AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ದೇಶದಲ್ಲೇ ನಂ.1: ಕೋಟೆನಾಡಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಮೀಸಲಾತಿ ವಿಚಾರದಲ್ಲಿ ಮತ್ತೆ ಪ್ರಸ್ತಾಪ ಮಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಸರ್ಕಾರ ಇದ್ದಾಗ ಎಸ್ಟಿ ಸಮುದಾಯಕ್ಕೆ ಮೀಸಲಾತಿ ನೀಡಲಾಗಿದೆ. ನ್ಯಾ.ನಾಗಮೋಹನದಾಸ್ ಸಮಿತಿ ರಚನೆ ಮಾಡಿದ್ದು ನಮ್ಮ ಸರ್ಕಾರ.

ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ದೇಶದಲ್ಲೇ ನಂ.1: ಕೋಟೆನಾಡಲ್ಲಿ ರಾಹುಲ್ ಗಾಂಧಿ ವಾಗ್ದಾಳಿ
ಕಾಂಗ್ರೆಸ್ ನಾಯಕ​​ ರಾಹುಲ್ ಗಾಂಧಿ
TV9 Web
| Edited By: |

Updated on:Oct 10, 2022 | 7:27 PM

Share

ಚಿತ್ರದುರ್ಗ: ದೇಶದಲ್ಲಿ ರಾಜ್ಯ ಬಿಜೆಪಿ ಸರ್ಕಾರ ನಂ1 ಭ್ರಷ್ಟ ಸರ್ಕಾರ. 40 ಪರ್ಸೆಂಟ್ ಕಮಿಷನ್ ಪಡೆಯುವ ಸರ್ಕಾರ ಎಂದು ಕಾಂಗ್ರೆಸ್ ನಾಯಕ​​ ರಾಹುಲ್ ಗಾಂಧಿ ಹೇಳಿದರು. ಕೋಟೆನಾಡಿನ ಹರ್ತಿಕೋಟೆ ಗ್ರಾಮದ ಬಳಿ ಜನರನ್ನುದ್ದೇಶಿಸಿ ಭಾಷಣ ಮಾಡಿದರು. ಬಿಜೆಪಿ ಶಾಸಕರೇ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಹೇಳಿದ್ದಾರೆ. 80 ಲಕ್ಷಕ್ಕೆ ಪಿಎಸ್​ಐ ಹುದ್ದೆ ಮಾರಾಟ ಆಗುತ್ತಿದೆ ಎಂದು ಬಿಜೆಪಿ ಸರ್ಕಾರ ವಿರುದ್ಧ ಗುಡುಗಿದರು. ಭಾರತ್ ಜೋಡೋ ಯಾತ್ರೆ ದ್ವೇಷ ಮತ್ತು ಅಸೂಯೆಯ ವಿರುದ್ಧ ಹೋರಾಟ ಮಾಡಲಾಗುತ್ತಿದೆ. ಐಕ್ಯತೆಯ ಭಾರತವನ್ನೂ ಯಾರೂ ವಿಭಜಿಸಲು ಅಸಾಧ್ಯ. ಪ್ರೀತಿ, ವಿಶ್ವಾಸ ಒಂದು ಕಡೆ ಮತ್ತೊಂದು ಕಡೆ ದ್ವೇಷ ಇದೆ. ಬಸವಣ್ಣ, ನಾರಾಯಣ ಗುರು, ಅಂಬೇಡ್ಕರ್ ಅವರ ತತ್ವ ಸಿದ್ಧಾಂತ ಕಂಡಿದ್ದೇವೆ. ನಿರುದ್ಯೋಗ ಸಮಸ್ಯೆ ದೇಶವನ್ನು ಕಾಡುತ್ತಿದೆ. ಬೆಲೆ ಏರಿಕೆಯಿಂದ ಬಡ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನೇಕ ತಾಯಂದಿರು ಯಾತ್ರೆಯಲ್ಲಿ ಭೇಟಿ ಆಗುತ್ತಾರೆ. ಗ್ಯಾಸ್ ಸಿಲಿಂಡರ್ ದುಬಾರಿ ಆಗಿದ್ದರ ಬಗ್ಗೆ ಕೇಳುತ್ತಾರೆ. ವ್ಯಾಪಾರಿಗಳು ಜಿಎಸ್​ಟಿ ಬಗ್ಗೆ ಕೇಳುತ್ತಾರೆ ಎಂದು ಹೇಳಿದರು.

ಪ್ರತಿಯೊಂದು ಹುದ್ದೆಯನ್ನು ಮಾರಾಟಕ್ಕಿಟ್ಟಿದ್ದಾರೆ

ಸಹಾಯಕ ಪ್ರಾಧ್ಯಾಪಕರು, ಇಂಜಿನಿಯರ್ ಹುದ್ದೆ ಮಾರಾಟಕ್ಕೆ ಇಟ್ಟಿದೆ. ಬೆಲೆ ಏರಿಕೆ, ನಿರುದ್ಯೋಗದಿಂದ ಜನ ಬೇಸತ್ತಿದ್ದಾರೆ. ಕಳೆದ ಎರಡೂವರೆ ವರ್ಷದಿಂದ ಈ‌ ಸರ್ಕಾರ ಯಾವ ಕ್ರಮ ಕೈಗೊಂಡಿಲ್ಲ. ಇನ್ನಾದರೂ ತ್ವರಿತವಾಗಿ ಜಾರಿ ಮಾಡಲಿ. ನಿರುದ್ಯೋಗ, ಹಸಿವು, ಬೆಲೆ ಏರಿಕೆ, ರೈತರು, ಸಣ್ಣಪುಟ್ಟ ಉದ್ದಿಮೆದಾರರು, ಕಾರ್ಮಿಕರ ಹಿತದೃಷ್ಟಿಯಿಂದ ಈ ಯಾತ್ರೆ ನಡೆಸುತ್ತಿದ್ದೇವೆ. ಯಾತ್ರೆ ಉದ್ದಕ್ಕೂ‌ ಎಲ್ಲರೂ ನಷ್ಟದಲ್ಲಿರುವ ಬಗ್ಗೆ ಹೇಳುತ್ತಿದ್ದಾರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯಾವ ಸಹಕಾರ ನೀಡುತ್ತಿಲ್ಲ ಎಂದು ಜನ ಹೇಳುತ್ತಿದ್ದಾರೆ ಎಂದರು.

ನ್ಯಾ.ನಾಗಮೋಹನದಾಸ್ ಸಮಿತಿ ರಚನೆ ಮಾಡಿದ್ದು ನಮ್ಮ ಸರ್ಕಾರ

ಮೀಸಲಾತಿ ವಿಚಾರದಲ್ಲಿ ಮತ್ತೆ ಪ್ರಸ್ತಾಪ ಮಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಸರ್ಕಾರ ಇದ್ದಾಗ ಎಸ್ಟಿ ಸಮುದಾಯಕ್ಕೆ ಮೀಸಲಾತಿ ನೀಡಲಾಗಿದೆ. ನ್ಯಾ.ನಾಗಮೋಹನದಾಸ್ ಸಮಿತಿ ರಚನೆ ಮಾಡಿದ್ದು ನಮ್ಮ ಸರ್ಕಾರ. ನಾಗಮೋಹನದಾಸ್ ಕಮಿಟಿ ವರದಿ ಜಾರಿ ಬರಬೇಕು ಅಂತ ಕಾಂಗ್ರೆಸ್ ಹೋರಾಟ ಮಾಡಿತ್ತು. ಎಸ್.ಟಿ ಮೀಸಲಾತಿ ನೀಡಬೇಕು ಎನ್ನೋದು ಕಾಂಗ್ರೆಸ್ ಆಗ್ರಹವಾಗಿತ್ತು. 3.5% ನಿಂದ 7% ಏರಿಕೆ ಆಗಬೇಕು ಅನ್ನೋದು ಕಾಂಗ್ರೆಸ್ ಆಗ್ರಹವಾಗಿತ್ತು. ಎರಡೂವರೆ ವರ್ಷ ಬಿಜೆಪಿಯವರು ಏನನ್ನೂ ಮಾಡಲಿಲ್ಲ. ನಾಗ ಮೋಹನ್ ದಾಸ್ ವರದಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಕ್ರಿಯೆಯನ್ನೇ ತೋರಿಸಲಿಲ್ಲ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:26 pm, Mon, 10 October 22

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ