AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಸೂಕ್ತ ಶಾಲಾ ಕಟ್ಟಡ ಇಲ್ಲದೆ ವಿದ್ಯಾರ್ಥಿಗಳ ಪರದಾಟ; ಬಯಲಲ್ಲೇ ಪಾಠ ಕೇಳುವ ದುಸ್ಥಿತಿ

ಓಬಳಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅವ್ಯವಸ್ಥೆಗೆ ವಿದ್ಯಾರ್ಥಿಗಳು ಪರದಾಟ ನಡೆಸುವಂತಾಗಿದೆ. ಸಚಿವ ಶ್ರೀರಾಮುಲು ಪ್ರತಿನಿಧಿಸುವ ಕ್ಷೇತ್ರ ವ್ಯಾಪ್ತಿಯ ಈ ಶಾಲೆಯಲ್ಲಿ 276 ವಿದ್ಯಾರ್ಥಿಗಳಿದ್ದಾರೆ. ಆದರೆ ಶಾಲೆ ದುರಸ್ತಿ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ.

ಚಿತ್ರದುರ್ಗ: ಸೂಕ್ತ ಶಾಲಾ ಕಟ್ಟಡ ಇಲ್ಲದೆ ವಿದ್ಯಾರ್ಥಿಗಳ ಪರದಾಟ; ಬಯಲಲ್ಲೇ ಪಾಠ ಕೇಳುವ ದುಸ್ಥಿತಿ
ಓಬಳಾಪುರ ಸರ್ಕಾರಿ ಪ್ರಾಥಮಿಕ ಶಾಲೆ
TV9 Web
| Edited By: |

Updated on:Oct 27, 2021 | 9:12 AM

Share

ಚಿತ್ರದುರ್ಗ: ಸೂಕ್ತ ಶಾಲಾ ಕಟ್ಟಡ ಇಲ್ಲದೆ ವಿದ್ಯಾರ್ಥಿಗಳು ಬಯಲಲ್ಲೇ ಕುಳಿತು ಪಾಠ ಕೇಳುವ ದುಸ್ಥಿತಿ ಓಬಳಾಪುರ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಎದುರಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಓಬಳಾಪುರ ಗ್ರಾಮದ ಈ ಸರ್ಕಾರಿ ಶಾಲೆಯಲ್ಲಿ 8 ಕೊಠಡಿಗಳ ಹಂಚುಗಳಿಗೆ ಹಾನಿಯಾಗಿರುವ ಹಿನ್ನೆಲೆ, ಶಾಲಾ ಆವರಣದಲ್ಲಿರುವ ಮರದ ನೆರಳಿನಲ್ಲಿ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದಾರೆ.

ಓಬಳಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅವ್ಯವಸ್ಥೆಗೆ ವಿದ್ಯಾರ್ಥಿಗಳು ಪರದಾಟ ನಡೆಸುವಂತಾಗಿದೆ. ಸಚಿವ ಶ್ರೀರಾಮುಲು ಪ್ರತಿನಿಧಿಸುವ ಕ್ಷೇತ್ರ ವ್ಯಾಪ್ತಿಯ ಈ ಶಾಲೆಯಲ್ಲಿ 276 ವಿದ್ಯಾರ್ಥಿಗಳಿದ್ದಾರೆ. ಆದರೆ ಶಾಲೆ ದುರಸ್ತಿ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದು, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರು ಕಿಡಿಕಾರಿದ್ದಾರೆ.

130 ವರ್ಷ ಪುರಾತನವಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇದಾಗಿದ್ದು, 8 ಕೊಠಡಿಗಳ ಹಂಚು ಬಿದ್ದಿದ್ದು, ಆತಂಕದಲ್ಲೇ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುವಂತಾಗಿದೆ. 3 ಕೊಠಡಿಗಳಷ್ಟೇ ಸುಸ್ಥಿತಿಯಲ್ಲಿದ್ದು ವಿದ್ಯಭ್ಯಾಸಕ್ಕೆ ಸಮಸ್ಯೆಯಾಗಿದೆ. 8 ಶಿಕ್ಷಕರಿರುವ ಈ ಶಾಲೆಯ ಸ್ಥಿತಿ ಶೋಚನೀಯವಾಗಿದೆ.

school

8 ಕೊಠಡಿಗಳ ಹಂಚುಗಳಿಗೆ ಹಾನಿ

ಇದನ್ನೂ ಓದಿ: ಶಾಲೆಗೆ ಚಕ್ಕರ್ ಕೂಲಿಗೆ ಹಾಜರ್; ಟಿವಿ9 ವರದಿ ಪ್ರಸಾರವಾದ ಬೆನ್ನೆಲೆ ಎಚ್ಚೆತ್ತ ಅಧಿಕಾರಿಗಳು

ಉಡುಪಿ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಂದ ರಾಷ್ಟ್ರಮಟ್ಟದ ಸಾಧನೆ; ಎಲ್​ಪಿಜಿ ಉಳಿತಾಯ ಜಿಎಸ್​ಕೆ ಕಿಟ್​ ತಯಾರಿ

Published On - 8:20 am, Wed, 27 October 21

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!