೇಗ ಆರೋಪಿಯನ್ನು ಗೋವಾ ಪೊಲೀಸರಿಗೆ ಒಪ್ಪಿಸಲಾಗುತ್ತೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:58 am, Tue, 9 January 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ