AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಸೂಕ್ತ ಶಾಲಾ ಕಟ್ಟಡ ಇಲ್ಲದೆ ವಿದ್ಯಾರ್ಥಿಗಳ ಪರದಾಟ; ಬಯಲಲ್ಲೇ ಪಾಠ ಕೇಳುವ ದುಸ್ಥಿತಿ

ಓಬಳಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅವ್ಯವಸ್ಥೆಗೆ ವಿದ್ಯಾರ್ಥಿಗಳು ಪರದಾಟ ನಡೆಸುವಂತಾಗಿದೆ. ಸಚಿವ ಶ್ರೀರಾಮುಲು ಪ್ರತಿನಿಧಿಸುವ ಕ್ಷೇತ್ರ ವ್ಯಾಪ್ತಿಯ ಈ ಶಾಲೆಯಲ್ಲಿ 276 ವಿದ್ಯಾರ್ಥಿಗಳಿದ್ದಾರೆ. ಆದರೆ ಶಾಲೆ ದುರಸ್ತಿ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ.

ಚಿತ್ರದುರ್ಗ: ಸೂಕ್ತ ಶಾಲಾ ಕಟ್ಟಡ ಇಲ್ಲದೆ ವಿದ್ಯಾರ್ಥಿಗಳ ಪರದಾಟ; ಬಯಲಲ್ಲೇ ಪಾಠ ಕೇಳುವ ದುಸ್ಥಿತಿ
ಓಬಳಾಪುರ ಸರ್ಕಾರಿ ಪ್ರಾಥಮಿಕ ಶಾಲೆ
TV9 Web
| Edited By: |

Updated on:Oct 27, 2021 | 9:12 AM

Share

ಚಿತ್ರದುರ್ಗ: ಸೂಕ್ತ ಶಾಲಾ ಕಟ್ಟಡ ಇಲ್ಲದೆ ವಿದ್ಯಾರ್ಥಿಗಳು ಬಯಲಲ್ಲೇ ಕುಳಿತು ಪಾಠ ಕೇಳುವ ದುಸ್ಥಿತಿ ಓಬಳಾಪುರ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಎದುರಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಓಬಳಾಪುರ ಗ್ರಾಮದ ಈ ಸರ್ಕಾರಿ ಶಾಲೆಯಲ್ಲಿ 8 ಕೊಠಡಿಗಳ ಹಂಚುಗಳಿಗೆ ಹಾನಿಯಾಗಿರುವ ಹಿನ್ನೆಲೆ, ಶಾಲಾ ಆವರಣದಲ್ಲಿರುವ ಮರದ ನೆರಳಿನಲ್ಲಿ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದಾರೆ.

ಓಬಳಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅವ್ಯವಸ್ಥೆಗೆ ವಿದ್ಯಾರ್ಥಿಗಳು ಪರದಾಟ ನಡೆಸುವಂತಾಗಿದೆ. ಸಚಿವ ಶ್ರೀರಾಮುಲು ಪ್ರತಿನಿಧಿಸುವ ಕ್ಷೇತ್ರ ವ್ಯಾಪ್ತಿಯ ಈ ಶಾಲೆಯಲ್ಲಿ 276 ವಿದ್ಯಾರ್ಥಿಗಳಿದ್ದಾರೆ. ಆದರೆ ಶಾಲೆ ದುರಸ್ತಿ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದು, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರು ಕಿಡಿಕಾರಿದ್ದಾರೆ.

130 ವರ್ಷ ಪುರಾತನವಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇದಾಗಿದ್ದು, 8 ಕೊಠಡಿಗಳ ಹಂಚು ಬಿದ್ದಿದ್ದು, ಆತಂಕದಲ್ಲೇ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುವಂತಾಗಿದೆ. 3 ಕೊಠಡಿಗಳಷ್ಟೇ ಸುಸ್ಥಿತಿಯಲ್ಲಿದ್ದು ವಿದ್ಯಭ್ಯಾಸಕ್ಕೆ ಸಮಸ್ಯೆಯಾಗಿದೆ. 8 ಶಿಕ್ಷಕರಿರುವ ಈ ಶಾಲೆಯ ಸ್ಥಿತಿ ಶೋಚನೀಯವಾಗಿದೆ.

school

8 ಕೊಠಡಿಗಳ ಹಂಚುಗಳಿಗೆ ಹಾನಿ

ಇದನ್ನೂ ಓದಿ: ಶಾಲೆಗೆ ಚಕ್ಕರ್ ಕೂಲಿಗೆ ಹಾಜರ್; ಟಿವಿ9 ವರದಿ ಪ್ರಸಾರವಾದ ಬೆನ್ನೆಲೆ ಎಚ್ಚೆತ್ತ ಅಧಿಕಾರಿಗಳು

ಉಡುಪಿ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಂದ ರಾಷ್ಟ್ರಮಟ್ಟದ ಸಾಧನೆ; ಎಲ್​ಪಿಜಿ ಉಳಿತಾಯ ಜಿಎಸ್​ಕೆ ಕಿಟ್​ ತಯಾರಿ

Published On - 8:20 am, Wed, 27 October 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ